AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Crime: ಪ್ರೇಯಸಿಯ ಕೊಲೆ ಮಾಡಿ, ಶವವನ್ನು ಹಾಸಿಗೆಯ ಕೆಳಗಿಟ್ಟು, ರಾಜ್ಯ ಬಿಟ್ಟು ಪರಾರಿಯಾಗಲು ಯತ್ನಿಸಿದ ಯುವಕನ ಬಂಧನ

ದೆಹಲಿಯಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆ ಸುದ್ದಿ ಮಾಸುವ ಮುನ್ನ ಮತ್ತೊಂದು ಭೀಕರ ಹತ್ಯೆ ನಡೆದುಬಿಟ್ಟಿದೆ. ಲಿವ್​ ಇನ್​ ಸಂಬಂಧದಲ್ಲಿದ್ದ ಸಂಗಾತಿಯನ್ನು ಹತ್ಯೆ ಮಾಡಿ ಹಾಸಿಗೆಯ  ಕೆಳಗೆ ಬಚ್ಚಿಟ್ಟಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

Maharashtra Crime: ಪ್ರೇಯಸಿಯ ಕೊಲೆ ಮಾಡಿ, ಶವವನ್ನು ಹಾಸಿಗೆಯ ಕೆಳಗಿಟ್ಟು, ರಾಜ್ಯ ಬಿಟ್ಟು ಪರಾರಿಯಾಗಲು ಯತ್ನಿಸಿದ ಯುವಕನ ಬಂಧನ
Crime Scene
ನಯನಾ ರಾಜೀವ್
|

Updated on: Feb 15, 2023 | 10:19 AM

Share

ದೆಹಲಿಯಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆ ಸುದ್ದಿ ಮಾಸುವ ಮುನ್ನ ಮತ್ತೊಂದು ಭೀಕರ ಹತ್ಯೆ ನಡೆದುಬಿಟ್ಟಿದೆ. ಲಿವ್​ ಇನ್​ ಸಂಬಂಧದಲ್ಲಿದ್ದ ಸಂಗಾತಿಯನ್ನು ಹತ್ಯೆ ಮಾಡಿ ಹಾಸಿಗೆಯ  ಕೆಳಗೆ ಬಚ್ಚಿಟ್ಟಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪಾಲಘಡದಲ್ಲಿ ಈ ಘಟನೆ ನಡೆದಿದೆ, ಆರೋಪಿಯು ತನ್ನ ಪ್ರೇಯಸಿಯನ್ನು ಕೊಂದು ರಾಜ್ಯದಿಂದ ಪರಾರಿಯಾಗಲು ಯತ್ನಿಸಿದ್ದ ಎನ್ನಲಾಗಿದೆ. ಮಂಗಳವಾರ ಮಧ್ಯಪ್ರದೇಶದ ರೈಲಿನಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೋಲೀಸರ ಪ್ರಕಾರ, ಸೋಮವಾರ ಪಾಲಘಡ ಜಿಲ್ಲೆಯ ತುಲಿಂಜ್ ಪ್ರದೇಶದ ಮನೆಯೊಳಗೆ ಹಾಸಿಗೆಯ ಕೆಳಗೆ ಮೇಘಾ (37) ಶವವನ್ನು ವಶಪಡಿಸಿಕೊಳ್ಳಲಾಗಿದೆ.

ಲಿವ್ ಇನ್ ಪಾರ್ಟ್ನರ್ ಮೇಘಾಳನ್ನು ಕೊಂದು ಶವವನ್ನು ಬಚ್ಚಿಟ್ಟಿದ್ದ ಎಂದು ಆರೋಪಿಸಲಾಗಿದೆ. ತುಳಿಂಜ್‌ನ ಪೊಲೀಸ್ ಅಧಿಕಾರಿಯ ಪ್ರಕಾರ, ಒಂದು ವಾರದ ಹಿಂದೆ ಮೇಘಾ ಕೊಲೆಯಾಗಿದ್ದಾಳೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ದೇಹ ಕೊಳೆತು ವಾಸನೆ ಬರಲಾರಂಭಿಸಿದಾಗ ಆರೋಪಿ ಮನೆಯಿಂದ ಓಡಿ ಹೋಗಲು ಯತ್ನಿಸಿದ್ದಾನೆ. ಮಂಗಳವಾರ ಮಧ್ಯಪ್ರದೇಶದ ನಾಗರಾದಲ್ಲಿ ರೈಲಿನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ಮತ್ತಷ್ಟು ಓದಿ: Shraddha Walker Murder Case: ಶಿಕ್ಷಿತ ಹೆಣ್ಣು ಮಕ್ಕಳು ಈ ಘಟನೆಯಿಂದ ಪಾಠ ಕಲಿಯಬೇಕಿದೆ: ಕೇಂದ್ರ ಸಚಿವ ಕೌಶಲ್

ಪೊಲೀಸ್ ಮತ್ತು ಸ್ಥಳೀಯ ಮೂಲಗಳ ಪ್ರಕಾರ, ಆರೋಪಿ ಯುವಕ ಮತ್ತು ಪಾಲಘಡದ ತುಳಿಂಜ್ ಪ್ರದೇಶದ ನಿವಾಸಿ ಮೇಗಾ ಅವರು ದೀರ್ಘಕಾಲ ಲಿವ್-ಇನ್‌ನಲ್ಲಿ ವಾಸಿಸುತ್ತಿದ್ದರು. ಇತ್ತೀಚೆಗೆ ಆರೋಪಿ ಕೆಲಸ ಕಳೆದುಕೊಂಡಿದ್ದ. ಅಂದಿನಿಂದ ಇಬ್ಬರ ನಡುವೆ ನಾನಾ ವಿಚಾರಗಳಲ್ಲಿ ಜಗಳ ಶುರುವಾಗಿದೆ. ಆ ವಿವಾದದಿಂದಲೇ ಆರೋಪಿ ಮೇಘಾನನ್ನು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ . ನಂತರ ಘಟನೆಯನ್ನು ಮರೆಮಾಚಲು, ರೋಮಿಯೋ ತನ್ನ ಪ್ರೇಮಿಯ ದೇಹವನ್ನು ಹಾಸಿಗೆಯ ಕೆಳಗೆ ಬಚ್ಚಿಟ್ಟಿದ್ದ, ಇತ್ತೀಚೆಗಷ್ಟೇ ಅವರ ಮನೆಯಿಂದ ದುರ್ವಾಸನೆ ಬೀರಲಾರಂಭಿಸಿತ್ತು. ಘಟನೆ ಗೊತ್ತಾಗುತ್ತದೆ ಎಂಬ ಭಯದಿಂದ ಆರೋಪಿಗಳು ಮನೆ ಬಿಟ್ಟು ಹೊರ ರಾಜ್ಯಕ್ಕೆ ಪರಾರಿಯಾಗಲು ಯತ್ನಿಸಿದ್ದ.

ಬಳಿಕ ಆರೋಪಿಯ ಮನೆಯಿಂದ ವಾಸನೆ ಬರುತ್ತಿದ್ದ ಬಗ್ಗೆ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಮನೆಯ ಬಾಗಿಲು ಒಡೆದು ಒಳ ನುಗ್ಗಿ ಶೋಧ ನಡೆಸಿದಾಗ ಹಾಸಿಗೆ ಕೆಳಗೆ ಮೇಘಾ ಶವ ಪತ್ತೆಯಾಗಿದೆ. ಆರೋಪಿ ಪ್ರೇಮಿಯನ್ನು ಕೊಂದ ನಂತರ, ಮನೆಯಿಂದ ಹೊರಹೋಗುವ ಮೊದಲು ಇಡೀ ಘಟನೆಯ ಬಗ್ಗೆ ತನ್ನ ಸಹೋದರಿಗೆ ಸಂದೇಶ ನೀಡಿದ್ದಾನೆ ಎಂದು ಪೊಲೀಸರಿಗೆ ತಿಳಿದುಬಂದಿದೆ. ನಂತರ ಓಡಿ ಹೋಗಲು ಯತ್ನಿಸಿದ್ದಾನೆ. ಆತನ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ತುಳಿಂಜ್ ಪೊಲೀಸರು ತಿಳಿಸಿದ್ದಾರೆ.

ಶ್ರದ್ಧಾ ವಾಕರ್ ಹತ್ಯೆ

ಶ್ರದ್ಧಾ ವಾಕರ್ ಲಿವ್ ಇನ್ ಪಾರ್ಟ್ನರ್ ಅಫ್ತಾಬ್ ಪೂನಾವಾಲಾ ಆಕೆಯನ್ನು ಹತ್ಯೆ ಮಾಡಿ, ಫ್ರಿಡ್ಜ್​ನಲ್ಲಿಟ್ಟು, ವಾರಗಟ್ಟಲೆ ಆಕೆಯ ಒಂದೊಂದೇ ಭಾಗವನ್ನು ನಗರದ ಇತರೆ ಭಾಗಗಳಿಗೆ ಎಸೆದು ಬರುತ್ತಿದ್ದ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ