AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಮನೆಗೆ ಬಂದ ನವವಧು ಮೇಲೆ ಮಾವ, ಆತನ ಸ್ನೇಹಿತನಿಂದ ಅತ್ಯಾಚಾರ

ಮಗನನ್ನು ಮದುವೆಯಾಗಿ ಮನೆಗೆ ಬಂದ ಸೊಸೆಯ ಮೇಲೆ ಮಾವ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 20 ವರ್ಷದ ಮಹಿಳೆ ಮೇಲೆ 52 ವರ್ಷದ ಮಾವ ಮತ್ತವನ ಸ್ನೇಹಿತ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ವಿಚಾರವನ್ನು ಯಾರ ಬಳಿಯಾದರೂ ಹೇಳಿಕೊಂಡರೆ ಆಕೆಯ ಪೋಷಕರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. 15 ದಿನಗಳ ಕಾಲ ಆಕೆಗೆ ಚಿತ್ರಹಿಂಸೆ ನೀಡಿದ್ದಾರೆ.

ಮಹಾರಾಷ್ಟ್ರ: ಮನೆಗೆ ಬಂದ ನವವಧು ಮೇಲೆ ಮಾವ, ಆತನ ಸ್ನೇಹಿತನಿಂದ ಅತ್ಯಾಚಾರ
ಅಪರಾಧImage Credit source: Hindustan Times
ನಯನಾ ರಾಜೀವ್
|

Updated on: Feb 23, 2025 | 8:13 AM

Share

ಥಾಣೆ, ಫೆಬ್ರವರಿ 23: ಮದುವೆಯಾಗಿ ಜೀವನದ ಮೇಲೆ ಹತ್ತಾರು ಕನಸುಗಳನ್ನು ಹೊತ್ತು ಮನೆಗೆ ಬಂದಿದ್ದ ಸೊಸೆಯ ಮೇಲೆ ಮಾವ ಹಾಗೂ ಆತನ ಸ್ನೇಹಿತ ಅತ್ಯಾಚಾರ ವೆಸಗಿರುವ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರ ಥಾಣೆಯಲ್ಲಿ ನಡೆದಿದೆ. 20 ವರ್ಷದ ಮಹಿಳೆ ಮೇಲೆ 52 ವರ್ಷದ ಮಾವ ಮತ್ತವನ ಸ್ನೇಹಿತ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ.

ಈ ವಿಚಾರವನ್ನು ಯಾರ ಬಳಿಯಾದರೂ ಹೇಳಿಕೊಂಡರೆ ಆಕೆಯ ಪೋಷಕರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. 15 ದಿನಗಳ ಕಾಲ ಆಕೆಗೆ ಚಿತ್ರಹಿಂಸೆ ನೀಡಿದ್ದಾರೆ. ಇಬ್ಬರೂ ಮಲಗಿದ್ದಾಗ ಆಕೆ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ.ಆರೋಪಿಗಳಿಬ್ಬರೂ ಪ್ರಸ್ತುತ ತಲೆಮರೆಸಿಕೊಂಡಿದ್ದು, ಪೊಲೀಸ್ ತಂಡ ಅವರಿಗಾಗಿ ಹುಡುಕಾಟ ನಡೆಸುತ್ತಿದೆ ಎಂದು ನಾರ್ಪೋಲಿ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಭರತ್ ಕಾಮತ್ ಮಾಹಿತಿ ನೀಡಿದ್ದಾರೆ.

ಮಹಿಳೆ ಮತ್ತು ಆಕೆಯ ಪತಿ ಮಾವನಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಜನವರಿ 30 ರಂದು, ಆರೋಪಿಯು ಮಹಿಳೆಯನ್ನು ಆಕೆಯ ಪೋಷಕರ ಬಳಿ ಬಿಡುವ ನೆಪದಲ್ಲಿ ಹೊರಗೆ ಕರೆದೊಯ್ದಿದ್ದ. ಆದರೆ, ಆಕೆಯನ್ನು ತನ್ನ ಸ್ವಂತ ಮನೆಗೆ ಕರೆದೊಯ್ದು, ಅಲ್ಲಿ ಆಕೆಯನ್ನು ಒಂದು ಕೋಣೆಯಲ್ಲಿ ಕಟ್ಟಿಹಾಕಿ ತನ್ನ ಸ್ನೇಹಿತನಿಗೆ ಬರಲು ತಿಳಿಸಿದ್ದ.

ಮತ್ತಷ್ಟು ಓದಿ: ಮಧ್ಯಪ್ರದೇಶದಲ್ಲಿ ಆರ್ಕೆಸ್ಟ್ರಾ ಡ್ಯಾನ್ಸರ್ ಮೇಲೆ ಸಾಮೂಹಿಕ ಅತ್ಯಾಚಾರ; 6 ಜನರ ಬಂಧನ

ನಂತರ ಆರೋಪಿಗಳಿಬ್ಬರೂ ಸರದಿಯಂತೆ ಆಕೆಯ ಮೇಲೆ ಅತ್ಯಾಚಾರ ಎಸಗಿದರು. ಈ ಮಧ್ಯೆ, ಮಾವ ತನ್ನ ಮಗನಿಗೆ ತನ್ನ ಸೊಸೆಯನ್ನು ಆಕೆಯ ಪೋಷಕರ ಮನೆಯ ಬಳಿ ಬಿಟ್ಟಿರುವುದಾಗಿ ಹೇಳಿದ್ದ. ಆರೋಪಿಗಳು ಮಲಗಿದ್ದಾಗ ಮಹಿಳೆ ಪರಾರಿಯಾಗಿ ತನ್ನ ಪೋಷಕರ ಮನೆಗೆ ತಲುಪಿದ ನಂತರ ಸತ್ಯ ಹೊರಬಂದಿತ್ತು.

ಅಲ್ಲಿಂದ ಆಕೆ ತನ್ನ ಪೋಷಕರೊಂದಿಗೆ ಪೊಲೀಸ್​ ಠಾಣೆಗೆ ತೆರಳಿ ನಡೆದಿದ್ದೆಲ್ಲವನ್ನೂ ವಿವರಿಸಿದ್ದಾಳೆ. ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 64, 127(4), 351(3), 74, ಮತ್ತು 3(5) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ