AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ಯೂಟ್ಯೂಬ್​ ನೋಡಿ ಶಿಶುವಿಗೆ ಜನ್ಮ ನೀಡಿ, ಬಳಿಕ ಮಗುವಿನ ಕತ್ತು ಹಿಸುಕಿ ಕೊಲೆ ಮಾಡಿದ ಅಪ್ರಾಪ್ತ ಬಾಲಕಿ

ಅಪ್ರಾಪ್ತ ಬಾಲಕಿಯೊಬ್ಬಳು ಯೂಟ್ಯೂಬ್ ವಿಡಿಯೋವನ್ನು ನೋಡಿ ಮಗುವಿಗೆ ಜನ್ಮ ನೀಡಿ ಬಳಿಕ ಶಿಶುವಿನ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.

Maharashtra: ಯೂಟ್ಯೂಬ್​ ನೋಡಿ ಶಿಶುವಿಗೆ ಜನ್ಮ ನೀಡಿ, ಬಳಿಕ ಮಗುವಿನ ಕತ್ತು ಹಿಸುಕಿ ಕೊಲೆ ಮಾಡಿದ ಅಪ್ರಾಪ್ತ ಬಾಲಕಿ
ಶಿಶು
ನಯನಾ ರಾಜೀವ್
|

Updated on: Mar 06, 2023 | 9:12 AM

Share

ಅಪ್ರಾಪ್ತ ಬಾಲಕಿಯೊಬ್ಬಳು ಯೂಟ್ಯೂಬ್ ವಿಡಿಯೋವನ್ನು ನೋಡಿ ಮಗುವಿಗೆ ಜನ್ಮ ನೀಡಿ ಬಳಿಕ ಶಿಶುವಿನ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಅಲ್ಲಿಯ 15 ವರ್ಷದ ಅಪ್ರಾಪ್ತ ಬಾಲಕಿ ಯೂಟ್ಯೂಬ್ ವಿಡಿಯೋ ಸಹಾಯದಿಂದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ, ನಂತರ ನವಜಾತ ಶಿಶುವನ್ನು ಕತ್ತು ಹಿಸುಕಿ ಸಾಯಿಸಿದ್ದಾಳೆ. ಇಲ್ಲಿ ನವಜಾತ ಶಿಶುವನ್ನು ಕೊಂದು ಬಳಿಕ ಮೃತದೇಹವನ್ನು ತನ್ನ ಮನೆಯ ಪೆಟ್ಟಿಗೆಯಲ್ಲಿ ಬಚ್ಚಿಟ್ಟಿದ್ದಾಳೆ.

ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಪೊಲೀಸ್ ಅಧಿಕಾರಿಯ ಪ್ರಕಾರ, ಅಪ್ರಾಪ್ತ ವಯಸ್ಕಳನ್ನು ವಿಚಾರಣೆಗೆ ಒಳಪಡಿಸಿದಾಗ, ಆಕೆ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸಕ್ರಿಯವಾಗಿರುವುದು ಕಂಡುಬಂದಿದೆ. ಅಷ್ಟರಲ್ಲಿ ರಮೇಶ್ ಠಾಕೂರ್ ಎಂಬ ವ್ಯಕ್ತಿಯ ಪರಿಚಯವಾಯಿತು.

ಸಂಭಾಷಣೆ ಕ್ರಮೇಣ ಪ್ರೀತಿಗೆ ತಿರುಗಿತು ಮತ್ತು ನಂತರ ಇಬ್ಬರೂ ಭೇಟಿಯಾಗಲು ಪ್ರಾರಂಭಿಸಿದರು. ಒಂದು ದಿನ, ಹುಡುಗಿಯನ್ನು ಪ್ರೇರೇಪಿಸುವ ಮೂಲಕ, ಅವನು ಅವಳೊಂದಿಗೆ ಬಲವಂತವಾಗಿ ದೈಹಿಕ ಸಂಬಂಧವನ್ನು ಹೊಂದಿದ್ದನು, ಇದರಿಂದಾಗಿ ಅವಳು ಗರ್ಭಿಣಿಯಾದಳು. ತನಗೆ ಕೆಲವು ಆರೋಗ್ಯ ಸಮಸ್ಯೆಗಳಿವೆ ಎಂದು ಕುಟುಂಬ ಸದಸ್ಯರಿಗೆ ಗೊತ್ತಾಗದಂತೆ ಬಾಲಕಿ ತನ್ನ ತಾಯಿಯ ಬಳಿ ಹೇಳಿಕೊಂಡಿದ್ದಳು, ಆಕೆ ಗರ್ಭಿಣಿಯಾಗಿದ್ದು ಯಾರಿಗೂ ತಿಳಿದಿರಲಿಲ್ಲ.

ಮಾ.3ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೋವು ಕಾಣಿಸಿಕೊಂಡಿತ್ತು. ಯೂಟ್ಯೂಬ್ ವೀಡಿಯೋಗಳ ಸಹಾಯದಿಂದ ಮನೆಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಮತ್ತು ನಂತರ ನವಜಾತ ಶಿಶುವನ್ನು ಕತ್ತು ಹಿಸುಕಿ ಸಾಯಿಸಿದ್ದಾಳೆ. ಈ ವಿಚಾರ ಕುಟುಂಬಸ್ಥರಿಗೆ ತಿಳಿಯದ ಕಾರಣ ನವಜಾತ ಶಿಶುವಿನ ಮೃತದೇಹವನ್ನು ಪ್ಲಾಸ್ಟಿಕ್ ಬಾಕ್ಸ್ ನಲ್ಲಿ ಹಾಕಿ ಮನೆಯಲ್ಲೇ ಬಚ್ಚಿಟ್ಟಿದ್ದಳು.

ಮತ್ತಷ್ಟು ಓದಿ:ಬೆಳಗಾವಿ: ರಾತ್ರಿ ಮನೆಯಿಂದ ಆಚೆ ಹೋದವ ಬರ್ಬರವಾಗಿ ಕೊಲೆಯಾದ, ಆಂಟಿಗಾಗಿ ಬಿತ್ತು ಹೆಣ

ಮನೆಗೆ ಮರಳಿದ ತಾಯಿ ಮಗಳ ಆರೋಗ್ಯದ ಬಗ್ಗೆ ವಿಚಾರಿಸಿದರು. ಬಾಲಕಿ ಭಯದಿಂದ ಬಂದು ತನ್ನ ತಾಯಿಗೆ ಇಡೀ ಘಟನೆಯನ್ನು ಹೇಳಿದ್ದಾಳೆ, ನಂತರ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದಾದ ನಂತರ ವಿಷಯ ನಾಗಪುರದ ಅಂಬಾಝರಿ ಪೊಲೀಸ್ ಠಾಣೆಗೆ ತಲುಪಿತ್ತು.

ಪೊಲೀಸರು ನವಜಾತ ಶಿಶುವಿನ ಶವವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅದೇ ವೇಳೆ ಅಪ್ರಾಪ್ತ ಬಾಲಕಿಯ ಮಾಹಿತಿ ಮೇರೆಗೆ ಪೊಲೀಸರು ಆರೋಪಿ ವಿರುದ್ಧ ಅತ್ಯಾಚಾರ ಮತ್ತು ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?