AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ತನ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದಳೆಂದು ಲಿವ್ ಇನ್ ಸಂಗಾತಿಯ ಹತ್ಯೆಗೈದಿದ್ದ ವ್ಯಕ್ತಿಯ ಬಂಧನ

ತನ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದಕ್ಕೆ ವ್ಯಕ್ತಿಯೊಬ್ಬ ಲಿವ್-ಇನ್ ಸಂಗಾತಿಯ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಪಾಲ್ಗಢದಲ್ಲಿ ನಡೆದಿದೆ. ಯುವತಿಯನ್ನು ಕೊಂದು ಆಕೆಯ ದೇಹವನ್ನು ಗುಜರಾತ್​ನ ವಲ್ಸಾದ್​ ತೊರೆಯಲ್ಲಿ ಎಸೆದುಬಂದಿದ್ದ ಅದಕ್ಕೆ ಆತನ ಪತ್ನಿಯೂ ಸಹಾಯ ಮಾಡಿದ್ದಳು. ಮೇಕಪ್ ಕಲಾವಿದೆಯಾಗಿ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಮಹತ್ ಎಂದು ಪೊಲೀಸರು ಗುರುತಿಸಿದ್ದಾರೆ.

ಮಹಾರಾಷ್ಟ್ರ: ತನ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದಳೆಂದು ಲಿವ್ ಇನ್ ಸಂಗಾತಿಯ ಹತ್ಯೆಗೈದಿದ್ದ ವ್ಯಕ್ತಿಯ ಬಂಧನ
ನೈನಾ ಮಹತ್
ನಯನಾ ರಾಜೀವ್
|

Updated on:Sep 13, 2023 | 2:32 PM

Share

ತನ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದಕ್ಕೆ ವ್ಯಕ್ತಿಯೊಬ್ಬ ಲಿವ್-ಇನ್ ಸಂಗಾತಿಯ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಪಾಲ್ಗಢದಲ್ಲಿ ನಡೆದಿದೆ. ಯುವತಿಯನ್ನು ಕೊಂದು ಆಕೆಯ ದೇಹವನ್ನು ಗುಜರಾತ್​ನ ವಲ್ಸಾದ್​ ತೊರೆಯಲ್ಲಿ ಎಸೆದುಬಂದಿದ್ದ, ಅದಕ್ಕೆ ಆತನ ಪತ್ನಿಯೂ ಸಹಾಯ ಮಾಡಿದ್ದಳು. ಮೇಕಪ್ ಕಲಾವಿದೆಯಾಗಿ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ನೈನಾ ಮಹತ್ ಎಂದು ಪೊಲೀಸರು ಗುರುತಿಸಿದ್ದಾರೆ. ಆಕೆ ಆರೋಪಿ ಮನೋಹರ್ ಶುಕ್ಲಾ ಜತೆ ಐದು ವರ್ಷಗಳಿಂದ ಸಂಬಂಧ ಹೊಂದಿದ್ದಳು, ಶುಕ್ಲಾ ಕಾಸ್ಟ್ಯೂಮ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದ.

ನೈನಾ ತನ್ನನ್ನು ಮದುವೆಯಾಗುವಂತೆ ಶುಕ್ಲಾಗೆ ಪದೇ ಪದೇ ಒತ್ತಾಯಿಸುತ್ತಿದ್ದಳು, ಆತ ನಿರಾಕರಿಸಿದಾಗ ಅತ್ಯಾಚಾರದ ಪ್ರಕರಣ ದಾಖಲಿಸಿದ್ದಳು. ಪ್ರಕರಣವನ್ನು ಹಿಂಪಡೆಯುವಂತೆ ಶುಕ್ಲಾ ಕೇಳಿಕೊಂಡಿದ್ದು, ಆಕೆ ನಿರಾಕರಿಸಿದಾಗ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆಕೆಯನ್ನು ಕೊಲೆ ಮಾಡಿ ನಂತರ ವಲ್ಸಾದ್ ತೊರೆಯಲ್ಲಿ ಎಸೆಯುವ ಮೊದಲು ಸೂಟ್​ಕೇಸ್​ನಲ್ಲಿ ತುಂಬಲು ತನ್ನ ಹೆಂಡತಿಯ ಸಹಾಯ ಕೋರಿದ್ದ, ಘಟನೆ ಆಗಸ್ಟ್​ 9ರಂದು ನಡೆದಿದೆ.

ನೈನಾ ಕುಟುಂಬವು ಮಗಳು ಕಾಣೆಯಾಗಿರುವ ಬಗ್ಗೆ ಆಗಸ್ಟ್ 12ರಂದು ದೂರು ಸಲ್ಲಿಸಿದ್ದಳು. ನೈನಾ ಫೋನ್ ಸ್ವಿಚ್ಡ್​ ಆಫ್ ಆಗಿದ್ದ ಕಾರಣ ಆಕೆಯ ಬಳಿ ಮಾತನಾಡಲು ಸಾಧ್ಯವಾಗಿರಲಿಲ್ಲ ಹೀಗಾಗಿ ಆಕೆ ನಾಪತ್ತೆಯಾಗಿದ್ದಳೆ ಎನ್ನುವ ದೂರು ದಾಖಲಿಸಿದ್ದರು.

ಮತ್ತಷ್ಟು ಓದಿ: ಮಧ್ಯಪ್ರದೇಶದ ಅತ್ಯಂತ ಹೈ ಪ್ರೊಫೈಲ್ ಹನಿಟ್ರಾಪ್ ಕೇಸ್​ನ ಕಿಂಗ್​ಪಿನ್ ಬೆಂಗಳೂರಿನಲ್ಲಿ ಅರೆಸ್ಟ್

ಸಹೋದರಿ ದೂರಿನ ಪ್ರಕಾರ,ತನ್ನ ವಿರುದ್ಧ ದಾಖಲಾಗಿರುವ ದೂರುಗಳನ್ನು ಹಿಂತೆಗೆದುಕೊಳ್ಳುವಂತೆ ಶುಕ್ಲಾ ನೈನಾ ಮೇಲೆ ಒತ್ತಡ ಹೇರುತ್ತಿದ್ದ ಹಾಗೆ ಮಾಡದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎಂದು ತಿಳಿಸಿದ್ದಾರೆ. ಶುಕ್ಲಾ ಹಾಗೂ ಆತನ ಪತ್ನಿಯನ್ನು ಮಂಗಳವಾರ ಬಂಧಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:31 pm, Wed, 13 September 23

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್