AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಕುಟುಂಬದ 9 ಜನರ ಶವ ಪತ್ತೆ ಪ್ರಕರಣ: ಮೂಢನಂಬಿಕೆಗೆ ಮಾರುಹೋಗಿ ಕೊಲೆಯಾದ ಕುಟುಂಬಸ್ಥರು

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆ ಮೈಸಾಳ ಗ್ರಾಮದಲ್ಲಿ  ಒಂದೇ ಕುಟುಂಬದ 9 ಜನರ ಶವ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ್​​ ತನಿಖೆಯಲ್ಲಿ ಇದು ಆತ್ಮಹತ್ಯೆಯಲ್ಲ ಕೊಲೆ  ಎಂದು ಬಹಿರಂಗಕೊಂಡಿದೆ.

ಒಂದೇ ಕುಟುಂಬದ 9 ಜನರ ಶವ ಪತ್ತೆ ಪ್ರಕರಣ: ಮೂಢನಂಬಿಕೆಗೆ ಮಾರುಹೋಗಿ ಕೊಲೆಯಾದ ಕುಟುಂಬಸ್ಥರು
ಸಾಂಕೇತಿಕ ಚಿತ್ರ
TV9 Web
| Updated By: ವಿವೇಕ ಬಿರಾದಾರ|

Updated on: Jul 07, 2022 | 10:34 PM

Share

ಮಹಾರಾಷ್ಟ್ರ: ಮಹಾರಾಷ್ಟ್ರದ (Maharashtra) ಸಾಂಗ್ಲಿ (Sangli) ಜಿಲ್ಲೆ ಮೈಸಾಳ ಗ್ರಾಮದಲ್ಲಿ  ಒಂದೇ ಕುಟುಂಬದ 9 ಜನರ ಶವ  ಪತ್ತೆಯಾಗಿದ್ದ  ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆಯಲ್ಲಿ ಇದು ಆತ್ಮಹತ್ಯೆಯಲ್ಲ ಕೊಲೆ (Murder)  ಎಂದು ಬಹಿರಂಗಕೊಂಡಿದೆ. 9 ಜನರ ಕೊಲೆಗೆ ಮೂಢನಂಬಿಕೆಯೇ ಕಾರಣವೆಂದು ಸಾಂಗ್ಲಿ ಪೊಲೀಸ್ ವರಿಷ್ಠಾಧಿಕಾರಿ ದೀಕ್ಷಿತ್ ಗೆಡಮ್ ಮಾಹಿತಿ ನೀಡಿದ್ದಾರೆ.

ಘಟನೆ ಸಂಬಂಧ ಮಿರಜ್ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೆಹಸಾಲ್ ಗ್ರಾಮದ ಮನೆಯಲ್ಲಿ 3 ದೇಹಗಳು ಒಂದೇ ಕಡೆ ಬಿದ್ದಿದ್ದವು. 6 ದೇಹಗಳು ಚೆಲ್ಲಾಪಿಲ್ಲಿಯಾಗಿದ್ದವು. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ ಎಂದು ಸಾಂಗ್ಲಿ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದರು. ಆದರೆ ಪ್ರಕರಣದ ತನಿಕೆಯನ್ನು ನಡೆಸಿದ ಪೊಲೀಸರಿಗೆ ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ತಿಳಿದು ಬಂದಿದೆ.

ಅಬ್ಬಾಸ್ ಮೊಹಮ್ಮದ್ ಅಲಿ ಬಾಗವಾನ್ ಮತ್ತು ಧೀರಜ್ ಚಂದ್ರಕಾಂತ್ ಸುರವೇಶ್ ಶಂಕಿತ ಆರೋಪಿಗಳು ಹಣದ ಆಸೆಗಾಗಿ ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಶಂಕಿತ ಆರೋಪಿಗಳು ಆಗಾಗ ವನಮೋರೆ ಕುಟುಂಬದಿಂದ ದೊಡ್ಡ ಮೊತ್ತದ ಹಣವನ್ನು ಪಡೆಯುತ್ತಿದ್ದರು ಎಂದು ತನಿಕೆ ವೇಳೆ ತಿಳಿದು ಬಂದಿದೆ. ತನಿಖೆ ವೇಳೆ ದೊರೆತ ಡೆತ್ ನೋಟ್ ನಲ್ಲಿ 25 ಜನರ ಮೇಲೆ ಹಣ ವರ್ಗಾವಣೆ ಮಾಡಿರುವ ಆರೋಪವಿದೆ.

ಇದನ್ನೂ ಓದಿ
Image
ಭೋಪಾಲ್: ಸಾರ್ವಜನಿಕರ ಮುಂದೆಯೇ ಪತ್ನಿಯ ಮೇಲೆ ಪೆಟ್ರೋಲ್​​ ಸುರಿದು ಬೆಂಕಿ ಹಚ್ಚಿದ ವ್ಯಕ್ತಿ
Image
Railway Travelling Ticket Examiner: ಆರು ತಿಂಗಳಿನಿಂದ ಅಸಲಿ ಟಿಟಿ ರೂಪದಲ್ಲಿ ವಾಕಿ ಟಾಕಿ ಹಿಡಿದು ಪ್ರಯಾಣಿಕರಿಂದ ಹಣ ವಸೂಲಿ ಮಾಡ್ತಿದ್ದ ನಕಲಿ ಟಿಟಿ ಅರೆಸ್ಟ್
Image
ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ; ಕೊಲೆಗೆ ಕಾರಣ ತಿಳಿಸಿದ ಆರೋಪಿಗಳು
Image
ರಾಜಸ್ಥಾನ ಮತ್ತು ಬೆಂಗಳೂರು ಪೊಲೀಸರ​ ಜಂಟಿ ಕಾರ್ಯಾಚರಣೆ: ಉದಯಪುರದಲ್ಲಿ ಗುಂಡು ಹಾರಿಸಿ 4 ದರೋಡೆಕೋರರ ಬಂಧನ, 3 ಕೆಜಿ ಚಿನ್ನ ವಶ

ದುಷ್ಕರ್ಮಿಗಳು ವನಮೋರೆ ಕುಟುಂಬದವರಿಗೆ ಪದೇ ಪದೇ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಜೂನ್ 20ರ ರಾತ್ರಿ ಶಂಕಿತ ಆರೋಪಿಗಳು ರಹಸ್ಯವಾಗಿ ಹಣ ಪಡೆಯಲು ಮೈಸಾಳನಲ್ಲಿರುವ ವನಮೋರೆ ಮನೆಯಲ್ಲಿ ಪೂಜೆ ಮಾಡಿದ್ದಾರೆ. ಪೂಜೆಯ ವೇಳೆ ಎಲ್ಲರಿಗೂ ಪ್ರತ್ಯೇಕವಾಗಿ ವಿಷ ಕೊಟ್ಟು ಇಬ್ಬರೂ ಹೊರಟು ಹೋಗಿದ್ದಾರೆ. ಮಧ್ಯರಾತ್ರಿ ಸುಮಾರಿಗೆ ವನಮೊರೆ ಕುಟುಂಬದ 9 ಸದಸ್ಯರು ವಿಷ ಸೇವಿಸಿ ಸಾವನ್ನಪ್ಪಿದ್ದಾರೆ.

ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾಗ ಸಾಂಗ್ಲಿ ಪೊಲೀಸರಿಗೆ ಮೊದಲು ಇದು ಆತ್ಮಹತ್ಯೆ ಎಂದು ತಿಳಿದು ಬಂದಿತ್ತು. ಒಂದು ಸುತ್ತಿನ ತನಿಖೆಯ ನಂತರ ಇದು ಆತ್ಮಹತ್ಯೆಯಲ್ಲ ಕೊಲೆ ಎಂಬುದು ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೊಲ್ಲಾಪುರದಲ್ಲಿ ಮಂತ್ರವಾದಿ ಹಾಗೂ ಸಹಚರ ಬಂಧಿಸಲಾಗಿದೆ. ಬಂಧನ ನಂತರ ಗುಪ್ತವಾಗಿ ಇಬ್ಬರೂ ಮೋಸತನದಿಂದ ಆಗಾಗ ಹಣ ಪಡೆದಿರುವುದು ಬೆಳಕಿಗೆ ಬಂದಿದೆ. ಘಟನೆ ನಡೆದ ದಿನ ಸೊಲ್ಲಾಪುರದ ಮಂತ್ರವಾದಿಯೊಬ್ಬರು ಪೂಜೆ ಸಲ್ಲಿಸಿ ವಿಷ ಕುಡಿಯಲು ನೀಡಿದ್ದರು ಎಂದು ತಿಳಿದು ಬಂದಿದೆ.‘

ಪೂಜೆಯ ವೇಳೆ 1100 ಗೋಧಿಯನ್ನು ಏಳು ಬಾರಿ ಎಣಿಸಲು ಕುಟುಂಬದವರಿಗೆ ಹೇಳಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಇಷ್ಟೆಲ್ಲ ಘಟನೆ ಮೂಢನಂಬಿಕೆಯಿಂದಾಗಿ ನಡೆದಿದ್ದು, ಮೂಢನಂಬಿಕೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ