AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾ: ನಾಲ್ವರು ಸ್ನೇಹಿತರ ಜತೆ ಸೇರಿ ಅಣ್ಣನಿಂದಲೇ ತಂಗಿಯ ಮೇಲೆ ಅತ್ಯಾಚಾರ

ತಂಗಿಯನ್ನು ವ್ಯಾಘ್ರರಿಂದ ಕಾಪಾಡಬೇಕಿದ್ದ ಅಣ್ಣನೇ ರಕ್ಕಸ ಪ್ರವೃತ್ತಿ ಮೆರೆದಿದ್ದಾನೆ. ನಾಲ್ವರು ಸ್ನೇಹಿತರ ಜತೆ ಸೇರಿ ಅತ್ಯಾಚಾರವೆಸಗಿರುವ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ನಡೆದಿದೆ. ನಾಲ್ವರು ಸ್ನೇಹಿತರ ಜೊತೆಗೂಡಿ ತನ್ನ ಸ್ವಂತ ಸಹೋದರಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದಿದ್ದಾನೆ ಎಂದು ಪೊಲೀಸರು ಸೋಮವಾರ ಮಾಹಿತಿ ನೀಡಿದ್ದಾರೆ.

ಒಡಿಶಾ: ನಾಲ್ವರು ಸ್ನೇಹಿತರ ಜತೆ ಸೇರಿ ಅಣ್ಣನಿಂದಲೇ ತಂಗಿಯ ಮೇಲೆ ಅತ್ಯಾಚಾರ
ಅಪರಾಧImage Credit source: Mint
ನಯನಾ ರಾಜೀವ್
|

Updated on: Dec 04, 2023 | 2:29 PM

Share

ತಂಗಿಯನ್ನು ವ್ಯಾಘ್ರರಿಂದ ಕಾಪಾಡಬೇಕಿದ್ದ ಅಣ್ಣನೇ ರಕ್ಕಸ ಪ್ರವೃತ್ತಿ ಮೆರೆದಿದ್ದಾನೆ. ನಾಲ್ವರು ಸ್ನೇಹಿತರ ಜತೆ ಸೇರಿ ಅತ್ಯಾಚಾರವೆಸಗಿರುವ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ನಡೆದಿದೆ. ನಾಲ್ವರು ಸ್ನೇಹಿತರ ಜೊತೆಗೂಡಿ ತನ್ನ ಸ್ವಂತ ಸಹೋದರಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದಿದ್ದಾನೆ ಎಂದು ಪೊಲೀಸರು ಸೋಮವಾರ ಮಾಹಿತಿ ನೀಡಿದ್ದಾರೆ.

ನವೆಂಬರ್ 3 ರಂದು ಚಾಕಪಾಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಘಟನೆ ನಡೆದಿದ್ದು, ವ್ಯಕ್ತಿ ಮತ್ತು ಆತನ ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವತಿ ತನ್ನ ಅಣ್ಣನಿಗೆ ಬೇರೊಬ್ಬರ ಜತೆ ಅಕ್ರಮ ಸಂಬಂಧ ಇರುವುದನ್ನು ಪತ್ತೆ ಮಾಡಿದ್ದಾಳೆ, ಇದೇ ರೀತಿ ಮುಂದುವರೆದರೆ ಈ ವಿಷಯವನ್ನು ಬಯಲಿಗೆಳೆಯುವುದಾಗಿ ಎಚ್ಚರಿಕೆ ನೀಡಿದ್ದಳು. ಆಗ ತಂಗಿಯನ್ನು ಕೊಲ್ಲಲು ಯೋಜನೆ ರೂಪಿಸಿದ್ದ.

ಕಾಡಿನಲ್ಲಿ ಯುವತಿ ಮೇಲೆ ಅತ್ಯಾಚಾರ ಯುವತಿ ಸಿಯಾಲಿ ಎಲೆಗಳನ್ನು ಸಂಗ್ರಹಿಸಲು ಹತ್ತಿರದ ಕಾಡಿಗೆ ಹೋಗಿದ್ದಳು, ಕಾಕತಾಳೀಯವೆಂಬಂತೆ ಆಕೆಯ ಅಣ್ಣ ಕೂಡ ದನಗಳೊಂದಿಗೆ ಅಲ್ಲಿಗೆ ಬಂದಿದ್ದ. ಪರಿಸ್ಥಿತಿಯ ಲಾಭ ಪಡೆದು ಸ್ನೇಹಿತರನ್ನು ಕಾಡಿಗೆ ಕರೆಸಿದ.

ಮದ್ಯಪಾನ ಮಾಡಿಸಿದ್ದಾನೆ, ಕುಡಿದ ಅಮಲಿನಲ್ಲಿದ್ದ ತನ್ನ ನಾಲ್ವರು ಸ್ನೇಹಿತರೊಂದಿಗೆ ತಂಗಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆಕೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಕಾರಣ ಕತ್ತು ಹಿಸುಕಿ ಕೊಲೆ ಮಾಡಿ, ಕೊಡಲಿಯಿಂದ ಹಲ್ಲೆ ನಡೆಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾಗುವ ಭಯದಿಂದ ನವೆಂಬರ್ 6 ರಂದು ಕಾಣೆಯಾದ ವರದಿಯನ್ನು ಸಲ್ಲಿಸಿದ್ದಾರೆ.

ತನಿಖೆಯ ವೇಳೆ ಪೊಲೀಸರಿಗೆ ನವೆಂಬರ್ 7 ರಂದು ಕಾಡಿನಲ್ಲಿ ಮಹಿಳೆಯ ಕೊಳೆತ ಶವ ಪತ್ತೆಯಾಗಿದೆ. ಮಹಿಳೆಯ ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಮತ್ತು ಆಕೆಯ ಮೇಲೆ ಅನೇಕ ವ್ಯಕ್ತಿಗಳು ಲೈಂಗಿಕ ದೌರ್ಜನ್ಯ ಎಸಗಿರುವುದು ಕಂಡುಬಂದಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು