AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

70 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ, 2 ದಿನಗಳ ಕಾಲ ಶವದ ಜತೆ ಕಳೆದ ವ್ಯಕ್ತಿ

ಎಪತ್ತು ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿ ಬಳಿಕ ವ್ಯಕ್ತಿಯೊಬ್ಬ ಶವದ ಜತೆ ಎರಡು ದಿನ ಕಳೆದಿರುವ ಘಟನೆ ಮಹಾರಾಷ್ಟ್ರದ ಲಾತೂರ್​ನಲ್ಲಿ ನಡೆದಿದೆ. ಬೆಳಗ್ಗೆ ಔಸಾ ತಹಸಿಲ್​ನ ಭೇಟಾದಲ್ಲಿರುವ 35ವರ್ಷದ ಮನ್ಸೂರ್ ಶೇಕ್ ಅವರ ಮನೆಯಿಂದ ದುರ್ವಾಸನೆ ಬರಲಾರಂಭಿಸಿದ್ದರಿಂದ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು

70 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ, 2 ದಿನಗಳ ಕಾಲ ಶವದ ಜತೆ ಕಳೆದ ವ್ಯಕ್ತಿ
ಅತ್ಯಾಚಾರ Image Credit source: IndiaToday
ನಯನಾ ರಾಜೀವ್
|

Updated on: Aug 27, 2024 | 8:33 AM

Share

ಎಪತ್ತು ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿ ಬಳಿಕ ವ್ಯಕ್ತಿಯೊಬ್ಬ ಶವದ ಜತೆ ಎರಡು ದಿನ ಕಳೆದಿರುವ ಘಟನೆ ಮಹಾರಾಷ್ಟ್ರದ ಲಾತೂರ್​ನಲ್ಲಿ ನಡೆದಿದೆ. ಬೆಳಗ್ಗೆ ಔಸಾ ತಹಸಿಲ್​ನ ಭೇಟಾದಲ್ಲಿರುವ 35ವರ್ಷದ ಮನ್ಸೂರ್ ಶೇಕ್ ಅವರ ಮನೆಯಿಂದ ದುರ್ವಾಸನೆ ಬರಲಾರಂಭಿಸಿದ್ದರಿಂದ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ತನಿಖೆಯಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ದೇಹವು ಕೊಳೆಯಲು ಪ್ರಾರಂಭಿಸಿದ್ದರಿಂದ ಎರಡು ದಿನಗಳ ಹಿಂದೆ ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಇಷ್ಟೆಲ್ಲಾ ಸಮಯದಲ್ಲಿ ಶೇಖ್ ಮೃತದೇಹದೊಂದಿಗೆ ಮನೆಯಲ್ಲಿಯೇ ಇದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಮಹಿಳೆಯು ಭೇಟಾದಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಬೋರ್ಗಾಂವ್ ನಿವಾಸಿಯಾಗಿದ್ದು, ಕಳೆದ ಕೆಲವು ದಿನಗಳಿಂದ ಗ್ರಾಮದಲ್ಲಿ ನೆಲೆಸಿದ್ದರು. ಶೇಖ್ ಆಕೆಯನ್ನು ಮನೆಗೆ ಕರೆದೊಯ್ದು ಅತ್ಯಾಚಾರ ಮಾಡಿ ನಂತರ ಕೊಲೆ ಮಾಡಿದ್ದಾನೆ.

ಹೆಂಡತಿ, ತಾಯಿ ದೂರವಾಗಿದ್ದು ಆತ ಒಬ್ಬಂಟಿಯಾಗಿದ್ದ, ಆತ ಮಾನಸಿಕ ಅಸ್ವಸ್ಥನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಶೇಖ್​ನನ್ನು ಪೊಲೀಸರು ಬಂಧಿಸಿದ್ದಾರೆ.

ದರೋಡೆಗೆಂದು ಬಂದಿದ್ದ ವ್ಯಕ್ತಿಯಿಂದ 70 ವರ್ಷದ ಮಹಿಳೆ ಮೇಲೆ ಅತ್ಯಾಚಾರ ದರೋಡೆಗೆಂದು ಮನೆಗೆ ನುಗ್ಗಿದ್ದ ವ್ಯಕ್ತಿ 70 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಈ ಘಟನೆ ಅಲಪ್ಪುಳ ಜಿಲ್ಲೆಯಲ್ಲಿ ನಡೆದಿದೆ, ದರೋಡೆಗೆಂದು ಮನೆಗೆ ಬಂದಿದ್ದ ಧನೇಶ್​(29) ಎಂಬಾತ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾನೆ. ಆರೋಪಿ ಶನಿವಾರ ರಾತ್ರಿ ಮಹಿಳೆಯ ಮೇಲೆ ಮೆಣಸಿನ ಪುಡಿ ಎರಚಿದ ನಂತರ ಕಾಯಂಕುಲಂನಲ್ಲಿರುವ ಅವರ ನಿವಾಸದಲ್ಲಿ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಮಹಾರಾಷ್ಟ್ರ: ಪೆರೋಲ್​ ಮೇಲೆ ಬಿಡುಗಡೆಗೊಂಡಿದ್ದ ಕೊಲೆ ಆರೋಪಿಯಿಂದ ಬಾಲಕಿ ಮೇಲೆ ಅತ್ಯಾಚಾರ

ಅವರು ಒಬ್ಬಂಟಿಯಾಗಿ ವಾಸಿಸುತ್ತಿದ್ದಾರೆ ಎಂಬುದನ್ನು ಅರಿತ ವ್ಯಕ್ತಿಯು ಆಕೆಯನ್ನು ಗುರಿಯಾಗಿಸಿಕೊಂಡಿದ್ದ. ದುಷ್ಕರ್ಮಿಯು ಮಹಿಳೆಯಿಂದ ಸುಮಾರು ಏಳು ಪವನ್ ಚಿನ್ನವನ್ನು ಕದ್ದಿದ್ದು, ಕದ್ದ ಆಭರಣಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆತ ಹೊರಗಿನಿಂದ ಬಾಗಿಲನ್ನು ಲಾಕ್​ ಮಾಡಿ ಹೊರಟುಹೋಗಿದ್ದ, ಆಕೆಯ ಮೊಬೈಲ್​ ಫೋನ್​ ಕೂಡ ಕದ್ದೊಯ್ದಿದ್ದ ಕಾರಣ ಅವರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ. ಬೆಳಗ್ಗೆ ಅಕ್ಕಪಕ್ಕದ ಮನೆಯವರು ಅವರನ್ನು ಕಂಡು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್