AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಕಾರ್ಬನ್ ಮಾನಾಕ್ಸೈಡ್ ಉಸಿರಾಡಿ 27 ವರ್ಷದ ವ್ಯಕ್ತಿ ಆತ್ಮಹತ್ಯೆ

ಮಹಾರಾಷ್ಟ್ರದ ವಸೈಯಲ್ಲಿ 27 ವರ್ಷದ ಯುವಕ ಬುಧವಾರ ಸಂಜೆ ಸಿಲಿಂಡರ್‌ನಿಂದ ಕಾರ್ಬನ್ ಮಾನಾಕ್ಸೈಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಸಾವನ್ನಪ್ಪಿದ್ದಾನೆ. ಪೊಲೀಸರು ಇದನ್ನು ಅತ್ಯಂತ ಅಸಾಮಾನ್ಯ ರೀತಿಯ ಆತ್ಮಹತ್ಯೆ ಎಂದು ಕರೆದಿದ್ದಾರೆ. ಮೃತನನ್ನು ಶ್ರೇಯ್ ಅಗರ್ವಾಲ್ ಎಂದು ಗುರುತಿಸಲಾಗಿದ್ದು, ಆ ವ್ಯಕ್ತಿಯ ಮೃತದೇಹ ಕಮನ್ ಪ್ರದೇಶದ ಬಾಡಿಗೆ ಮನೆಯಲ್ಲಿ ಪತ್ತೆಯಾಗಿದೆ. ಆ ಮನೆಯ ತುಂಬ ಸಿಲಿಂಡರ್‌ ಗ್ಯಾಸ್ ತುಂಬಿತ್ತು.

ಮಹಾರಾಷ್ಟ್ರದಲ್ಲಿ ಕಾರ್ಬನ್ ಮಾನಾಕ್ಸೈಡ್ ಉಸಿರಾಡಿ 27 ವರ್ಷದ ವ್ಯಕ್ತಿ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Mar 20, 2025 | 9:47 PM

Share

ಪಾಲ್ಘರ್, ಮಾರ್ಚ್ 20: ಮಹಾರಾಷ್ಟ್ರದ ವಸೈಯಲ್ಲಿ 27 ವರ್ಷದ ವ್ಯಕ್ತಿಯೊಬ್ಬ ಸಿಲಿಂಡರ್‌ನಿಂದ ಕಾರ್ಬನ್ ಮಾನಾಕ್ಸೈಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇದಾದ ನಂತರ ಆತ ಬುಧವಾರ ಸಂಜೆ ತನ್ನ ಮನೆಯಲ್ಲಿ ಸಾವನ್ನಪ್ಪಿದ್ದಾನೆ, ಪೊಲೀಸರು ಇದನ್ನು ಅತ್ಯಂತ ಅಸಾಮಾನ್ಯ ರೀತಿಯ ಆತ್ಮಹತ್ಯೆ ಎಂದು ಕರೆದಿದ್ದಾರೆ. ಶ್ರೇಯ್ ಅಗರ್ವಾಲ್ ಎಂದು ಗುರುತಿಸಲ್ಪಟ್ಟ ಮೃತ ವ್ಯಕ್ತಿಯ ದೇಹವನ್ನು ಕಮನ್ ಪ್ರದೇಶದ ಆತನ ಬಾಡಿಗೆ ಮನೆಯಿಂದ ವಶಕ್ಕೆ ಪಡೆಯಲಾಗಿದೆ.

ಕಳೆದ 1 ವರ್ಷದಿಂದ ವಸೈ ಪೂರ್ವದ ಸ್ಪ್ಯಾನಿಷ್ ವಿಲ್ಲಾದಲ್ಲಿರುವ ಕ್ಲಸ್ಟರ್ 9 ಬಂಗಲೆಯಲ್ಲಿ ವಾಸಿಸುತ್ತಿದ್ದ ಶ್ರೇಯ್ ಅಗರ್ವಾಲ್, ಅವರ ಸಹೋದರಿ ಮುಂಬೈ ಪೊಲೀಸ್ ಆಯುಕ್ತರಿಗೆ ನಾಪತ್ತೆಯಾದ ಬಗ್ಗೆ ದೂರು ಸಲ್ಲಿಸಿದ ನಂತರ ಪತ್ತೆಯಾಗಿದ್ದಾರೆ. 2 ದಿನಗಳಿಂದ ಆತನನ್ನು ಸಂಪರ್ಕಿಸಲು ಸಾಧ್ಯವಾಗದಿದ್ದಾಗ ಆತ ಕಾಣೆಯಾದ ವ್ಯಕ್ತಿಯ ಬಗ್ಗೆ ದೂರು ನೀಡಿದ್ದರು. ಮುಂಬೈ ಅಪರಾಧ ವಿಭಾಗವು ಅವರ ಮೊಬೈಲ್ ಫೋನ್ ಸ್ಥಳವನ್ನು ಪತ್ತೆಹಚ್ಚಿ ನೈಗಾಂವ್ ಪೊಲೀಸರಿಗೆ ಮಾಹಿತಿ ನೀಡಿತು.

ಇದನ್ನೂ ಓದಿ: ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಹೆಂಡತಿ

ಇದನ್ನೂ ಓದಿ
Image
ಹೊಸ ಪಾಡ್‌ಕಾಸ್ಟ್‌ನಲ್ಲಿ ಡೈವೋರ್ಸ್ ಬಗ್ಗೆ ಚರ್ಚಿಸಿದ ಮಿಚೆಲ್ ಒಬಾಮಾ
Image
ಪಾಕಿಸ್ತಾನದಲ್ಲಿ ರೈಲು ಹೈಜಾಕ್;27 ಉಗ್ರರ ಹತ್ಯೆ, 155 ಒತ್ತೆಯಾಳುಗಳ ರಕ್ಷಣೆ
Image
ಪಾಕಿಸ್ತಾನದಲ್ಲಿ ಉಗ್ರರಿಂದ ಪ್ಯಾಸೆಂಜರ್​​ ರೈಲು ಹೈಜಾಕ್; 11 ಸೈನಿಕರ ಹತ್ಯೆ
Image
ಒಡಿಶಾ ವಿಧಾನಸಭೆಯಲ್ಲಿ ಬಿಜೆಪಿ, ಕಾಂಗ್ರೆಸ್ ಶಾಸಕರಿಂದ ಪರಸ್ಪರ ಹಲ್ಲೆ

ಆತನ ಮನೆಗೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ಆ ಆವರಣವನ್ನು ಸೀಲ್ ಮಾಡಿರುವುದನ್ನು ಗಮನಿಸಿದರು. ಇದಾದ ನಂತರ ಮನೆಯ ಒಳಗೆ ಕೆಟ್ಟ ದುರ್ವಾಸನೆಯನ್ನು ಗಮನಿಸಿದರು. ಈ ಮನೆಯು ಕಾರ್ಬನ್ ಮಾನಾಕ್ಸೈಡ್‌ನಿಂದ ತುಂಬಿದೆ. ಮನೆಯಲ್ಲಿ ಲೈಟ್ ಆನ್ ಮಾಡಿದರೆ ಸ್ಫೋಟ ಉಂಟಾಗಬಹುದು ಎಂದು ಎಚ್ಚರಿಸುವ ಇಂಗ್ಲಿಷ್‌ನಲ್ಲಿ ಬರೆದು ಮನೆಯ ಬಾಗಿಲಿನ ಮೇಲೆ ಅಂಟಿಸಲಾಗಿತ್ತು. “ಒಳಗೆ ಕಾರ್ಬನ್ ಮಾನಾಕ್ಸೈಡ್ ಇದೆ. ಲೈಟ್ ಆನ್ ಮಾಡಬೇಡಿ” ಎಂದು ಚೀಟಿಯಲ್ಲಿ ಬರೆಯಲಾಗಿತ್ತು.

ಇದರಿಂದ ಅಪಾಯವನ್ನು ಗುರುತಿಸಿದ ನೈಗಾಂವ್ ಪೊಲೀಸರು ತಕ್ಷಣ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದರು. ವೈಯಕ್ತಿಕ ರಕ್ಷಣಾ ಸಾಧನಗಳು (ಪಿಪಿಇ) ಮತ್ತು ಉಸಿರಾಟದ ಉಪಕರಣಗಳನ್ನು ಹೊಂದಿದ್ದ ಅಗ್ನಿಶಾಮಕ ದಳದವರು ಹೈಡ್ರಾಲಿಕ್ ಸ್ಪ್ರೆಡರ್ ಕಟ್ಟರ್ ಬಳಸಿ ಆತನ ರೂಂ ಒಳಗೆ ಹೋದಾಗ ಆತ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿತು. ಅಗರ್ವಾಲ್ ಆತ್ಮಹತ್ಯೆಗೆ ಎರಡು ಕಾರ್ಬನ್ ಮಾನಾಕ್ಸೈಡ್ ಸಿಲಿಂಡರ್‌ಗಳನ್ನು ಸಜ್ಜುಗೊಳಿಸಿದ್ದರು, ಅವುಗಳನ್ನು ತಮ್ಮ ತೋಳುಗಳಿಗೆ ಜೋಡಿಸಿ ಹೆಲ್ಮೆಟ್ ಧರಿಸಿದ್ದರು. ಸಿಲಿಂಡರ್‌ಗೆ ಜೋಡಿಸಲಾದ ಟ್ಯೂಬ್‌ನಲ್ಲಿ ನೆಬ್ಯುಲೈಜರ್ ಅಳವಡಿಸಲಾಗಿತ್ತು. ಅದರ ಮೂಲಕ ಅವರು ಕಾರ್ಬನ್ ಮಾನಾಕ್ಸೈಡ್ ಉಸಿರಾಡಿದ್ದರು. ಇದರಿಂದಾಗಿ ಅವರು ಸಾವನ್ನಪ್ಪಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ