AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

58 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕುಡುಗೋಲಿನಿಂದ ಹತ್ಯೆ ಮಾಡಿದ 16 ವರ್ಷದ ಬಾಲಕ

16 ವರ್ಷದ ಬಾಲಕನೊಬ್ಬ 58 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕುಡುಗೋಲಿನಿಂದ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಹನುಮಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಕೈಲಾಸಪುರಿ ಗ್ರಾಮದಲ್ಲಿ ಜನವರಿ 30ರ ರಾತ್ರಿ ಘಟನೆ ನಡೆದಿದೆ.

58 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕುಡುಗೋಲಿನಿಂದ ಹತ್ಯೆ ಮಾಡಿದ 16 ವರ್ಷದ ಬಾಲಕ
ಪ್ರಾತಿನಿಧಿಕ ಚಿತ್ರ
ನಯನಾ ರಾಜೀವ್
|

Updated on: Feb 05, 2023 | 3:47 PM

Share

16 ವರ್ಷದ ಬಾಲಕನೊಬ್ಬ 58 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕುಡುಗೋಲಿನಿಂದ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಹನುಮಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಕೈಲಾಸಪುರಿ ಗ್ರಾಮದಲ್ಲಿ ಜನವರಿ 30ರ ರಾತ್ರಿ ಘಟನೆ ನಡೆದಿದೆ. ಆರೋಪಿಯು ಮಹಿಳೆಯ ಬಾಯಿಗೆ ಪ್ಲಾಸ್ಟಿಕ್ ಚೀಲ ಹಾಗೂ ಬಟ್ಟೆಯನ್ನು ತುಂಬಿ, ಆಕೆ ವಾಸಿಸುತ್ತಿದ್ದ ಕಟ್ಟಡದ ನಿರ್ಮಾಣ ಹಂತದ ಭಾಗಕ್ಕೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಾಲಕ ಮಹಿಳೆಯ ತಲೆ ಮತ್ತು ದೇಹದ ಇತರೆ ಭಾಗಗಳ ಮೇಲೆ ಕುಡುಗೋಲಿನಿಂದ ಹೊಡೆದಿದ್ದಾನೆ ಮತ್ತು ಆಕೆಯ ಖಾಸಗಿ ಭಾಗಗಳನ್ನು ಗಾಯಗೊಳಿಸಿದ್ದಾನೆ.

ಫೆಬ್ರವರಿ 1 ರಂದು ಮಹಿಳೆಯ ಶವವು ನಿರ್ಮಾಣ ಹಂತದಲ್ಲಿರುವ ಕಟ್ಟಡದ ಬಳಿ ಪತ್ತೆಯಾಗಿತ್ತು. ಪೊಲೀಸರು ಹಾಗೂ ಫೊರೆನ್ಸಿಕ್ ತಂಡವು ಸ್ಥಳಕ್ಕೆ ಆಗಮಿಸಿತ್ತು, ಸಂತ್ರಸ್ತೆಯ ನೆರೆಹೊರೆಯಲ್ಲಿ ವಾಸಿಸುತ್ತಿದ್ದ ಆರೋಪಿ ಕೃತ್ಯ ಎಸಗಿದ್ದಾನೆ ಎಂಬುದು ತಿಳಿದುಬಂದಿದೆ. ಎರಡು ವರ್ಷಗಳ ಹಿಂದೆ ಟಿವಿ ನೋಡಲು ಮನೆಗೆ ಬರುತ್ತಿದ್ದ ಬಾಲಕನ ಮೇಲೆ ಮೊಬೈಲ್ ಕಳ್ಳತನದ ಆರೋಪ ಮಾಡಿದ್ದರು.

ಮತ್ತಷ್ಟು ಓದಿ: Crime News: ಪೊಲೀಸ್ ಜೀಪ್​ನಲ್ಲಿ ಕರೆದೊಯ್ಯುವಾಗ ಸಬ್ ಇನ್​ಸ್ಪೆಕ್ಟರ್ ಕಿವಿ ಕಚ್ಚಿದ ಆಸಾಮಿ!

ಜನವರಿ 30 ರಂದು ಸಂತ್ರಸ್ತೆಯ ಮಗ ಹಾಗೂ ಪತಿ ಹೊರಗೆ ಹೋಗಿದ್ದಾಗ ಹುಡುಗ ಆಕೆಯ ಮನೆಗೆ ನುಗ್ಗಿದ್ದಾನೆ. ಮಂಚದ ಮೇಲೆ ಮಲಗಿದ್ದ ಮಹಿಳೆಯ ಮೇಲೆ ಆರೋಪಿ ಬಲವಂತವಾಗಿ ಹಲ್ಲೆ ನಡೆಸಿದ್ದಾನೆ, ಮೊದಲು ಬಾಯಿ ಕಟ್ಟಿ ನಂತರ ಹಗ್ಗ ಮತ್ತು ತಂತಿಯ ಸಹಾಯದಿಂದ ಮಹಿಳೆಯ ಮುಖದ ಮೇಲೆ ಪ್ಲಾಸ್ಟಿಕ್ ಚೀಲ ಕಟ್ಟಿ ಕರೆದೊಯ್ದಿದ್ದಾನೆ.

ಬಾಲಕ ಮಹಿಳೆಯನ್ನು ಪದೇ ಪದೇ ಥಳಿಸಿದ್ದ ಮತ್ತು ಪ್ರಜ್ಞೆ ತಪ್ಪಿದಾಗ ಆಕೆಯ ಮೇಲೆ ಅತ್ಯಾಚಾರ ವೆಸಗಿದ್ದಾನೆ. ಆರೋಪಿಗಳು ಸಂತ್ರಸ್ತೆಯ ತಲೆ, ಕೈಗಳು, ಕುತ್ತಿಗೆ ಮತ್ತು ಎದೆಯ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾರೆ. ಬಳಿಕ ಮಹಿಳೆಯ ಮನೆಯಲ್ಲಿಟ್ಟಿದ್ದ 1 ಸಾವಿರ ರೂ ನಗದು ಹಾಗೂ ಚಿನ್ನಾಭರಣಗಳೊಂದಿಗೆ ಬಾಲಕ ಪರಾರಿಯಾಗಿದ್ದ, ಇದೀಗ ಪೊಲೀಸರ ಮುಂದೆ ಬಾಲಕ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಬಾಲಕನನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ