AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾ: ನಾಲ್ವರು ಸ್ನೇಹಿತರ ಜತೆ ಸೇರಿ ಅಣ್ಣನಿಂದಲೇ ತಂಗಿಯ ಮೇಲೆ ಅತ್ಯಾಚಾರ

ತಂಗಿಯನ್ನು ವ್ಯಾಘ್ರರಿಂದ ಕಾಪಾಡಬೇಕಿದ್ದ ಅಣ್ಣನೇ ರಕ್ಕಸ ಪ್ರವೃತ್ತಿ ಮೆರೆದಿದ್ದಾನೆ. ನಾಲ್ವರು ಸ್ನೇಹಿತರ ಜತೆ ಸೇರಿ ಅತ್ಯಾಚಾರವೆಸಗಿರುವ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ನಡೆದಿದೆ. ನಾಲ್ವರು ಸ್ನೇಹಿತರ ಜೊತೆಗೂಡಿ ತನ್ನ ಸ್ವಂತ ಸಹೋದರಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದಿದ್ದಾನೆ ಎಂದು ಪೊಲೀಸರು ಸೋಮವಾರ ಮಾಹಿತಿ ನೀಡಿದ್ದಾರೆ.

ಒಡಿಶಾ: ನಾಲ್ವರು ಸ್ನೇಹಿತರ ಜತೆ ಸೇರಿ ಅಣ್ಣನಿಂದಲೇ ತಂಗಿಯ ಮೇಲೆ ಅತ್ಯಾಚಾರ
ಅಪರಾಧImage Credit source: Mint
ನಯನಾ ರಾಜೀವ್
|

Updated on: Dec 04, 2023 | 2:29 PM

Share

ತಂಗಿಯನ್ನು ವ್ಯಾಘ್ರರಿಂದ ಕಾಪಾಡಬೇಕಿದ್ದ ಅಣ್ಣನೇ ರಕ್ಕಸ ಪ್ರವೃತ್ತಿ ಮೆರೆದಿದ್ದಾನೆ. ನಾಲ್ವರು ಸ್ನೇಹಿತರ ಜತೆ ಸೇರಿ ಅತ್ಯಾಚಾರವೆಸಗಿರುವ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ನಡೆದಿದೆ. ನಾಲ್ವರು ಸ್ನೇಹಿತರ ಜೊತೆಗೂಡಿ ತನ್ನ ಸ್ವಂತ ಸಹೋದರಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದಿದ್ದಾನೆ ಎಂದು ಪೊಲೀಸರು ಸೋಮವಾರ ಮಾಹಿತಿ ನೀಡಿದ್ದಾರೆ.

ನವೆಂಬರ್ 3 ರಂದು ಚಾಕಪಾಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಘಟನೆ ನಡೆದಿದ್ದು, ವ್ಯಕ್ತಿ ಮತ್ತು ಆತನ ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವತಿ ತನ್ನ ಅಣ್ಣನಿಗೆ ಬೇರೊಬ್ಬರ ಜತೆ ಅಕ್ರಮ ಸಂಬಂಧ ಇರುವುದನ್ನು ಪತ್ತೆ ಮಾಡಿದ್ದಾಳೆ, ಇದೇ ರೀತಿ ಮುಂದುವರೆದರೆ ಈ ವಿಷಯವನ್ನು ಬಯಲಿಗೆಳೆಯುವುದಾಗಿ ಎಚ್ಚರಿಕೆ ನೀಡಿದ್ದಳು. ಆಗ ತಂಗಿಯನ್ನು ಕೊಲ್ಲಲು ಯೋಜನೆ ರೂಪಿಸಿದ್ದ.

ಕಾಡಿನಲ್ಲಿ ಯುವತಿ ಮೇಲೆ ಅತ್ಯಾಚಾರ ಯುವತಿ ಸಿಯಾಲಿ ಎಲೆಗಳನ್ನು ಸಂಗ್ರಹಿಸಲು ಹತ್ತಿರದ ಕಾಡಿಗೆ ಹೋಗಿದ್ದಳು, ಕಾಕತಾಳೀಯವೆಂಬಂತೆ ಆಕೆಯ ಅಣ್ಣ ಕೂಡ ದನಗಳೊಂದಿಗೆ ಅಲ್ಲಿಗೆ ಬಂದಿದ್ದ. ಪರಿಸ್ಥಿತಿಯ ಲಾಭ ಪಡೆದು ಸ್ನೇಹಿತರನ್ನು ಕಾಡಿಗೆ ಕರೆಸಿದ.

ಮದ್ಯಪಾನ ಮಾಡಿಸಿದ್ದಾನೆ, ಕುಡಿದ ಅಮಲಿನಲ್ಲಿದ್ದ ತನ್ನ ನಾಲ್ವರು ಸ್ನೇಹಿತರೊಂದಿಗೆ ತಂಗಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆಕೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಕಾರಣ ಕತ್ತು ಹಿಸುಕಿ ಕೊಲೆ ಮಾಡಿ, ಕೊಡಲಿಯಿಂದ ಹಲ್ಲೆ ನಡೆಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾಗುವ ಭಯದಿಂದ ನವೆಂಬರ್ 6 ರಂದು ಕಾಣೆಯಾದ ವರದಿಯನ್ನು ಸಲ್ಲಿಸಿದ್ದಾರೆ.

ತನಿಖೆಯ ವೇಳೆ ಪೊಲೀಸರಿಗೆ ನವೆಂಬರ್ 7 ರಂದು ಕಾಡಿನಲ್ಲಿ ಮಹಿಳೆಯ ಕೊಳೆತ ಶವ ಪತ್ತೆಯಾಗಿದೆ. ಮಹಿಳೆಯ ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಮತ್ತು ಆಕೆಯ ಮೇಲೆ ಅನೇಕ ವ್ಯಕ್ತಿಗಳು ಲೈಂಗಿಕ ದೌರ್ಜನ್ಯ ಎಸಗಿರುವುದು ಕಂಡುಬಂದಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!