AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

58 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕುಡುಗೋಲಿನಿಂದ ಹತ್ಯೆ ಮಾಡಿದ 16 ವರ್ಷದ ಬಾಲಕ

16 ವರ್ಷದ ಬಾಲಕನೊಬ್ಬ 58 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕುಡುಗೋಲಿನಿಂದ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಹನುಮಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಕೈಲಾಸಪುರಿ ಗ್ರಾಮದಲ್ಲಿ ಜನವರಿ 30ರ ರಾತ್ರಿ ಘಟನೆ ನಡೆದಿದೆ.

58 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕುಡುಗೋಲಿನಿಂದ ಹತ್ಯೆ ಮಾಡಿದ 16 ವರ್ಷದ ಬಾಲಕ
ಪ್ರಾತಿನಿಧಿಕ ಚಿತ್ರ
ನಯನಾ ರಾಜೀವ್
|

Updated on: Feb 05, 2023 | 3:47 PM

Share

16 ವರ್ಷದ ಬಾಲಕನೊಬ್ಬ 58 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕುಡುಗೋಲಿನಿಂದ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಹನುಮಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಕೈಲಾಸಪುರಿ ಗ್ರಾಮದಲ್ಲಿ ಜನವರಿ 30ರ ರಾತ್ರಿ ಘಟನೆ ನಡೆದಿದೆ. ಆರೋಪಿಯು ಮಹಿಳೆಯ ಬಾಯಿಗೆ ಪ್ಲಾಸ್ಟಿಕ್ ಚೀಲ ಹಾಗೂ ಬಟ್ಟೆಯನ್ನು ತುಂಬಿ, ಆಕೆ ವಾಸಿಸುತ್ತಿದ್ದ ಕಟ್ಟಡದ ನಿರ್ಮಾಣ ಹಂತದ ಭಾಗಕ್ಕೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಾಲಕ ಮಹಿಳೆಯ ತಲೆ ಮತ್ತು ದೇಹದ ಇತರೆ ಭಾಗಗಳ ಮೇಲೆ ಕುಡುಗೋಲಿನಿಂದ ಹೊಡೆದಿದ್ದಾನೆ ಮತ್ತು ಆಕೆಯ ಖಾಸಗಿ ಭಾಗಗಳನ್ನು ಗಾಯಗೊಳಿಸಿದ್ದಾನೆ.

ಫೆಬ್ರವರಿ 1 ರಂದು ಮಹಿಳೆಯ ಶವವು ನಿರ್ಮಾಣ ಹಂತದಲ್ಲಿರುವ ಕಟ್ಟಡದ ಬಳಿ ಪತ್ತೆಯಾಗಿತ್ತು. ಪೊಲೀಸರು ಹಾಗೂ ಫೊರೆನ್ಸಿಕ್ ತಂಡವು ಸ್ಥಳಕ್ಕೆ ಆಗಮಿಸಿತ್ತು, ಸಂತ್ರಸ್ತೆಯ ನೆರೆಹೊರೆಯಲ್ಲಿ ವಾಸಿಸುತ್ತಿದ್ದ ಆರೋಪಿ ಕೃತ್ಯ ಎಸಗಿದ್ದಾನೆ ಎಂಬುದು ತಿಳಿದುಬಂದಿದೆ. ಎರಡು ವರ್ಷಗಳ ಹಿಂದೆ ಟಿವಿ ನೋಡಲು ಮನೆಗೆ ಬರುತ್ತಿದ್ದ ಬಾಲಕನ ಮೇಲೆ ಮೊಬೈಲ್ ಕಳ್ಳತನದ ಆರೋಪ ಮಾಡಿದ್ದರು.

ಮತ್ತಷ್ಟು ಓದಿ: Crime News: ಪೊಲೀಸ್ ಜೀಪ್​ನಲ್ಲಿ ಕರೆದೊಯ್ಯುವಾಗ ಸಬ್ ಇನ್​ಸ್ಪೆಕ್ಟರ್ ಕಿವಿ ಕಚ್ಚಿದ ಆಸಾಮಿ!

ಜನವರಿ 30 ರಂದು ಸಂತ್ರಸ್ತೆಯ ಮಗ ಹಾಗೂ ಪತಿ ಹೊರಗೆ ಹೋಗಿದ್ದಾಗ ಹುಡುಗ ಆಕೆಯ ಮನೆಗೆ ನುಗ್ಗಿದ್ದಾನೆ. ಮಂಚದ ಮೇಲೆ ಮಲಗಿದ್ದ ಮಹಿಳೆಯ ಮೇಲೆ ಆರೋಪಿ ಬಲವಂತವಾಗಿ ಹಲ್ಲೆ ನಡೆಸಿದ್ದಾನೆ, ಮೊದಲು ಬಾಯಿ ಕಟ್ಟಿ ನಂತರ ಹಗ್ಗ ಮತ್ತು ತಂತಿಯ ಸಹಾಯದಿಂದ ಮಹಿಳೆಯ ಮುಖದ ಮೇಲೆ ಪ್ಲಾಸ್ಟಿಕ್ ಚೀಲ ಕಟ್ಟಿ ಕರೆದೊಯ್ದಿದ್ದಾನೆ.

ಬಾಲಕ ಮಹಿಳೆಯನ್ನು ಪದೇ ಪದೇ ಥಳಿಸಿದ್ದ ಮತ್ತು ಪ್ರಜ್ಞೆ ತಪ್ಪಿದಾಗ ಆಕೆಯ ಮೇಲೆ ಅತ್ಯಾಚಾರ ವೆಸಗಿದ್ದಾನೆ. ಆರೋಪಿಗಳು ಸಂತ್ರಸ್ತೆಯ ತಲೆ, ಕೈಗಳು, ಕುತ್ತಿಗೆ ಮತ್ತು ಎದೆಯ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾರೆ. ಬಳಿಕ ಮಹಿಳೆಯ ಮನೆಯಲ್ಲಿಟ್ಟಿದ್ದ 1 ಸಾವಿರ ರೂ ನಗದು ಹಾಗೂ ಚಿನ್ನಾಭರಣಗಳೊಂದಿಗೆ ಬಾಲಕ ಪರಾರಿಯಾಗಿದ್ದ, ಇದೀಗ ಪೊಲೀಸರ ಮುಂದೆ ಬಾಲಕ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಬಾಲಕನನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ