AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಜಗಳ ಅತಿರೇಕಕ್ಕೇರಿ ಗೆಳತಿ ಕಾಲಿನ ಮೇಲೆ ಕಾರು ಹತ್ತಿಸಿದ ಪ್ರಿಯಕರ

ಜಗಳ ಅತಿರೇಕಕ್ಕೆ ಹೋಗಿ ತನ್ನ ಗೆಳತಿ ಕಾಲಿನ ಮೇಲೆ ವ್ಯಕ್ತಿಯೊಬ್ಬ ಕಾರು ಹತ್ತಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಆತ ಮಹಾರಾಷ್ಟ್ರ ಹಿರಿಯ ಅಧಿಕಾರಿಯೊಬ್ಬರ ಮಗನಾಗಿದ್ದು, ಥಾಣೆಯ ಹೋಟೆಲ್​ ಬಳಿ ಗೆಳತಿ ಕಾಲಿನ ಮೇಲೆ ಕಾರು ಹತ್ತಿಸಿದ್ದಾನೆ.

ಮಹಾರಾಷ್ಟ್ರ: ಜಗಳ ಅತಿರೇಕಕ್ಕೇರಿ ಗೆಳತಿ ಕಾಲಿನ ಮೇಲೆ ಕಾರು ಹತ್ತಿಸಿದ ಪ್ರಿಯಕರ
Image Credit source: India Today
ನಯನಾ ರಾಜೀವ್
|

Updated on: Dec 16, 2023 | 8:33 AM

Share

ಜಗಳ ಅತಿರೇಕಕ್ಕೆ ಹೋಗಿ ತನ್ನ ಗೆಳತಿ ಕಾಲಿನ ಮೇಲೆ ವ್ಯಕ್ತಿಯೊಬ್ಬ ಕಾರು ಹತ್ತಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಆತ ಮಹಾರಾಷ್ಟ್ರ ಹಿರಿಯ ಅಧಿಕಾರಿಯೊಬ್ಬರ ಮಗನಾಗಿದ್ದು, ಥಾಣೆಯ ಹೋಟೆಲ್​ ಬಳಿ ಗೆಳತಿ ಕಾಲಿನ ಮೇಲೆ ಕಾರು ಹತ್ತಿಸಿದ್ದಾನೆ.

ಡಿಸೆಂಬರ್​ 11 ರಂದು ಘಟನೆ ನಡೆದಿದೆ. ಆರೋಪಿ ಅಶ್ವಜಿತ್ ಗಾಯಕ್ವಾಡ್ ಮತ್ತು ಇತರ ಇಬ್ಬರ ವಿರುದ್ಧ ಪೊಲೀಸರು ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 279 (ಉದ್ದೇಶಪೂರಿತ ಚಾಲನೆ), 504 (ಉಲ್ಲಂಘನೆಯನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸೋಮವಾರ ಘೋಡ್‌ಬಂದರ್ ರಸ್ತೆಯ ಹೋಟೆಲ್ ಬಳಿ ಈ ಘಟನೆ ನಡೆದಿದೆ, ಅಲ್ಲಿ ಯುವತಿ ಅಶ್ವಜಿತ್ ಗಾಯಕ್‌ವಾಡ್ ಅವರನ್ನು ಭೇಟಿಯಾಗಲು ಹೋಗಿದ್ದರು. ಇಬ್ಬರ ನಡುವೆ ವಾಗ್ವಾದ ನಡೆಯಿತು. ನಂತರ, ಸಂತ್ರಸ್ತೆ ಕಾರಿನಿಂದ ವಸ್ತುಗಳನ್ನು ತೆಗೆದುಕೊಂಡು ಹೊರಡಲು ಸಿದ್ಧಳಾದಾಗ ಆಕೆಯ ಕಾಲಿನ ಮೇಲೆ ಕಾರು ಹತ್ತಿಸಿದ್ದಾನೆ.

ಮತ್ತಷ್ಟು ಓದಿ: ಪಾಲಾರ್ ಬಾಂಬ್ ಸ್ಫೋಟದ ಪ್ರಮುಖ ಅಪರಾಧಿ, ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ನಿಧನ

ಘಟನೆ ಬಳಿಕ ಯುವತಿ ಸಾಮಾಜಿಕ ಜಾಲತಾಣದಲ್ಲಿ ಈ ಪೋಸ್ಟ್​ ಅನ್ನು ಹಂಚಿಕೊಂಡಿದ್ದಾರೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಅಶ್ವಜಿತ್ ಗಾಯಕ್ವಾಡ್ ಹಿರಿಯ ಅಧಿಕಾರಿಯೊಬ್ಬರ ಮಗ ಎನ್ನುವುದು ತಿಳಿದುಬಂದಿದೆ.

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಆಕೆಯ ಹೇಳಿಕೆಯಂತೆ ಪೊಲೀಸರು ಪ್ರಕರಣವನ್ನು ದಾಖಲಿಸಿಲ್ಲ ಎಂದು ಸಂತ್ರಸ್ತೆ ತನ್ನ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಮಾಡಿದ ಆರೋಪಗಳನ್ನು ನಿರಾಕರಿಸಿದರು. ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ ಮತ್ತು ಇಲ್ಲಿಯವರೆಗೆ ಯಾವುದೇ ಬಂಧನವನ್ನು ಮಾಡಲಾಗಿಲ್ಲ ಎಂದು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ರಸ್ತೆ ಗುಂಡಿ ತಪ್ಪಿಸಲು ಹೋಗಿ ಗಂಭೀರ ಗಾಯಗೊಂಡ ಯವಕ
ರಸ್ತೆ ಗುಂಡಿ ತಪ್ಪಿಸಲು ಹೋಗಿ ಗಂಭೀರ ಗಾಯಗೊಂಡ ಯವಕ
ಇಡೀ ರಾತ್ರಿ ಕೋಲಾರ ತಾಲೂಕು ಕಚೇರಿ ಕಾವಲಿಗೆ ಕುಳಿತ BJP ಕಾರ್ಯಕರ್ತರು!
ಇಡೀ ರಾತ್ರಿ ಕೋಲಾರ ತಾಲೂಕು ಕಚೇರಿ ಕಾವಲಿಗೆ ಕುಳಿತ BJP ಕಾರ್ಯಕರ್ತರು!