AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾರದ‌ಪುಡಿ ಎರಚಿ ದರೋಡೆ ಮಾಡಿದ್ದವರ ಬಂಧನ

ಬೆಂಗಳೂರು: ಒಂಟಿ ಮಹಿಳೆಯನ್ನು ಗುರಿಯಾಗಿಸಿ‌ ಚಾಕು ತೋರಿಸಿ‌, ಖಾರದ‌ಪುಡಿ ಎರಚಿ ದರೋಡೆ ಮಾಡಿದ್ದ ಆರೋಪಿಗಳನ್ನು ಬೆಂಗಳೂರಿನ ಮಹದೇವಪುರ ಪೊಲೀಸರು ಬಂಧಿಸಿದ್ದಾರೆ. ದರೋಡೆಕೋರರಾದ ಹರಿಕೃಷ್ಣ, ಚೇತನ್ ಕುಮಾರ್ ಬಂಧಿತ ಆರೋಪಿಗಳು. ಇವರು ನ.14ರಂದು ಮಹದೇವಪುರದ ರಂಗನಾಥ್​ ಲೇಔಟ್​ನಲ್ಲಿ ದರೋಡೆ ಮಾಡಿದ್ದರು. ಮನೆಯ ಮಾಲಿಕ ನಾಗೇಶ್ ಮನೆಯಿಂದ ಹೊರಹೋದ ಸಂದರ್ಭದಲ್ಲಿ ಮನೆಗೆ ನುಗ್ಗಿದ ಖದೀಮರು ನಾಗೇಶ್ ಅವರ ಹೆಂಡತಿಗೆ ಚಾಕು ತೋರಿಸಿ, ಖಾರದಪಡಿ ಎರಚಿ ದರೋಡೆ ಮಾಡಿದ್ದಾರೆ. ಮನೆಯಲ್ಲಿದ್ದ ಚಿನ್ನಾಭರಣ, ಮನೆ ಮುಂದೆ ನಿಲ್ಲಿಸಿದ್ದ ಇನ್ನೋವಾ ಕಾರನ್ನೂ ಕದ್ದೊಯ್ದಿದ್ದಾರೆ. ಆರೋಪಿಯಾಗಿರುವ […]

ಖಾರದ‌ಪುಡಿ ಎರಚಿ ದರೋಡೆ ಮಾಡಿದ್ದವರ ಬಂಧನ
ಸಾಧು ಶ್ರೀನಾಥ್​
|

Updated on: Nov 16, 2019 | 5:06 PM

Share

ಬೆಂಗಳೂರು: ಒಂಟಿ ಮಹಿಳೆಯನ್ನು ಗುರಿಯಾಗಿಸಿ‌ ಚಾಕು ತೋರಿಸಿ‌, ಖಾರದ‌ಪುಡಿ ಎರಚಿ ದರೋಡೆ ಮಾಡಿದ್ದ ಆರೋಪಿಗಳನ್ನು ಬೆಂಗಳೂರಿನ ಮಹದೇವಪುರ ಪೊಲೀಸರು ಬಂಧಿಸಿದ್ದಾರೆ.

ದರೋಡೆಕೋರರಾದ ಹರಿಕೃಷ್ಣ, ಚೇತನ್ ಕುಮಾರ್ ಬಂಧಿತ ಆರೋಪಿಗಳು. ಇವರು ನ.14ರಂದು ಮಹದೇವಪುರದ ರಂಗನಾಥ್​ ಲೇಔಟ್​ನಲ್ಲಿ ದರೋಡೆ ಮಾಡಿದ್ದರು. ಮನೆಯ ಮಾಲಿಕ ನಾಗೇಶ್ ಮನೆಯಿಂದ ಹೊರಹೋದ ಸಂದರ್ಭದಲ್ಲಿ ಮನೆಗೆ ನುಗ್ಗಿದ ಖದೀಮರು ನಾಗೇಶ್ ಅವರ ಹೆಂಡತಿಗೆ ಚಾಕು ತೋರಿಸಿ, ಖಾರದಪಡಿ ಎರಚಿ ದರೋಡೆ ಮಾಡಿದ್ದಾರೆ.

ಮನೆಯಲ್ಲಿದ್ದ ಚಿನ್ನಾಭರಣ, ಮನೆ ಮುಂದೆ ನಿಲ್ಲಿಸಿದ್ದ ಇನ್ನೋವಾ ಕಾರನ್ನೂ ಕದ್ದೊಯ್ದಿದ್ದಾರೆ. ಆರೋಪಿಯಾಗಿರುವ ಹರಿಕೃಷ್ಣ ನಾಗೇಶ್​​ ಅವರ ದೂರದ ಸಂಬಂಧಿ. ಈ ಹಿಂದೆ ಬ್ಯುಸಿನೆಸ್ ಮಾಡಲು ನಾಗೇಶ್‌ಬಳಿ ಹಣ ಕೇಳಿದ್ದ ಆದರೆ ನಾಗೇಶ್ ಹರಿಕೃಷ್ಣನಿಗೆ ಹಣ ನೀಡಿರಲಿಲ್ಲ. ಇದೇ ಕಾರಣಕ್ಕಾಗಿ ದರೋಡೆ ಮಾಡಿದ್ದಾರೆ.

ಸದ್ಯ ಮಹದೇವಪುರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಿಂದ ಚಿನ್ನಾಭರಣ, 25 ಸಾವಿರ ನಗದು, ಬೈಕ್​​, ಇನ್ನೋವಾ ಕಾರು ವಶಕ್ಕೆ ಪಡೆದಿದ್ದಾರೆ.

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ