AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿ ನೀರಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ: ಇಬ್ಬರು ಆರೋಪಿಗಳ ಬಂಧನ

ಪುನರ್ವಸತಿ ಕೇಂದ್ರಕ್ಕೆ ಚಿಕಿತ್ಸೆಗೆ ದಾಖಲಾದ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಯಲಹಂಕ ನ್ಯೂ ಟೌನ್ ಪೊಲೀಸರು ಬಂಧಿಸಿದ್ದಾರೆ.

ಬಿಸಿ ನೀರಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ: ಇಬ್ಬರು ಆರೋಪಿಗಳ ಬಂಧನ
ಪುನರ್ವಸತಿ ಕೇಂದ್ರ
TV9 Web
| Edited By: |

Updated on:Jan 19, 2023 | 8:06 PM

Share

ಬೆಂಗಳೂರು: ನಗರದ ಪುನರ್ವಸತಿ ಕೇಂದ್ರಕ್ಕೆ (rehabilitation) ಚಿಕಿತ್ಸೆಗೆ ದಾಖಲಾದ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಯಲಹಂಕ ನ್ಯೂ ಟೌನ್ ಪೊಲೀಸರು ಬಂಧಿಸಿದ್ದಾರೆ. ರಿಹ್ಯಾಬಿಲಿಟೇಶನ್ ಸೆಂಟರ್​ನ ರವಿ ಮತ್ತು ಲೋಹಿತ್ ಬಂಧಿತ ಆರೋಪಿಗಳು. ಸ್ನಾನಕ್ಕೆ ಬಿಸಿ ನೀರು ಬೇಕೆಂದು ಪ್ರಾರಂಭವಾದ ಜಗಳ ಸಾವಿನಲ್ಲಿ ಅಂತ್ಯವಾಗಿತ್ತು. ಆರಿಫ್(30) ಕೊಲೆಯಾದ ದುರ್ದೈವಿ. ಕಳೆದ ಕೆಲ ದಿನಗಳ ಹಿಂದೆ ಆರಿಫ್ ಪುನರ್ವಸತಿ ಕೇಂದ್ರಕ್ಕೆ ಸೇರಿದ್ದ. ಶ್ರೀಸಾಯಿ ದೀನಬಂಧು ರಿಹ್ಯಾಬಿಲಿಟೇಶನ್ ಸೆಂಟರ್​ನಲ್ಲಿ ಆರೀಫ್ ಇದ್ದ. ಕುಡಿತದ ಚಟ ಬಿಡಿಸಲು ಕುಟಂಬಸ್ಥರು ಶ್ರೀ ಸಾಯಿ ಸೆಂಟರ್​ನಲ್ಲಿ ಬಿಟ್ಟು ಬಂದಿದ್ದರು.

ಈ ಸಂದರ್ಭದಲ್ಲಿ ಆರಿಫ್​ಗೆ ಅಮಾನುಷವಾಗಿ, ಮಾರಣಾಂತಿಕವಾಗಿ ರವಿ ಮತ್ತು ಲೋಹಿತ್ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಸತ್ತ ವ್ಯಕ್ತಿಯನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ಬಂದ ವೇಳೆ ಘಟನೆ ಬೆಳಕಿಗೆ ಬಂದಿದೆ. ಆರೀಪ್​ನ ಕಾಲು, ಸೊಂಟ, ಬೆನ್ನಿಗೆ ಕಬ್ಬಿಣದ ರಾಡ್​ನಿಂದ ಹೊಡೆದು ರಕ್ತ ಹೆಪ್ಪುಗಟ್ಟುವಂತೆ ಹಲ್ಲೆ ಮಾಡಲಾಗಿತ್ತು. ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ವಿಜಯಪುರ: ಯುವತಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ, ತಡವಾಗಿ ಬೆಳಕಿಗೆ

ಕಾಡಾನೆ ದಾಳಿಯಿಂದ ದಿನಗೂಲಿ ಫಾರೆಸ್ಟ್ ವಾಚರ್ ಸಾವು

ಚಾಮರಾಜನಗರ: ಕಾಡಾನೆ ದಾಳಿಯಿಂದ ದಿನಗೂಲಿ ಫಾರೆಸ್ಟ್ ವಾಚರ್ ಸಾವನ್ನಪ್ಪಿರುವಂತಹ ಘಟನೆ ಚಾಮರಾಜನಗರ ತಾಲೂಕಿನ ಎತ್ತುಗಟ್ಟಿ ಬೆಟ್ಟದ ಬಳಿ ನಡೆದಿದೆ. ಪುಣಜನೂರು ಹೊಸಪೋಡು ನಿವಾಸಿ ನಂಜಯ್ಯ(35) ಮೃತ ವ್ಯಕ್ತಿ. 2 ದಿನಗಳ ಹಿಂದಷ್ಟೇ ನಂಜಯ್ಯ ಅವರನ್ನು ದಿನಗೂಲಿ ನೌಕರನಾಗಿ ಅರಣ್ಯ ಇಲಾಖೆ ನೇಮಿಸಿಕೊಂಡಿತ್ತು. ವಡ್ಗಲ್‌ಪುರ, ಚೆನ್ನಪ್ಪನಪುರ ಸುತ್ತಮುತ್ತ ಆನೆಗಳ ಹಿಂಡು ಒಡಾಡುತ್ತಿದ್ದವು. ಆನೆಗಳ ಹಿಂಡನ್ನು ಕಾಡಿಗಟ್ಟುವ ಕಾರ್ಯಾಚರಣೆ ವೇಳೆ ದಾಳಿ ಮಾಡಲಾಗಿದೆ ಎನ್ನಲಾಗುತ್ತಿದೆ.

ಆಕಸ್ಮಿಕ ಬೆಂಕಿ ತಗುಲಿ 32 ಎಕರೆ ಕಬ್ಬು ಸಂಪೂರ್ಣ ಭಸ್ಮ

ಗದಗ: ಆಕಸ್ಮಿಕ ಬೆಂಕಿ ತಗುಲಿ 32 ಎಕರೆ ಕಬ್ಬು ಸಂಪೂರ್ಣ ಭಸ್ಮವಾಗಿರುವಂತಹ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಬಿದರಳ್ಳಿಯಲ್ಲಿ ನಡೆದಿದೆ. ರೈತ ವೈ. ಶೇಷಗಿರಿರಾವ್​ಗೆ ಸೇರಿದ 32 ಎಕರೆ ಕಬ್ಬು ನಾಶವಾಗಿದ್ದು, ಲಕ್ಷಾಂತರ ರೂ. ಸಾಲ ಮಾಡಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿದೆ. ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಯತ್ನಿಸಿದ್ದು, ನಿರಂತರ ಪ್ರಯತ್ನಿಸಿದ್ರೂ ಬೆಂಕಿ ಹತೋಟಿಗೆ ಬರಲಿಲ್ಲ. ಬೆಂಕಿ ಕೆನ್ನಾಲಿಗೆ ನೋಡಿ ರೈತ ವೈ.ಶೇಷಗಿರಿರಾವ್ ಕಂಗಾಲಾದರು. ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ರೈತರು ಆಗ್ರಹಿಸಿದರು. ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಇದನ್ನೂ ಓದಿ: ಬೈಕ್​ನಲ್ಲಿ ಎಳೆದೊಯ್ದ ಪ್ರಕರಣ: ಚಾಲಕ ಮುತ್ತಪ್ಪನನ್ನು ಸಾಯಿಸುವ ಉದ್ದೇಶ ಇತ್ತು ಎಂದು ತಪ್ಪೊಪ್ಪಿಕೊಂಡ ಆರೋಪಿ ಶಾಹಿಲ್​

ಈಜಲು ಹೋದ ವಿದ್ಯಾರ್ಥಿ ನದಿ ಪಾಲು

ಮೈಸೂರು: ನದಿಯಲ್ಲಿ ಈಜಲು ಹೋದ ವಿದ್ಯಾರ್ಥಿ ಸಾವನ್ನಪ್ಪಿರುವಂತಹ ಘಟನೆ ಕೆಆರ್​​ನಗರ ತಾಲ್ಲೂಕು ಚುಂಚನಕಟ್ಟೆಯಲ್ಲಿ ನಡೆದಿದೆ. ಸುದೀಪ್ (20) ಸಾವನ್ನಪ್ಪಿದ ವಿದ್ಯಾರ್ಥಿ. ಮೈಸೂರಿನ ಶಾರದ ವಿಲಾಸ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದ. ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದಾಗ ಘಟನೆ ನಡೆದಿದೆ. ನದಿಯಲ್ಲಿ ಈಜುವಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:02 pm, Thu, 19 January 23

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ