AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಮನೆಗೆ ಬಂದ ನವವಧು ಮೇಲೆ ಮಾವ, ಆತನ ಸ್ನೇಹಿತನಿಂದ ಅತ್ಯಾಚಾರ

ಮಗನನ್ನು ಮದುವೆಯಾಗಿ ಮನೆಗೆ ಬಂದ ಸೊಸೆಯ ಮೇಲೆ ಮಾವ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 20 ವರ್ಷದ ಮಹಿಳೆ ಮೇಲೆ 52 ವರ್ಷದ ಮಾವ ಮತ್ತವನ ಸ್ನೇಹಿತ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ವಿಚಾರವನ್ನು ಯಾರ ಬಳಿಯಾದರೂ ಹೇಳಿಕೊಂಡರೆ ಆಕೆಯ ಪೋಷಕರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. 15 ದಿನಗಳ ಕಾಲ ಆಕೆಗೆ ಚಿತ್ರಹಿಂಸೆ ನೀಡಿದ್ದಾರೆ.

ಮಹಾರಾಷ್ಟ್ರ: ಮನೆಗೆ ಬಂದ ನವವಧು ಮೇಲೆ ಮಾವ, ಆತನ ಸ್ನೇಹಿತನಿಂದ ಅತ್ಯಾಚಾರ
ಅಪರಾಧImage Credit source: Hindustan Times
ನಯನಾ ರಾಜೀವ್
|

Updated on: Feb 23, 2025 | 8:13 AM

Share

ಥಾಣೆ, ಫೆಬ್ರವರಿ 23: ಮದುವೆಯಾಗಿ ಜೀವನದ ಮೇಲೆ ಹತ್ತಾರು ಕನಸುಗಳನ್ನು ಹೊತ್ತು ಮನೆಗೆ ಬಂದಿದ್ದ ಸೊಸೆಯ ಮೇಲೆ ಮಾವ ಹಾಗೂ ಆತನ ಸ್ನೇಹಿತ ಅತ್ಯಾಚಾರ ವೆಸಗಿರುವ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರ ಥಾಣೆಯಲ್ಲಿ ನಡೆದಿದೆ. 20 ವರ್ಷದ ಮಹಿಳೆ ಮೇಲೆ 52 ವರ್ಷದ ಮಾವ ಮತ್ತವನ ಸ್ನೇಹಿತ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ.

ಈ ವಿಚಾರವನ್ನು ಯಾರ ಬಳಿಯಾದರೂ ಹೇಳಿಕೊಂಡರೆ ಆಕೆಯ ಪೋಷಕರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. 15 ದಿನಗಳ ಕಾಲ ಆಕೆಗೆ ಚಿತ್ರಹಿಂಸೆ ನೀಡಿದ್ದಾರೆ. ಇಬ್ಬರೂ ಮಲಗಿದ್ದಾಗ ಆಕೆ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ.ಆರೋಪಿಗಳಿಬ್ಬರೂ ಪ್ರಸ್ತುತ ತಲೆಮರೆಸಿಕೊಂಡಿದ್ದು, ಪೊಲೀಸ್ ತಂಡ ಅವರಿಗಾಗಿ ಹುಡುಕಾಟ ನಡೆಸುತ್ತಿದೆ ಎಂದು ನಾರ್ಪೋಲಿ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಭರತ್ ಕಾಮತ್ ಮಾಹಿತಿ ನೀಡಿದ್ದಾರೆ.

ಮಹಿಳೆ ಮತ್ತು ಆಕೆಯ ಪತಿ ಮಾವನಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಜನವರಿ 30 ರಂದು, ಆರೋಪಿಯು ಮಹಿಳೆಯನ್ನು ಆಕೆಯ ಪೋಷಕರ ಬಳಿ ಬಿಡುವ ನೆಪದಲ್ಲಿ ಹೊರಗೆ ಕರೆದೊಯ್ದಿದ್ದ. ಆದರೆ, ಆಕೆಯನ್ನು ತನ್ನ ಸ್ವಂತ ಮನೆಗೆ ಕರೆದೊಯ್ದು, ಅಲ್ಲಿ ಆಕೆಯನ್ನು ಒಂದು ಕೋಣೆಯಲ್ಲಿ ಕಟ್ಟಿಹಾಕಿ ತನ್ನ ಸ್ನೇಹಿತನಿಗೆ ಬರಲು ತಿಳಿಸಿದ್ದ.

ಮತ್ತಷ್ಟು ಓದಿ: ಮಧ್ಯಪ್ರದೇಶದಲ್ಲಿ ಆರ್ಕೆಸ್ಟ್ರಾ ಡ್ಯಾನ್ಸರ್ ಮೇಲೆ ಸಾಮೂಹಿಕ ಅತ್ಯಾಚಾರ; 6 ಜನರ ಬಂಧನ

ನಂತರ ಆರೋಪಿಗಳಿಬ್ಬರೂ ಸರದಿಯಂತೆ ಆಕೆಯ ಮೇಲೆ ಅತ್ಯಾಚಾರ ಎಸಗಿದರು. ಈ ಮಧ್ಯೆ, ಮಾವ ತನ್ನ ಮಗನಿಗೆ ತನ್ನ ಸೊಸೆಯನ್ನು ಆಕೆಯ ಪೋಷಕರ ಮನೆಯ ಬಳಿ ಬಿಟ್ಟಿರುವುದಾಗಿ ಹೇಳಿದ್ದ. ಆರೋಪಿಗಳು ಮಲಗಿದ್ದಾಗ ಮಹಿಳೆ ಪರಾರಿಯಾಗಿ ತನ್ನ ಪೋಷಕರ ಮನೆಗೆ ತಲುಪಿದ ನಂತರ ಸತ್ಯ ಹೊರಬಂದಿತ್ತು.

ಅಲ್ಲಿಂದ ಆಕೆ ತನ್ನ ಪೋಷಕರೊಂದಿಗೆ ಪೊಲೀಸ್​ ಠಾಣೆಗೆ ತೆರಳಿ ನಡೆದಿದ್ದೆಲ್ಲವನ್ನೂ ವಿವರಿಸಿದ್ದಾಳೆ. ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 64, 127(4), 351(3), 74, ಮತ್ತು 3(5) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್