AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಮನೆಗೆ ಬಂದ ನವವಧು ಮೇಲೆ ಮಾವ, ಆತನ ಸ್ನೇಹಿತನಿಂದ ಅತ್ಯಾಚಾರ

ಮಗನನ್ನು ಮದುವೆಯಾಗಿ ಮನೆಗೆ ಬಂದ ಸೊಸೆಯ ಮೇಲೆ ಮಾವ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 20 ವರ್ಷದ ಮಹಿಳೆ ಮೇಲೆ 52 ವರ್ಷದ ಮಾವ ಮತ್ತವನ ಸ್ನೇಹಿತ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ವಿಚಾರವನ್ನು ಯಾರ ಬಳಿಯಾದರೂ ಹೇಳಿಕೊಂಡರೆ ಆಕೆಯ ಪೋಷಕರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. 15 ದಿನಗಳ ಕಾಲ ಆಕೆಗೆ ಚಿತ್ರಹಿಂಸೆ ನೀಡಿದ್ದಾರೆ.

ಮಹಾರಾಷ್ಟ್ರ: ಮನೆಗೆ ಬಂದ ನವವಧು ಮೇಲೆ ಮಾವ, ಆತನ ಸ್ನೇಹಿತನಿಂದ ಅತ್ಯಾಚಾರ
ಅಪರಾಧImage Credit source: Hindustan Times
ನಯನಾ ರಾಜೀವ್
|

Updated on: Feb 23, 2025 | 8:13 AM

Share

ಥಾಣೆ, ಫೆಬ್ರವರಿ 23: ಮದುವೆಯಾಗಿ ಜೀವನದ ಮೇಲೆ ಹತ್ತಾರು ಕನಸುಗಳನ್ನು ಹೊತ್ತು ಮನೆಗೆ ಬಂದಿದ್ದ ಸೊಸೆಯ ಮೇಲೆ ಮಾವ ಹಾಗೂ ಆತನ ಸ್ನೇಹಿತ ಅತ್ಯಾಚಾರ ವೆಸಗಿರುವ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರ ಥಾಣೆಯಲ್ಲಿ ನಡೆದಿದೆ. 20 ವರ್ಷದ ಮಹಿಳೆ ಮೇಲೆ 52 ವರ್ಷದ ಮಾವ ಮತ್ತವನ ಸ್ನೇಹಿತ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ.

ಈ ವಿಚಾರವನ್ನು ಯಾರ ಬಳಿಯಾದರೂ ಹೇಳಿಕೊಂಡರೆ ಆಕೆಯ ಪೋಷಕರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. 15 ದಿನಗಳ ಕಾಲ ಆಕೆಗೆ ಚಿತ್ರಹಿಂಸೆ ನೀಡಿದ್ದಾರೆ. ಇಬ್ಬರೂ ಮಲಗಿದ್ದಾಗ ಆಕೆ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ.ಆರೋಪಿಗಳಿಬ್ಬರೂ ಪ್ರಸ್ತುತ ತಲೆಮರೆಸಿಕೊಂಡಿದ್ದು, ಪೊಲೀಸ್ ತಂಡ ಅವರಿಗಾಗಿ ಹುಡುಕಾಟ ನಡೆಸುತ್ತಿದೆ ಎಂದು ನಾರ್ಪೋಲಿ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಭರತ್ ಕಾಮತ್ ಮಾಹಿತಿ ನೀಡಿದ್ದಾರೆ.

ಮಹಿಳೆ ಮತ್ತು ಆಕೆಯ ಪತಿ ಮಾವನಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಜನವರಿ 30 ರಂದು, ಆರೋಪಿಯು ಮಹಿಳೆಯನ್ನು ಆಕೆಯ ಪೋಷಕರ ಬಳಿ ಬಿಡುವ ನೆಪದಲ್ಲಿ ಹೊರಗೆ ಕರೆದೊಯ್ದಿದ್ದ. ಆದರೆ, ಆಕೆಯನ್ನು ತನ್ನ ಸ್ವಂತ ಮನೆಗೆ ಕರೆದೊಯ್ದು, ಅಲ್ಲಿ ಆಕೆಯನ್ನು ಒಂದು ಕೋಣೆಯಲ್ಲಿ ಕಟ್ಟಿಹಾಕಿ ತನ್ನ ಸ್ನೇಹಿತನಿಗೆ ಬರಲು ತಿಳಿಸಿದ್ದ.

ಮತ್ತಷ್ಟು ಓದಿ: ಮಧ್ಯಪ್ರದೇಶದಲ್ಲಿ ಆರ್ಕೆಸ್ಟ್ರಾ ಡ್ಯಾನ್ಸರ್ ಮೇಲೆ ಸಾಮೂಹಿಕ ಅತ್ಯಾಚಾರ; 6 ಜನರ ಬಂಧನ

ನಂತರ ಆರೋಪಿಗಳಿಬ್ಬರೂ ಸರದಿಯಂತೆ ಆಕೆಯ ಮೇಲೆ ಅತ್ಯಾಚಾರ ಎಸಗಿದರು. ಈ ಮಧ್ಯೆ, ಮಾವ ತನ್ನ ಮಗನಿಗೆ ತನ್ನ ಸೊಸೆಯನ್ನು ಆಕೆಯ ಪೋಷಕರ ಮನೆಯ ಬಳಿ ಬಿಟ್ಟಿರುವುದಾಗಿ ಹೇಳಿದ್ದ. ಆರೋಪಿಗಳು ಮಲಗಿದ್ದಾಗ ಮಹಿಳೆ ಪರಾರಿಯಾಗಿ ತನ್ನ ಪೋಷಕರ ಮನೆಗೆ ತಲುಪಿದ ನಂತರ ಸತ್ಯ ಹೊರಬಂದಿತ್ತು.

ಅಲ್ಲಿಂದ ಆಕೆ ತನ್ನ ಪೋಷಕರೊಂದಿಗೆ ಪೊಲೀಸ್​ ಠಾಣೆಗೆ ತೆರಳಿ ನಡೆದಿದ್ದೆಲ್ಲವನ್ನೂ ವಿವರಿಸಿದ್ದಾಳೆ. ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 64, 127(4), 351(3), 74, ಮತ್ತು 3(5) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು