AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೇಡಿಸ್ ರೆಸ್ಟ್ ರೂಂನಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಯತ್ನಿಸಿದ ಆರೋಪಿ ಅರೆಸ್ಟ್​

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಲೇಡಿಸ್ ರೆಸ್ಟ್ ರೂಂ ಲಗ್ಗೆ ಇಟ್ಟು ವಿಡಿಯೋ ಮಾಡಲು ಯತ್ನಿಸಿದ ಆರೋಪಿಯನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಮೂಲದ ಬುದ್ಧಕಾಂತ್ ದೇಬನಾಥ್(30) ಬಂಧಿತ ಆರೋಪಿ. ಜನವರಿ 26ರ ರಾತ್ರಿ ಗರಡಮಾಲ್ ಬಳಿಯ ಖಾಸಗಿ ರೆಸ್ಟೋರೆಂಟ್​ನಲ್ಲಿ ಊಟದ ನಡುವೆ ರೆಸ್ಟ್ ರೂಂಗೆ ಯುವತಿಯೊಬ್ಬರು ರಳಿದ್ದರು. ಈ ವೇಳೆ ಆಕೆಯ ಹಿಂದೆಯೇ ಫಾಲೋ ಮಾಡಿದ್ದ ಆರೋಪಿ, ಬಾತ್ ರೂಂನ ಮೇಲ್ಭಾಗದಲ್ಲಿ ಮೊಬೈಲ್ ಕ್ಯಾಮರಾದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದಾನೆಂದು ಆರೋಪಿಸಲಾಗಿದೆ. ಇದನ್ನು ಕಂಡ ಯುವತಿ ರೆಸ್ಟೋರೆಂಟ್ ಅಧಿಕಾರಿಗಳಿಗೆ […]

ಲೇಡಿಸ್ ರೆಸ್ಟ್ ರೂಂನಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಯತ್ನಿಸಿದ ಆರೋಪಿ ಅರೆಸ್ಟ್​
ಸಾಧು ಶ್ರೀನಾಥ್​
|

Updated on:Jan 30, 2020 | 10:31 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಲೇಡಿಸ್ ರೆಸ್ಟ್ ರೂಂ ಲಗ್ಗೆ ಇಟ್ಟು ವಿಡಿಯೋ ಮಾಡಲು ಯತ್ನಿಸಿದ ಆರೋಪಿಯನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಮೂಲದ ಬುದ್ಧಕಾಂತ್ ದೇಬನಾಥ್(30) ಬಂಧಿತ ಆರೋಪಿ.

ಜನವರಿ 26ರ ರಾತ್ರಿ ಗರಡಮಾಲ್ ಬಳಿಯ ಖಾಸಗಿ ರೆಸ್ಟೋರೆಂಟ್​ನಲ್ಲಿ ಊಟದ ನಡುವೆ ರೆಸ್ಟ್ ರೂಂಗೆ ಯುವತಿಯೊಬ್ಬರು ರಳಿದ್ದರು. ಈ ವೇಳೆ ಆಕೆಯ ಹಿಂದೆಯೇ ಫಾಲೋ ಮಾಡಿದ್ದ ಆರೋಪಿ, ಬಾತ್ ರೂಂನ ಮೇಲ್ಭಾಗದಲ್ಲಿ ಮೊಬೈಲ್ ಕ್ಯಾಮರಾದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದಾನೆಂದು ಆರೋಪಿಸಲಾಗಿದೆ. ಇದನ್ನು ಕಂಡ ಯುವತಿ ರೆಸ್ಟೋರೆಂಟ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಆರೋಪಿಯು ಕಳೆದ 6 ತಿಂಗಳಿಂದ ರೆಸ್ಟೋರೆಂಟ್​ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ. ಆ ದಿನ ಮಹಿಳಾ ಸಿಬ್ಬಂದಿ ಇಲ್ಲದ ಹಿನ್ನೆಲೆಯಲ್ಲಿ ರೆಸ್ಟೋರೆಂಟ್‌ನಲ್ಲಿ ಆರೋಪಿಯೇ ಕೆಲಸ ಮಾಡುತ್ತಿದ್ದ. ಹಾಗಾಗಿ ಆತನೇ ಕೃತ್ಯ ಎಸಗಿದ್ದ ಎಂದು ತರ್ಕಿಸಲಾಗಿತ್ತು. ಜೊತೆಗೆ ವಿಡಿಯೋ ಚಿತ್ರೀಕರಣಕ್ಕೆ ಯತ್ನಿಸಿದ್ದ ವೇಳೆ ಟೆಕ್ಕಿಯೊಬ್ಬರು ಆರೋಪಿಯ ಚಲನವಲನವನ್ನುಗಮನಿಸಿದ್ದರು. ಈ ಹಿನ್ನೆಲೆಯಲ್ಲಿ, ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Published On - 9:30 am, Thu, 30 January 20

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!