AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಮಾಲ್ ಮಾಲೀಕರು ಸಂಜನಾಳಿಂದ ಬಡ್ಡಿಗೆ ಹಣ ಪಡೆದಿದ್ದಾರೆ!!

ಡ್ರಗ್ಸ್ ಜಾಲದಲ್ಲಿ ಸಕ್ರಿಯಳಾಗಿದ್ದ ಆರೋಪದಲ್ಲಿ ಜೈಲು ಸೇರಿರುವ ಚಿತ್ರನಟಿ ಸಂಜನಾ ಗಲ್ರಾನಿಯ ಬಗ್ಗೆ ಮತ್ತಷ್ಟು ಕೌತುಕಮಯ ಮತ್ತು ಅಷ್ಟೇ ರೋಚಕ ಸಂಗತಿಗಳನ್ನು ಸಿಸಿಬಿ ಮತ್ತು ಇಡಿ ಅಧಿಕಾರಿಗಳು ಬಯಲಿಗೆಳೆಯುತ್ತಿದ್ದಾರೆ. ಆಕೆ ಮಾಲ್ ಮಾಲೀಕರಿಗೂ ಬಡ್ಡಿಗೆ ಹಣ ನೀಡಿದ್ದ ವಿಷಯವೀಗ ಹೊರಬಿದ್ದಿದೆ. ತಾನು ಕೊಟ್ಟ ಸಾಲವನ್ನು ಮತ್ತು ಬಡ್ಡಿಯನ್ನು ವಸೂಲು ಮಾಡಲು 4 ಜನರನ್ನ ಸಂಜನಾ ಇಟ್ಟುಕೊಂಡಿದ್ದಳಂತೆ. ಸಾಲಗಾರರು ಹಣ ಹಿಂತಿರುಗಿಸಲು ವಿಳಂಬಿಸಿದರೆ ಅವರ ದುಬಾರಿ ಕಾರುಗಳನ್ನು ತೆಗೆದುಕೊಂಡು ಬರುವಂತೆ ತನ್ನ ಸಹಾಯಕರಿಗೆ ಹೇಳುತ್ತಿದ್ದಳಂತೆ. ಸಂಜನಾಳ ಖಜಾನೆ ಲೆಕ್ಕ […]

ಬೆಂಗಳೂರಿನ ಮಾಲ್ ಮಾಲೀಕರು ಸಂಜನಾಳಿಂದ ಬಡ್ಡಿಗೆ ಹಣ ಪಡೆದಿದ್ದಾರೆ!!
ಅರುಣ್​ ಕುಮಾರ್​ ಬೆಳ್ಳಿ
|

Updated on: Oct 01, 2020 | 10:06 PM

Share

ಡ್ರಗ್ಸ್ ಜಾಲದಲ್ಲಿ ಸಕ್ರಿಯಳಾಗಿದ್ದ ಆರೋಪದಲ್ಲಿ ಜೈಲು ಸೇರಿರುವ ಚಿತ್ರನಟಿ ಸಂಜನಾ ಗಲ್ರಾನಿಯ ಬಗ್ಗೆ ಮತ್ತಷ್ಟು ಕೌತುಕಮಯ ಮತ್ತು ಅಷ್ಟೇ ರೋಚಕ ಸಂಗತಿಗಳನ್ನು ಸಿಸಿಬಿ ಮತ್ತು ಇಡಿ ಅಧಿಕಾರಿಗಳು ಬಯಲಿಗೆಳೆಯುತ್ತಿದ್ದಾರೆ. ಆಕೆ ಮಾಲ್ ಮಾಲೀಕರಿಗೂ ಬಡ್ಡಿಗೆ ಹಣ ನೀಡಿದ್ದ ವಿಷಯವೀಗ ಹೊರಬಿದ್ದಿದೆ. ತಾನು ಕೊಟ್ಟ ಸಾಲವನ್ನು ಮತ್ತು ಬಡ್ಡಿಯನ್ನು ವಸೂಲು ಮಾಡಲು 4 ಜನರನ್ನ ಸಂಜನಾ ಇಟ್ಟುಕೊಂಡಿದ್ದಳಂತೆ. ಸಾಲಗಾರರು ಹಣ ಹಿಂತಿರುಗಿಸಲು ವಿಳಂಬಿಸಿದರೆ ಅವರ ದುಬಾರಿ ಕಾರುಗಳನ್ನು ತೆಗೆದುಕೊಂಡು ಬರುವಂತೆ ತನ್ನ ಸಹಾಯಕರಿಗೆ ಹೇಳುತ್ತಿದ್ದಳಂತೆ.

ಸಂಜನಾಳ ಖಜಾನೆ ಲೆಕ್ಕ ಕೇಳಿ ಇಡಿ ಅಧಿಕಾರಿಗಳೇ ದಂಗಾಗಿದ್ದಾರೆ. ಆಕೆಯ 11 ಅಕೌಂಟ್​ಗಳಲ್ಲಿ 40 ಲಕ್ಷ ಬ್ಯಾಲೆನ್ಸ್ ಇದೆಯಂತೆ. ವಿದೇಶಗಳಿಂದಲೂ ನಟಿ ಖಾತೆಗೆ ಹಣ ಜಮೆಯಾಗಿರಬಹುದಾದ ಸಂಶಯವೂ ಅವರಲ್ಲಿ ಹುಟ್ಟಿಕೊಂಡಿದೆ. ಸಂಜನಾ ಇಲ್ಲಿಯವರೆಗೆ 20ಕ್ಕೂ ಹೆಚ್ಚು ಪ್ರತಿಷ್ಠಿತ ಉದ್ಯಮಿಗಳಿಗೆ ಕೋಟಿಗಳ ಲೆಕ್ಕದಲ್ಲಿ ಸಾಲ ಕೊಟ್ಟಿರುವ ಮಾಹಿತಿ ಅಧಿಕಾರಿಗಳಿಗೆ ದೊರೆತಿದೆ. ಖುದ್ದು ಸಂಜನಾ ತಾನು ಸಾಲ ಕೊಟ್ಟಿರುವ ವಿಷಯವನ್ನು ಹೇಳಿದ್ದಾಳಂತೆ. ಅಲ್ಲದೆ, ಇಡಿ ಅಧಿಕಾರಿಗಳು ಆಕೆಯ ಮನೆ ಮೇಲೆ ದಾಳಿ ನಡೆಸಿದಾಗ ಹತ್ತಾರು ಚೆಕ್​ಗಳು ಸಿಕ್ಕಿವೆ. ಅದೇ ಆಧಾರದಲ್ಲಿ ಆಕೆಯನ್ನು ಪ್ರಶ್ನಿಸಿದಾಗ ಸಾಲ ನೀಡುತ್ತಿದ್ದ ವಿಷಯ ಗೊತ್ತಾಗಿದೆ.

ಅಂದಹಾಗೆ, ಡ್ರಗ್ಸ್ ಮಾಫಿಯಾದಲ್ಲಿ ಅಕ್ರಮ ಹಣಕಾಸು ವರ್ಗಾವಣೆಯ ಬೆನ್ನತ್ತಿರುವ ಇಡಿ ಕೇರಳ ಮಾಜಿ ಗೃಹ ಸಚಿವರ ಪುತ್ರನ ವಿಚಾರಣೆ ನಡೆಸಲು ಮುಂದಾಗಿದೆ. ಡ್ರಗ್ಸ್ ಜಾಲದಲ್ಲಿ ಕೋಟ್ಯಂತರ ರೂ. ಅಕ್ರಮ ಹಣ ಹರಿದಿರುವ ಸುಳಿವು ಸಿಗುತ್ತಿದ್ದಂತೆ ಆ ಜಾಲದ ಜಾಡು ಹಿಡಿದು ಹೊರಟಿರುವ ಇಡಿ ಅಧಿಕಾರಿಗಳು, ಕೇರಳ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣ ಪುತ್ರ ಬಿನೀಶ್ ಕೊಡಿಯೇರಿಗೆ ಸಮನ್ಸ್ ನೀಡಲು ಮುಂದಾಗಿದ್ದಾರೆ. ಕೇರಳದ ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಕೇರಳದಲ್ಲಿ ರಾಜಕೀಯ ಸಂಚಲನ ಉಂಟು ಮಾಡಿ ಚರ್ಚೆಗೆ ಗ್ರಾಸವಾದ ಕೇರಳದ ಚಿನ್ನ ಸ್ಮಗ್ಲಿಂಗ್ ಕೇಸ್‌ನಲ್ಲಿ ಸಿಕ್ಕಿಬಿದ್ದಿರುವ ಬಿನೀಶ್ ಕೊಡಿಯೇರಿ ಜತೆ ಎನ್‌ಸಿಬಿಯಿಂದ ಬಂಧನಕ್ಕೊಳಗಾಗಿರುವ ಮೊಹಮದ್ ಅನೂಪ್ ಹಣಕಾಸು ವ್ಯವಹಾರ ನಡೆಸಿರುವುದು ತನಿಖೆಯಲ್ಲಿ ಕಂಡು ಬಂದಿದ್ದು, ಈತನನ್ನು ಇಡಿ ಪ್ರತ್ಯೇಕವಾಗಿ ವಿಚಾರಣೆ ನಡೆಸಲಿದೆ. ಅನೂಪ್‌ಗೆ ಕಮ್ಮನಹಳ್ಳಿಯಲ್ಲಿ ರೆಸ್ಟೋರೆಂಟ್ ಖರೀದಿಸಲು ಬಿನೀಶ್ 50 ಲಕ್ಷ ರೂ. ನೀಡಿದ್ದ. ಆದರೆ, ಇದರ ಹಿಂದೆ ಬೇರೆ ಉದ್ದೇಶವಿರುವುದು ಇಡಿ ತನಿಖೆಯಲ್ಲಿ ಗೊತ್ತಾಗಿದೆ. ಚಿನ್ನದ ಸ್ಮಗ್ಲಿಂಗ್ ಕೇಸ್‌ನಲ್ಲಿ ಕೇರಳ ಇಡಿ ಬಿನೀಶ್‌ನ್ನು ವಿಚಾರಣೆ ನಡೆಸಿದಾಗ ಡ್ರಗ್ಸ್ ಕೇಸ್‌ನಲ್ಲಿ ಈತನ ಹೆಸರು ತಳುಕು ಹಾಕಿಕೊಂಡಿತ್ತು. ಇದರ ಬೆನ್ನಲ್ಲೇ ಕೇರಳ ಇಡಿ ಅಧಿಕಾರಿಗಳು ಬೆಂಗಳೂರು ಇಡಿ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಸಮನ್ಸ್ ಕೈಗೆ ಸಿಕ್ಕ ಕೂಡಲೇ ಬಿನೀಶ್ ಬೆಂಗಳೂರು ಇಡಿ ಅಧಿಕಾರಿಗಳ ಮುಂದೆ ಹಾಜರಾಗಬೇಕಿದೆ.

ಒಟ್ಟಿನಲ್ಲಿ ಡ್ರಗ್ಸ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಸಿಸಿಬಿಯಿಂದ ಬಂಧನಕ್ಕೊಳಗಾಗಿ ಜೈಲು ಸೇರಿರುವ ಸಂಜನಾಳ ಒರಿಜಿನಲ್ ಬಣ್ಣ ಕ್ರಮೇಣವಾಗಿ ಬಯಲಾಗುತ್ತಿದೆ

ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ