AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಮೊಬೈಲ್ ರಿಚಾರ್ಜ್ ವಿಚಾರಕ್ಕೆ ಗಲಾಟೆ; ರಾಡ್​​ನಿಂದ ಹೊಡೆದು ಪತ್ನಿಯ ಕೊಲೆ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಮಂಡ್ಯ ಜಿಲ್ಲೆಯ ಮಳವಳ್ಳಿ (Malavalli)  ತಾಲೂಕಿನ ದೇಶವಳ್ಳಿ ಗ್ರಾಮದಲ್ಲಿ ಮೊಬೈಲ್ ರಿಚಾರ್ಜ್ ವಿಚಾರಕ್ಕೆ ಗಲಾಟೆಯಾಗಿ ಪತ್ನಿಯನ್ನೇ ರಾಡ್​ನಿಂದ ಹೊಡೆದು ಹತ್ಯೆ ಮಾಡಿದ ಘಟನೆ ನಡೆದಿದೆ. ಬಳಿಕ ಪತಿ ಮಗುವಿನ ಜೊತೆ ಪೊಲೀಸರ ಮುಂದೆ ಶರಣಾಗಿದ್ದಾನೆ.

ಮಂಡ್ಯ: ಮೊಬೈಲ್ ರಿಚಾರ್ಜ್ ವಿಚಾರಕ್ಕೆ ಗಲಾಟೆ; ರಾಡ್​​ನಿಂದ ಹೊಡೆದು ಪತ್ನಿಯ ಕೊಲೆ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
ಪ್ರಾತಿನಿಧಿಕ ಚಿತ್ರ
ಪ್ರಶಾಂತ್​ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on:Dec 13, 2023 | 4:57 PM

Share

ಮಂಡ್ಯ, ಡಿ.13: ಮೊಬೈಲ್ ರಿಚಾರ್ಜ್ ವಿಚಾರಕ್ಕೆ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ (Malavalli)  ತಾಲೂಕಿನ ದೇಶವಳ್ಳಿ ಗ್ರಾಮದಲ್ಲಿ ನಡೆದಿದೆ. ರಾಡ್​​ನಿಂದ ಹೊಡೆದು ಪತ್ನಿ ಮಧುಶ್ರೀ(32) ಅವರನ್ನು ಪತಿ ಮಹದೇವ್(38) ಕೊಲೆ ಮಾಡಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಮೃತ ಮಧುಶ್ರೀ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರೆ, ಇತ್ತ ಆರೋಪಿ ಮಹದೇವ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಪತ್ನಿ ಮೇಲೆ ಅನುಮಾನ ಪಡುತ್ತಿದ್ದ ಇತ, ಇದೇ ವಿಚಾರಕ್ಕೆ ದಂಪತಿ ನಡುವೆ ಆಗಾಗ ಗಲಾಟೆ ಆಗುತ್ತಿತ್ತು.

ಪತಿಯ ಅನುಮಾನದ ಭೂತಕ್ಕೆ ತವರು ಸೇರಿದ್ದ ಪತ್ನಿ ಮಧುಶ್ರೀ

ಪತಿಯ ಅನುಮಾನದ ಹಿನ್ನಲೆ ಪತ್ನಿ ಮಧುಶ್ರೀ ತವರು ಮನೆ ಸೇರಿದ್ದಳು. ಬಳಿಕ ರಾಜಿ ಪಂಚಾಯಿತಿ ಮಾಡಿ 2 ತಿಂಗಳ ಹಿಂದೆ ಪತಿ ಮನೆಗೆ ಬಂದಿದ್ದಳು. ನಿನ್ನೆ(ಡಿ.12) ಮೊಬೈಲ್ ರಿಚಾರ್ಜ್ ವಿಚಾರಕ್ಕೆ ದಂಪತಿ ನಡುವೆ ಗಲಾಟೆ ಶುರುವಾಗಿದೆ. ಈ ವೇಳೆ ಜಗಳ ತಾರಕಕ್ಕೇರಿದ್ದು, ಕೋಪಗೊಂಡ ಪತಿ, ರಾಡ್​​ನಿಂದ ಹೊಡೆದು ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಘಟನೆ ಬಳಿಕ ಮಗು ಜೊತೆ ಪೊಲೀಸರ ಮುಂದೆ ಶರಣಾಗಿ, ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಈ ಕುರಿತು ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಅನೈತಿಕ ಸಂಬಂಧಕ್ಕೆ ಪತ್ನಿ ಅಡ್ಡಿ ಎಂದು ವಿಷದ ಇಂಜೆಕ್ಷನ್ ಚುಚ್ಚಿ ಕೊಲೆ ಆರೋಪ, ಪತಿಯ ಲವರ್ ಜೊತೆ ಪತ್ನಿ ಮಾತನಾಡಿದ ಆಡಿಯೋ ಪತ್ತೆ

ಬೈಕ್​ಗೆ ಮಹಾರಾಷ್ಟ್ರ ಸಾರಿಗೆ ಬಸ್​ ಡಿಕ್ಕಿ, ಬಾಲಕಿ ಸ್ಥಳದಲ್ಲೇ ಸಾವು

ವಿಜಯಪುರ: ಬೈಕ್​ಗೆ ಮಹಾರಾಷ್ಟ್ರ ಸಾರಿಗೆಯ ಬಸ್​ ಡಿಕ್ಕಿಯಾಗಿ ಬಾಲಕಿ ಸ್ಥಳದಲ್ಲೇ ಕೊನೆಯುಸಿರೆಳೆದ ಘಟನೆ ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದಲ್ಲಿ ನಡೆದಿದೆ. ಸವಿತಾ ಪೂಜಾರಿ(15) ಮೃತ ರ್ದುದೈವಿ., ಬಾಲಕಿ ತಂದೆ ಮುದಗೊಂಡಗೆ ಗಾಯವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ವಡರಟ್ಟಿ ಗ್ರಾಮದ ನಿವಾಸಿಗಳಾದ ತಂದೆ-ಮಗಳು, ಅರಕೇರಿ ಅಮೋಘ ಸಿದ್ದೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. MH 13 CU 6338 ನಂಬರ್​ನ ಮಹಾರಾಷ್ಟ್ರದ ಸರ್ಕಾರಿ ಬಸ್, ಹಾಗೂ ಚಾಲಕನನ್ನು ತಿಕೋಟಾ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:27 pm, Wed, 13 December 23

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ