AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಮನೆಗೆ ಬಂದ ನವವಧು ಮೇಲೆ ಮಾವ, ಆತನ ಸ್ನೇಹಿತನಿಂದ ಅತ್ಯಾಚಾರ

ಮಗನನ್ನು ಮದುವೆಯಾಗಿ ಮನೆಗೆ ಬಂದ ಸೊಸೆಯ ಮೇಲೆ ಮಾವ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 20 ವರ್ಷದ ಮಹಿಳೆ ಮೇಲೆ 52 ವರ್ಷದ ಮಾವ ಮತ್ತವನ ಸ್ನೇಹಿತ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ವಿಚಾರವನ್ನು ಯಾರ ಬಳಿಯಾದರೂ ಹೇಳಿಕೊಂಡರೆ ಆಕೆಯ ಪೋಷಕರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. 15 ದಿನಗಳ ಕಾಲ ಆಕೆಗೆ ಚಿತ್ರಹಿಂಸೆ ನೀಡಿದ್ದಾರೆ.

ಮಹಾರಾಷ್ಟ್ರ: ಮನೆಗೆ ಬಂದ ನವವಧು ಮೇಲೆ ಮಾವ, ಆತನ ಸ್ನೇಹಿತನಿಂದ ಅತ್ಯಾಚಾರ
ಅಪರಾಧImage Credit source: Hindustan Times
Follow us
ನಯನಾ ರಾಜೀವ್
|

Updated on: Feb 23, 2025 | 8:13 AM

ಥಾಣೆ, ಫೆಬ್ರವರಿ 23: ಮದುವೆಯಾಗಿ ಜೀವನದ ಮೇಲೆ ಹತ್ತಾರು ಕನಸುಗಳನ್ನು ಹೊತ್ತು ಮನೆಗೆ ಬಂದಿದ್ದ ಸೊಸೆಯ ಮೇಲೆ ಮಾವ ಹಾಗೂ ಆತನ ಸ್ನೇಹಿತ ಅತ್ಯಾಚಾರ ವೆಸಗಿರುವ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರ ಥಾಣೆಯಲ್ಲಿ ನಡೆದಿದೆ. 20 ವರ್ಷದ ಮಹಿಳೆ ಮೇಲೆ 52 ವರ್ಷದ ಮಾವ ಮತ್ತವನ ಸ್ನೇಹಿತ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ.

ಈ ವಿಚಾರವನ್ನು ಯಾರ ಬಳಿಯಾದರೂ ಹೇಳಿಕೊಂಡರೆ ಆಕೆಯ ಪೋಷಕರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. 15 ದಿನಗಳ ಕಾಲ ಆಕೆಗೆ ಚಿತ್ರಹಿಂಸೆ ನೀಡಿದ್ದಾರೆ. ಇಬ್ಬರೂ ಮಲಗಿದ್ದಾಗ ಆಕೆ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ.ಆರೋಪಿಗಳಿಬ್ಬರೂ ಪ್ರಸ್ತುತ ತಲೆಮರೆಸಿಕೊಂಡಿದ್ದು, ಪೊಲೀಸ್ ತಂಡ ಅವರಿಗಾಗಿ ಹುಡುಕಾಟ ನಡೆಸುತ್ತಿದೆ ಎಂದು ನಾರ್ಪೋಲಿ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಭರತ್ ಕಾಮತ್ ಮಾಹಿತಿ ನೀಡಿದ್ದಾರೆ.

ಮಹಿಳೆ ಮತ್ತು ಆಕೆಯ ಪತಿ ಮಾವನಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಜನವರಿ 30 ರಂದು, ಆರೋಪಿಯು ಮಹಿಳೆಯನ್ನು ಆಕೆಯ ಪೋಷಕರ ಬಳಿ ಬಿಡುವ ನೆಪದಲ್ಲಿ ಹೊರಗೆ ಕರೆದೊಯ್ದಿದ್ದ. ಆದರೆ, ಆಕೆಯನ್ನು ತನ್ನ ಸ್ವಂತ ಮನೆಗೆ ಕರೆದೊಯ್ದು, ಅಲ್ಲಿ ಆಕೆಯನ್ನು ಒಂದು ಕೋಣೆಯಲ್ಲಿ ಕಟ್ಟಿಹಾಕಿ ತನ್ನ ಸ್ನೇಹಿತನಿಗೆ ಬರಲು ತಿಳಿಸಿದ್ದ.

ಮತ್ತಷ್ಟು ಓದಿ: ಮಧ್ಯಪ್ರದೇಶದಲ್ಲಿ ಆರ್ಕೆಸ್ಟ್ರಾ ಡ್ಯಾನ್ಸರ್ ಮೇಲೆ ಸಾಮೂಹಿಕ ಅತ್ಯಾಚಾರ; 6 ಜನರ ಬಂಧನ

ನಂತರ ಆರೋಪಿಗಳಿಬ್ಬರೂ ಸರದಿಯಂತೆ ಆಕೆಯ ಮೇಲೆ ಅತ್ಯಾಚಾರ ಎಸಗಿದರು. ಈ ಮಧ್ಯೆ, ಮಾವ ತನ್ನ ಮಗನಿಗೆ ತನ್ನ ಸೊಸೆಯನ್ನು ಆಕೆಯ ಪೋಷಕರ ಮನೆಯ ಬಳಿ ಬಿಟ್ಟಿರುವುದಾಗಿ ಹೇಳಿದ್ದ. ಆರೋಪಿಗಳು ಮಲಗಿದ್ದಾಗ ಮಹಿಳೆ ಪರಾರಿಯಾಗಿ ತನ್ನ ಪೋಷಕರ ಮನೆಗೆ ತಲುಪಿದ ನಂತರ ಸತ್ಯ ಹೊರಬಂದಿತ್ತು.

ಅಲ್ಲಿಂದ ಆಕೆ ತನ್ನ ಪೋಷಕರೊಂದಿಗೆ ಪೊಲೀಸ್​ ಠಾಣೆಗೆ ತೆರಳಿ ನಡೆದಿದ್ದೆಲ್ಲವನ್ನೂ ವಿವರಿಸಿದ್ದಾಳೆ. ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 64, 127(4), 351(3), 74, ಮತ್ತು 3(5) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ