AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಮಂಚದ ಕೆಳಗಿರುವ ಪೆಟ್ಟಿಗೆಯಲ್ಲಿ ತಾಯಿ ಮತ್ತು ಮಗನ ಶವ ಪತ್ತೆ

ಮನೆಯ ಮಂಚದ ಕೆಳಗಿರುವ ಪೆಟ್ಟಿಗೆಯಲ್ಲಿ ತಾಯಿ, ಮಗನ ಶವ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರ ಪೊಲೀಸರು ಶುಕ್ರವಾರ ರಾಜ್ಯದ ಅಮರಾವತಿ ನಗರದಲ್ಲಿ ಬೆಡ್ ಬಾಕ್ಸ್‌ನಲ್ಲಿ ಮಹಿಳೆ ಮತ್ತು ಆಕೆಯ ಮಗನ ಶವಗಳನ್ನು ಪತ್ತೆ ಮಾಡಿದ್ದಾರೆ. ಮೃತರನ್ನು 45 ವರ್ಷದ ನೀಲಿಮಾ ಗಣೇಶ್ ಕಾಪ್ಸೆ ಮತ್ತು ಅವರ 22 ವರ್ಷದ ಮಗ ಆಯುಷ್ ಕಾಪ್ಸೆ ಎಂದು ಗುರುತಿಸಲಾಗಿದೆ.

ಮಹಾರಾಷ್ಟ್ರ: ಮಂಚದ ಕೆಳಗಿರುವ  ಪೆಟ್ಟಿಗೆಯಲ್ಲಿ ತಾಯಿ ಮತ್ತು ಮಗನ ಶವ ಪತ್ತೆ
ಮನೆImage Credit source: India Today
ನಯನಾ ರಾಜೀವ್
|

Updated on: Sep 03, 2023 | 11:21 AM

Share

ಮನೆಯ ಮಂಚದ ಕೆಳಗಿರುವ ಪೆಟ್ಟಿಗೆಯಲ್ಲಿ ತಾಯಿ, ಮಗನ ಶವ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರ ಪೊಲೀಸರು ಶುಕ್ರವಾರ ರಾಜ್ಯದ ಅಮರಾವತಿ ನಗರದಲ್ಲಿ ಬೆಡ್ ಬಾಕ್ಸ್‌ನಲ್ಲಿ ಮಹಿಳೆ ಮತ್ತು ಆಕೆಯ ಮಗನ ಶವಗಳನ್ನು ಪತ್ತೆ ಮಾಡಿದ್ದಾರೆ. ಮೃತರನ್ನು 45 ವರ್ಷದ ನೀಲಿಮಾ ಗಣೇಶ್ ಕಾಪ್ಸೆ ಮತ್ತು ಅವರ 22 ವರ್ಷದ ಮಗ ಆಯುಷ್ ಕಾಪ್ಸೆ ಎಂದು ಗುರುತಿಸಲಾಗಿದೆ.

ಅಕ್ಕಪಕ್ಕದ ಮನೆಯವರಿಗೆ ಕಳೆದ ಎರಡು ದಿನಗಳಿಂದ ಮನೆಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಸಿದಿದ್ದರು. ಬಳಿಕ ಅವರ ಸಂಬಂಧಿಕರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದರು. ನಾಗ್ಪುರದಿಂದ ಬಂದಿದ್ದ ಕುಟುಂಬಸ್ಥರು ಮನೆಗೆ ಬೀಗ ಹಾಕಿರುವುದನ್ನು ಕಂಡು ತಕ್ಷಣ ಪೊಲೀಸರಿಗೆ ಕರೆ ಮಾಡಿದ್ದಾರೆ.

ಪೊಲೀಸರು ತನಿಖೆ ನಡೆಸಿದಾಗ ಮುಂಭಾಗದ ಬಾಗಿಲನ್ನು ಒಳಗಿನಿಂದ ಲಾಕ್ ಮಾಡಿರುವುದು ಮತ್ತು ಹಿಂಬಾಗಿಲನ್ನು ಮುಚ್ಚಿರುವುದು ಕಂಡುಬಂದಿದೆ. ಪೊಲೀಸರು ಬಾಗಿಲನ್ನು ಒಡೆದು ಮನೆಯ ಒಳಗೆ ಪ್ರವೇಶಿಸಿದ್ದಾರೆ.

ಮತ್ತಷ್ಟು ಓದಿ: ಲೈಂಗಿಕ ದೌರ್ಜನ್ಯದಿಂದ ಬೇಸತ್ತು ಟ್ಯೂಟರ್​ನ ಕತ್ತು ಸೀಳಿ ಹತ್ಯೆ ಮಾಡಿದ ಬಾಲಕ

ಹಾಸಿಗೆಯಿಂದ ರಕ್ತ ತೊಟ್ಟಿಕ್ಕುತ್ತಿರುವುದು ಪೊಲೀಸರಿಗೆ ಕಾಣಿಸಿತು, ಮನೆಯ ತುಂಬೆಲ್ಲಾ ದುರ್ವಾಸನೆ ಇತ್ತು. ಇದ್ದಕ್ಕಿದ್ದಂತೆ ಹಾಸಿಗೆಯ ಪೆಟ್ಟಿಗೆಯನ್ನು ತೆರೆದಾಗ ಶವಗಳು ಕಂಡುಬಂದಿವೆ.

ನೆರೆಹೊರೆಯವರ ಪ್ರಕಾರ, ಸ್ವಲ್ಪ ದಿನದಿಂದ ಮಹಿಳೆಯ ಹಿರಿಯ ಮಗ ನಾಪತ್ತೆಯಾಗಿದ್ದರು, ಅವರ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಆಗಿತ್ತು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್