AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಒಣ ದ್ರಾಕ್ಷಿಯನ್ನು ತಮಗೆ ಮಾರಾಟ ಮಾಡದ ಹಿನ್ನೆಲೆ ಗುಂಪೊಂದು ರೈತನ ಮೇಲೆ ಹಲ್ಲೆ

ಒಣ ದ್ರಾಕ್ಷಿಯನ್ನು ತಮಗೆ ಮಾರಾಟ ಮಾಡದ ಹಿನ್ನೆಲೆ ಮಹಾರಾಷ್ಟ್ರದ ಥಾಸಗಾವ ಮೂಲದ 8 ಜನರ ಗುಂಪೊಂದು ಮಾಜಿ ಯೋಧ, ರೈತನ ಮೇಲೆ ಹಲ್ಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ತೊದಲಬಾಗಿ ಗ್ರಾಮದಲ್ಲಿ ನಡೆದಿದೆ.

ಬಾಗಲಕೋಟೆ: ಒಣ ದ್ರಾಕ್ಷಿಯನ್ನು ತಮಗೆ ಮಾರಾಟ ಮಾಡದ ಹಿನ್ನೆಲೆ ಗುಂಪೊಂದು ರೈತನ ಮೇಲೆ ಹಲ್ಲೆ
ಗಲಾಟೆ ನಡೆದ ಸ್ಥಳ
Follow us
ವಿವೇಕ ಬಿರಾದಾರ
|

Updated on:Mar 27, 2023 | 10:00 PM

ಬಾಗಲಕೋಟೆ: ಒಣ ದ್ರಾಕ್ಷಿಯನ್ನು (Dry Grapes) ತಮಗೆ ಮಾರಾಟ ಮಾಡದ ಹಿನ್ನೆಲೆ ಮಹಾರಾಷ್ಟ್ರದ (Maharashtra) ಥಾಸಗಾವ ಮೂಲದ 8 ಜನರ ಗುಂಪೊಂದು ಮಾಜಿ ಯೋಧ (Ex- Servicemen), ರೈತನ ಮೇಲೆ ಹಲ್ಲೆ ಮಾಡಿರುವ ಘಟನೆ ಬಾಗಲಕೋಟೆ (Bagalkote) ಜಿಲ್ಲೆಯ ಜಮಖಂಡಿ (Jamakandi) ತಾಲ್ಲೂಕಿನ ತೊದಲಬಾಗಿ ಗ್ರಾಮದಲ್ಲಿ ನಡೆದಿದೆ. ಮಾಜಿ ಯೋಧ ಶ್ರೀಧರ ಕಾಸೇರ ಹಲ್ಲೆಗೊಳಗಾದ ರೈತ. ರೈತ ಶ್ರೀಧರ ಕಾಸೇರನನ್ನು ಜಮಖಂಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶ್ರೀಧರ ಕಾಸೇರ ದ್ರಾಕ್ಷಿ ಬೆಳೆಗಾರ ಹಾಗೂ ದ್ರಾಕ್ಷಿ ಘಟಕದ ಮಾಲಿಕರಾಗಿದ್ದಾರೆ. ಒಣ ದ್ರಾಕ್ಷಿಯನ್ನು ಪ್ರತಿ ವರ್ಷ ಮಹಾರಾಷ್ಟ್ರದ ಥಾಸಗಾವನ ಅನಿಲ ಪಾಟಿಲ್​ ವ್ಯಾಪಾರಸ್ಥನಿಗೆ ಒಣ ದ್ರಾಕ್ಷಿ ಮಾರಾಟ ಮಾಡುತ್ತಿದ್ದರು. ಜೊತೆಗೆ ಇತರೆ ರೈತರಿಂದಲೂ ಒಣ ದ್ರಾಕ್ಷಿಯನ್ನು ಖರೀದಿಸಿ ಅನಿಲ ಪಾಟಿಲ್ ಅವರಿಗೆ ಮಾರುತ್ತಿದ್ದರು. ಆದರೆ ಈ ವರ್ಷ ಬೇರೆ ಕಡೆ ಒಣ ದ್ರಾಕ್ಷಿಯನ್ನು ಮಾರಾಟ ಮಾಡಿದ್ದರು.

ಇದನ್ನೂ ಓದಿ: ಚಿಕ್ಕನಾಯಕನಹಳ್ಳಿ ತಾಲ್ಲೂಕು ಅಣೆಕಟ್ಟಿ ಕೆರೆಯಲ್ಲಿ ಗರ್ಭಿಣಿ ಶವ ಪತ್ತೆ

ಇದರಿಂದ ಕೋಪಗೊಂಡ ಅನಿಲ್​ ಪಾಟೀಲ್​ ಮತ್ತು ಆತನ 7 ಜನರ ಗುಂಪು ಕಾರಿನಲ್ಲಿ ತೊದಲಬಾಗಿ ಗ್ರಾಮಕ್ಕೆ ಬಂದು ಗಲಾಟೆ ಮಾಡಿದೆ. ನಂತರ ಕೋಲು, ರಾಡ್​​ನಿಂದ ಹಲ್ಲೆ ಮಾಡಿದ್ದಾರೆ. ಬಳಿಕ ಗಾಳಿಯಲ್ಲಿ 2 ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಇದರಿಂದ ಶ್ರೀಧರ ಕಾಸೇರಗೆ ತಲೆ ಹಾಗೂ ಮುಖದ‌ ಮೇಲೆ ಗಾಯಗಳಾಗಿದ್ದು, ಕಾಸೇರ ಅವರನ್ನು ಸ್ಥಳಿಯರು ಕೂಡಲೆ ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ದಾಖಲಸಿದ್ದಾರೆ. ಸಾವಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:28 pm, Mon, 27 March 23

ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು