AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯದ ನಶೆಯಲ್ಲಿ ಮಗನ ಬಾಯಿಗೆ ಪೇಪರ್​ ತುರುಕಿ ಕೊಲೆ ಮಾಡಿದ ತಂದೆ

ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಮಗನ ಬಾಯಿಗೆ ಪೇಪರ್​ ತುರುಕಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಈ ಕೃತ್ಯ ನಡೆಯುವಾಗ ವ್ಯಕ್ತಿ ತುಂಬಾ ಕುಡಿದಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ, ಅಪರಾಧದ ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದರು.

ಮದ್ಯದ ನಶೆಯಲ್ಲಿ ಮಗನ ಬಾಯಿಗೆ ಪೇಪರ್​ ತುರುಕಿ ಕೊಲೆ ಮಾಡಿದ ತಂದೆ
ಅಪರಾಧ
ನಯನಾ ರಾಜೀವ್
|

Updated on: Jun 12, 2024 | 12:09 PM

Share

ವ್ಯಕ್ತಿಯೊಬ್ಬ ಮದ್ಯದ ನಶೆಯಲ್ಲಿ ಮಗನ ಬಾಯಿಗೆ ಪೇಪರ್​ ತುರುಕಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ, ಕಾಸರ ಪ್ರದೇಶದ ವಾಶಾಲಾದಲ್ಲಿ ಮಂಗಳವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ.

ಈ ಕೃತ್ಯ ನಡೆಯುವಾಗ ವ್ಯಕ್ತಿ ತುಂಬಾ ಕುಡಿದಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ, ಅಪರಾಧದ ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದರು. ಕೌಟುಂಬಿಕ ಕಲಹಗಳ ಹಿನ್ನೆಲೆಯಲ್ಲಿ ವ್ಯಕ್ತಿ ಮತ್ತು ಆತನ ಪತ್ನಿ ಪ್ರತ್ಯೇಕವಾಗಿ ವಾಸಿಸುತ್ತಿದ್ದು, ಬಾಲಕ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದ ಎಂದು ಪೊಲೀಸ್ ನಿಯಂತ್ರಣ ಕೊಠಡಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಮವಾರ ತಾಯಿ ಮನೆಯಿಂದ ಬಾಲಕ ನಾಪತ್ತೆಯಾಗಿದ್ದು, ಕುಟುಂಬಸ್ಥರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ. ಮಂಗಳವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಅಪ್ರಾಪ್ತ ಬಾಲಕ ತನ್ನ ತಂದೆಯ ಮನೆಯ ಬಳಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: Crime News: ಇನ್‌ಸ್ಟಾಗ್ರಾಂನಲ್ಲಿ ಯುವಕರೊಂದಿಗೆ ಹೆಂಡತಿ ಚಾಟ್; ಗಂಡ ವಿರೋಧಿಸಿದ್ದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ

ಎಚ್ಚರಿಕೆ ನೀಡಿದ ನಂತರ, ಪೊಲೀಸರು ಸ್ಥಳಕ್ಕೆ ಹೋದರು ಆಗ ಬಾಲಕನ ಬಾಯಲ್ಲಿ ಕಾಗದದ ಚೆಂಡು ಇರುವುದು ಜತೆಗೆ ಮೂಗನಲ್ಲಿ ರಕ್ತಸ್ರಾವವಾಗಿರುವುದನ್ನು ಗಮನಿಸಿದ್ದಾರೆ. ತನ್ನ ಪತ್ನಿ ಪ್ರತ್ಯೇಕವಾಗಿ ಉಳಿದುಕೊಳ್ಳಲು ಶುರುಮಾಡಿದ ಬಳಿಕ ಹೆಚ್ಚಾಗಿ ಮದ್ಯಪಾನ ಮಾಡುತ್ತಿದ್ದ.

ಹಾಗೆಯೇ ಮಂಗಳವಾರ ಮಧ್ಯರಾತ್ರಿ ಕುಡಿದ ಅಮಲಿನಲ್ಲಿ ನೋಟ್​ಬುಕ್​ನ ಹಾಳೆಗಳನ್ನು ಹರಿದು ಉಂಡೆಯ ರೀತಿ ಮಾಡಿ ಮಗನ ಬಾಯಿಗೆ ತುರುಕಿ ಹತ್ಯೆ ಮಾಡಿದ್ದಾನೆ.

ಮೃತ ಬಾಲಕನ ಸಂಬಂಧಿಯೊಬ್ಬರು ನೀಡಿದ ದೂರಿನ ಮೇರೆಗೆ ಮಂಗಳವಾರ ರಾತ್ರಿ ಆರೋಪಿಯನ್ನು ಬಂಧಿಸಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ