AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹ್ರೇನ್​ಗೆ ಪರಾರಿಯಾಗಲು ಯತ್ನಿಸುತ್ತಿದ್ದ ಕುಖ್ಯಾತಿ ಕಳ್ಳರನ್ನ ಮುಂಬೈ ಏರ್​ಪೋರ್ಟ್​ನಲ್ಲಿ ಹಿಡಿದ ಮಾಗಡಿ ಪೊಲೀಸರು

ನಕಲಿ ಪಾಸ್‌ಪೋರ್ಟ್‌ಗಳನ್ನು ಬಳಸಿಕೊಂಡು ಬಹ್ರೇನ್‌ಗೆ ಪರಾರಿಯಾಗಲು ಯತ್ನಿಸುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಮಾಗಡಿ ಪೊಲೀಸರು ಬಂಧಿಸಿದ್ದಾರೆ. ಕಳ್ಳತನದ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈ ಆರೋಪಿಗಳಿಂದ 3 ಕೋಟಿ 60 ಲಕ್ಷ ರೂ. ಮೌಲ್ಯದ ಚಿನ್ನ, 11 ಲಕ್ಷ ರೂ. ನಗದು ಮತ್ತು ಒಂದು ಬಂದೂಕು ವಶಪಡಿಸಿಕೊಳ್ಳಲಾಗಿದೆ.

ಬಹ್ರೇನ್​ಗೆ ಪರಾರಿಯಾಗಲು ಯತ್ನಿಸುತ್ತಿದ್ದ ಕುಖ್ಯಾತಿ ಕಳ್ಳರನ್ನ ಮುಂಬೈ ಏರ್​ಪೋರ್ಟ್​ನಲ್ಲಿ ಹಿಡಿದ ಮಾಗಡಿ ಪೊಲೀಸರು
ಬಹ್ರೇನ್​ಗೆ ಪರಾರಿಯಾಗಲು ಯತ್ನಿಸುತ್ತಿದ್ದ ಕುಖ್ಯಾತಿ ಕಳ್ಳರನ್ನ ಮುಂಬೈ ಏರ್​ಪೋರ್ಟ್​ನಲ್ಲಿ ಹಿಡಿದ ಮಾಗಡಿ ಪೊಲೀಸರು
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Nov 04, 2024 | 7:45 PM

Share

ರಾಮನಗರ, ನವೆಂಬರ್​ 04: ನಕಲಿ ಪಾಸ್​​ಪೋರ್ಟ್ ಬಳಸಿ ಬಹ್ರೇನ್​ಗೆ (Bahrain) ಪರಾರಿಯಾಗಲು ಯತ್ನಿಸುತ್ತಿದ್ದ ಕುಖ್ಯಾತಿ ಕಳ್ಳರಿಬ್ಬರನ್ನು ಮಾಗಡಿ ಪೊಲೀಸರು ಮುಂಬೈ ಏರ್​ಪೋರ್ಟ್ ಬಳಿ ಬಂಧಿಸಿದ್ದಾರೆ. ಕಡೂರು ಸಾದಿಕ್(40), ಹಮ್ಜಾ ಅಲಿಯಾಸ್ ಅಮೀರ್(39)‌ ಬಂಧಿತರು. ಜಿಲ್ಲೆಯ ನಾಲ್ವರು ಇನ್ಸ್​ಪೆಕ್ಟರ್​ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿ ಆರೋಪಿಗಳನ್ನು ಹಿಡಿಯಲಾಗಿದೆ. ಸದ್ಯ ಮಾಗಡಿ ಪೊಲೀಸರ ಕಾರ್ಯಾಚರಣೆಗೆ ಮುಂಬೈ ಪೊಲೀಸರು ಶಾಕ್ ಆಗಿದ್ದಾರೆ.

3 ಕೋಟಿ 60 ಲಕ್ಷ ರೂ. ಮೌಲ್ಯದ ಚಿನ್ನ ಜಪ್ತಿ 

ಬಂಧಿತರಿಬ್ಬರು ಸುಮಾರು 10 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ನಕಲಿ ಪಾಸ್​​ಪೋರ್ಟ್ ಬಳಸಿ ಏರ್​ಪೋರ್ಟ್​ ಪೊಲೀಸರನ್ನೇ ಯಾಮಾರಿಸಿದ್ದರು. ಇಬ್ಬರು ಆರೋಪಿಗಳ ಬಳಿ 1 ಗನ್ ಹಾಗೂ 5 ಜೀವಂತ ಗುಂಡು, 3 ಕೋಟಿ 60 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ 11,49,000 ನಗದು ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ರಾಜಸ್ಥಾನದಿಂದ ವಿಮಾನದಲ್ಲಿ ಬೆಂಗಳೂರಿಗೆ ಬಂದು ಕಾರು ಕದಿಯುವ ಖದೀಮರ ಬಂಧನ

ಸೆ.22ರಂದು ಮಾಗಡಿ ಪಟ್ಟಣದ ದೇವಸ್ಥಾನವೊಂದರಲ್ಲಿ ಕಳ್ಳತನ ನಡೆದಿತ್ತು. ದೇವಸ್ಥಾನದಲ್ಲಿದ್ದ 5 ಕೆಜಿ ಬಂಗಾರ ದೋಚಿಕೊಂಡು ಪರಾರಿಯಾಗಿದ್ದರು. ಬ್ಯಾಡಗಿ ಶಾಸಕರ ನಿವಾಸದಲ್ಲೂ ಬಂಧಿತ ಆರೋಪಿಗಳು ಕನ್ನ ಹಾಕಿದ್ದರು.

ಆರೋಪಿಗಳ ಸೆರೆಗೆ ಎಸ್​​ಪಿ ಕಾರ್ತಿಕ್ ರೆಡ್ಡಿ 4 ತಂಡಗಳನ್ನು ರಚಿಸಿದ್ದರು. ಜಿಲ್ಲೆಯ ಮಾಗಡಿ ಠಾಣೆಯ ಇನ್ಸ್​ಪೆಕ್ಟರ್​ ಜಿ.ವೈ.ಗಿರಿರಾಜ್​, ಕುಂಬಳಗೋಡು ಇನ್ಸ್​ಪೆಕ್ಟರ್ ಮಂಜುನಾಥ್, ತಾವರಗೆರೆ ಪಿಐ​ ಮೋಹನ್, ಕುದೂರು ಠಾಣೆಯ ಇನ್ಸ್​ಪೆಕ್ಟರ್ ನವೀನ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ಕಾರ್ಯಾಚರಣೆಯಲ್ಲಿ ಒಟ್ಟು 25 ಪೊಲೀಸ್​ ಸಿಬ್ಬಂದಿ ಭಾಗಿಯಾಗಿದ್ದರು.

ಇದನ್ನೂ ಓದಿ: ಅಮೆಜಾನ್ ಕಂಪನಿಗೆ 30 ಕೋಟಿ ರೂ. ವಂಚನೆ: ಮಂಗಳೂರಿನಲ್ಲಿ ಇಬ್ಬರ ಬಂಧನ

ಕಳೆದ 1 ತಿಂಗಳಿಂದ ಇಬ್ಬರು ಕಳ್ಳರನ್ನು ಪೊಲೀಸರು ಚೇಸ್​ ಮಾಡಿದ್ದಾರೆ. ಬಿಎಂಡಬ್ಲ್ಯು, ಸ್ಕೋಡಾ, ಎಸ್​​ಯುವಿ ಕಾರು ಖರೀದಿಸಿದ್ದರು. ಕಾರುಗಳ ನಂಬರ್ ಪ್ಲೇಟ್ ಬದಲಾಯಿಸಿ ತಲೆಮರೆಸಿಕೊಂಡಿದ್ದರು. ಮುಂಬೈ, ಗೋವಾ, ರಾಜಸ್ಥಾನ, ಮಹಾರಾಷ್ಟ್ರ ಸೇರಿ ಅನೇಕ ಕಡೆ ಸುತ್ತಾಟ ನಡೆಸಿದ್ದರು. ಬಳಿಕ ಬಹ್ರೇನ್​ ದೇಶಕ್ಕೆ ತೆರಳಲು ಮುಂದಾಗಿದ್ದಾರೆ.

ರಾಮನಗರ ಎಸ್​ಪಿ ಕಾರ್ತಿಕ್ ರೆಡ್ಡಿ 20 ಸಾವಿರ ಬಹುಮಾನ ಘೋಷಣೆ

ಪೊಲೀಸರನ್ನು ಕಂಡು ಗನ್​ ತೆಗೆಯಲು ಯತ್ನಿಸಿದ್ದ ವೇಳೆ ಇಬ್ಬರ ಬಂಧನ ಮಾಡಲಾಗಿದೆ. ಕಳ್ಳರ ಹಿಸ್ಟರಿ ನೋಡಿ ಮುಂಬೈ ಪೊಲೀಸರಿಂದ ಏರ್​ಪೋರ್ಟ್​ನಲ್ಲಿ ತಪಾಸಣೆ ಮಾಡಲಾಗಿದ್ದು, ಈ ಹಿಂದೆ ಹಲವು ಬಾರಿ ಬೇರೆ ಬೇರೆ ದೇಶಗಳಿಗೆ ತೆರಳಿದ್ದು ಗೊತ್ತಾಗಿದೆ. ಸದ್ಯ ಕಳ್ಳರನ್ನು ಸೆರೆಹಿಡಿದ ಪೊಲೀಸರಿಗೆ ರಾಮನಗರ ಎಸ್​ಪಿ ಕಾರ್ತಿಕ್ ರೆಡ್ಡಿ 20 ಸಾವಿರ ಬಹುಮಾನ ಘೋಷಣೆ ಮಾಡಿದ್ದಾರೆ. ವಿಶೇಷ ಪ್ರಕರಣ ಎಂದು ಪರಿಗಣಿಸಿ ಸನ್ಮಾನ ಮಾಡುವಂತೆ ಎಸ್​ಪಿಯಿಂದ ಪತ್ರ ಬರೆಯಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?