AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಮೀನು ಹಿಡಿಯುವ ವಿಚಾರಕ್ಕೆ ಸೋದರ ಸಂಬಂಧಿಗಳ ನಡುವೆ ಗಲಾಟೆ; ಕೊಲೆಯಲ್ಲಿ ಅಂತ್ಯ

ಕೋಲಾರ(Kolar) ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ಮೀನು ಹಿಡಿಯುವ ವಿಚಾರಕ್ಕೆ ಸೋದರ ಸಂಬಂಧಿಗಳ ನಡುವೆ ಗಲಾಟೆ ನಡೆದಿದ್ದು, ಈ ಕುರಿತು ನ್ಯಾಯ ಪಂಚಾಯಿತಿ ವೇಳೆ ಚಾಕುವಿನಿಂದ ಇರಿದು ಯುವಕನನ್ನ ಬರ್ಬರವಾಗಿ ಹತ್ಯೆ ಮಾಡಿದ ಧಾರುಣ ಘಟನೆ ನಡೆದಿದೆ.

ಕೋಲಾರ: ಮೀನು ಹಿಡಿಯುವ ವಿಚಾರಕ್ಕೆ ಸೋದರ ಸಂಬಂಧಿಗಳ ನಡುವೆ ಗಲಾಟೆ; ಕೊಲೆಯಲ್ಲಿ ಅಂತ್ಯ
ಮೀನು ಹಿಡಿಯುವ ವಿಚಾರದಲ್ಲಿ ಹತ್ಯೆ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Apr 13, 2024 | 6:18 PM

Share

ಕೋಲಾರ, ಏ.13: ಮೀನು ಹಿಡಿಯುವ ವಿಚಾರದಲ್ಲಿ ಸೋದರ ಸಂಬಂಧಿಗಳ ನಡುವೆ ಗಲಾಟೆ ನಡೆದಿದ್ದು, ಈ ಕುರಿತು ನ್ಯಾಯ ಪಂಚಾಯಿತಿ ವೇಳೆ ಚಾಕುವಿನಿಂದ ಇರಿದು ಯುವಕನನ್ನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕೋಲಾರ(Kolar) ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ನಡೆದಿದೆ. ಲೋಕೇಶ್, ಕೊಲೆಯಾದ ಯುವಕ. ಮತ್ತೋರ್ವ ದರ್ಶನ್‌ಗೆ ಗಂಭೀರ ಗಾಯವಾಗಿದ್ದು, ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಟೇಕಲ್‌ನ ಈಶ್ವರ ಕೆರೆಯಲ್ಲಿ ಮೀನು ಹಿಡಿಯುವಾಗ ಗಲಾಟೆ ನಡೆದಿತ್ತು. ಈ ಹಿನ್ನಲೆ ಹಿರಿಯರ ಸಮ್ಮುಖದಲ್ಲಿ ರಾಜಿ ಪಂಚಾಯಿತಿ ನಡೆಸಲಾಗುತ್ತಿತ್ತು. ಈ ವೇಳೆ ಸಹೋದರ ಸಂಬಂಧಿ ಪ್ರಮೋದ್‌ ಎಂಬಾತ ರೊಚ್ಚಿಗೆದ್ದು ಚಾಕುವಿನಿಂದ ತಿವಿದಿದ್ದಾನೆ. ಕೂಡಲೇ ಗಾಯಾಳು ಲೋಕೇಶ್​ನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ. ಮತ್ತೊಬ್ಬ ಗಾಯಾಳು ದರ್ಶನ್‌ಗೆ ಚಿಕಿತ್ಸೆ ಮುಂದುವರೆದಿದೆ. ಘಟನಾ ಸ್ಥಳಕ್ಕೆ ಕೋಲಾರ ಎಸ್‌ಪಿ ನಾರಾಯಣ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಸ್ನೇಹಿತನ ಎಟಿಎಂನಲ್ಲಿ ಹಣ ನೋಡಿ ಕೊಲೆ;​ ಪೋಸ್ಟ್ ಮಾರ್ಟಮ್ ರಿಪೋರ್ಟ್​ನಲ್ಲಿ ಹತ್ಯೆ ರಹಸ್ಯ ಬಯಲು, ಆರೋಪಿ ಅರೆಸ್ಟ್

ವಿದ್ಯುತ್ ತಂತಿ ತಗುಲಿ ರೈತ ಸಾವು

ಯಾದಗಿರಿ: ವಡಗೇರ ತಾಲೂಕಿನ ಗೋಡಿಹಾಳ ಗ್ರಾಮದ ಬಳಿ ವಿದ್ಯುತ್ ಸ್ಪರ್ಶಿಸಿ ಹೊರಟೂರು ಗ್ರಾಮದ ರೈತ ಮರೆಪ್ಪ(43) ಎಂಬಾತ ಸಾವನ್ನಪ್ಪಿದ್ದಾನೆ. ಜಾನುವಾರುಗಳಿಗೆ ಮೇವು ತೆಗೆದುಕೊಂಡು ಹೋಗಲು ಗೋಡಿಹಾಳ ಗ್ರಾಮಕ್ಕೆ ಬಂದಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ‌ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ರೈತನ ಕುಟುಂಬಕ್ಕೆ ವೈಯಕ್ತಿಕ ಆರ್ಥಿಕ ನೆರವು ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:14 pm, Sat, 13 April 24

Follow Us
ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ
ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ