AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಿನಲ್ಲಿ ಪ್ರೇಯಸಿನ್ನು ಕೊಲೆ ಮಾಡಿದ ಪ್ರಿಯಕರ; ವಿಜಯಪುರಕ್ಕೆ ಶವ ಸಾಗಿಸುವಾಗ ಪ್ರಿಯಕರ ಅರೇಸ್ಟ್​

ಪ್ರೇಯಸಿಯನ್ನು ಕೊಲೆ ಮಾಡಿ ಮೃತ ದೇಹವನ್ನು ಆಂಬ್ಯುಲೆನ್ಸ್​ನಲ್ಲಿ ಸಾಗಿಸುತ್ತಿದ್ದ ಆರೋಪಿಯನ್ನು ಮಹಾರಾಷ್ಟ್ರದ ಭಿವಂಡಿ ನಗರ ಪೊಲೀಸರು ಬಂಧಿಸಿದ್ದಾರೆ.

ಕುಡಿದ ಮತ್ತಿನಲ್ಲಿ ಪ್ರೇಯಸಿನ್ನು ಕೊಲೆ ಮಾಡಿದ ಪ್ರಿಯಕರ; ವಿಜಯಪುರಕ್ಕೆ ಶವ ಸಾಗಿಸುವಾಗ ಪ್ರಿಯಕರ ಅರೇಸ್ಟ್​
ಸಾಂಧರ್ಬಿಕ ಚಿತ್ರ
TV9 Web
| Updated By: ವಿವೇಕ ಬಿರಾದಾರ|

Updated on: Sep 25, 2022 | 6:21 PM

Share

ಮಹಾರಾಷ್ಟ್ರ: ಪ್ರೇಯಸಿಯನ್ನು ಕೊಲೆ ಮಾಡಿ ಮೃತ ದೇಹವನ್ನು ಆಂಬ್ಯುಲೆನ್ಸ್​ನಲ್ಲಿ (Ambulance) ಸಾಗಿಸುತ್ತಿದ್ದ ಆರೋಪಿಯನ್ನು ಮಹಾರಾಷ್ಟ್ರದ (Maharashtra) ಭಿವಂಡಿ ನಗರ ಪೊಲೀಸರು ಬಂಧಿಸಿದ್ದಾರೆ. ಸದ್ದಾಂ ಸಯ್ಯದ್‌ (30) ಕೊಲೆ ಆರೋಪಿ. ಕವಿತಾ ಮಾದರ (24) ಮೃತ ಮಹಿಳೆ. ಕವಿತಾ ಮಾದರ ಮಹಾರಾಷ್ಟ್ರದ ಭಿವಂಡಿಯಲ್ಲಿ ತನ್ನ ಸ್ನೇಹಿತೆಯರೊಂದಿಗೆ ವಾಸವಾಗಿದ್ದಳು. ಜೀವನಕ್ಕಾಗಿ ಸಣ್ಣ ಕೆಲಸಗಳನ್ನು ಮಾಡುತ್ತಿದ್ದು ಜೊತೆಗೆ ವೇಶ್ಯವೃತ್ತಿಯನ್ನು ಮಾಡುತ್ತಿದ್ದಳು. ಆದರೆ ಇತ್ತೀಚಿಗೆ ಅದರಿಂದ ಹೊರಬಂದು ಉತ್ತಮ ಜೀವನ ನಡೆಸಲು ಮುಂದಾಗಿದ್ದಳು.

ಕವಿತಾ ವಿಜಯಪುರ ಮೂಲದವಳಾಗಿದ್ದು, ವಿಜಯಪುರದಲ್ಲಿ ಕವಿತಾಳ ಅಜ್ಜಿ ವಾಸವಿರುತ್ತಾರೆ. ಭಿವಂಡಿಯ ಹೊಟೇಲ್​ವೊಂದರಲ್ಲಿ ಕವಿತಾಳಿಗೆ ಸದ್ದಾಂ ಸಯ್ಯದ್​ ಪರಿಚಯವಾಗುತ್ತಾನೆ. ಮುಂದೆ ಇವರಿಬ್ಬರ ಪರಿಚಯ ಸ್ನೇಹಕ್ಕೆ ತಿರುಗಿ ನಂತರ ಇಬ್ಬರ ನಡುವೆ ಪ್ರೇಮಾಂಕುರವಾಗುತ್ತದೆ. ಮುಂದೆ ಇವರು ಮದುವೆಯಾಗಲು ನಿಶ್ಚಯಿಸಿ, ಲಿವಿಂಗ್​ಟುಗೆದರ್​ನಲ್ಲಿ​ ಇರುತ್ತಾರೆ. ಈ ವಿಷಯ ತಿಳಿದು ಸಯ್ಯದ್‌ ಕುಟುಂಬ ವಿರೋಧಿಸುತ್ತಿರುತ್ತಾರೆ.

ಈ ವಿಚಾರವಾಗಿ ಸಯ್ಯದ್ ಮತ್ತು ಕವಿತಾ ನಡುವೆ ಜಗಳವಾಡುತ್ತಿದ್ದರು. ಸಯ್ಯದ್​ ಮದ್ಯ ವ್ಯಸನಿಯಾಗಿದ್ದು, ಶುಕ್ರವಾರ (ಸೆ. 23) ಮಧ್ಯಾಹ್ನ ಕುಡಿದು ಬಂದು ಕವಿತಾಳೊಂದಿಗೆ ಜಗಳವಾಡುತ್ತಿದ್ದನು.ಜಗಳ ತಾರಕಕ್ಕೆ ಏರಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಕವಿತಾ ಅಪಘಾತದಲ್ಲಿ ಮೃತಪಟ್ಟಿದ್ದಾಳೆ ಎಂದು ಸುಳ್ಳು ಹೇಳಿ ಆಂಬ್ಯುಲೆನ್ಸ್‌ ಕರೆಸಿ ಆಂಬ್ಯುಲೆನ್ಸ್​ನಲ್ಲಿ ಶವವನ್ನು ವಿಜಯಪುರಕ್ಕೆ ತರಲು ಮುಂದಾಗಿದ್ದಾನೆ.

ನಂತರ ಸಯ್ಯದ್​ ಕವಿತಾಳ ಅಜ್ಜಿಗೆ ಕರೆ ಮಾಡಿ, ಕವಿತಾ ಅಪಘಾತದಲ್ಲಿ ಮೃತಪಟ್ಟಿದ್ದಾಳೆ ಎಂದು ಹೇಳಿದ್ದಾನೆ. ಆಗ ಅಜ್ಜಿ ಕವಿತಾಳ ಸ್ನೇಹಿತೆಯರಿಗೆ ಕರೆ ಮಾಡಿ ಹೇಳಿದ್ದಾಳೆ. ಕೂಡಲೆ ಸ್ನೇಹಿತೆಯರು ಮಹರಾಷ್ಟ್ರದ ಮನೆಗೆ ಬಂದು ನೋಡಿದಾಗ ಆರೋಪಿಯು ಮನೆಯಲ್ಲಿ ಇರಲಿಲ್ಲ ಮತ್ತು ಕವಿತಾನು ಇರಲಿಲ್ಲ. ಕೂಡಲೆ ಸ್ನೇಹಿತೆಯರು ಪೊಲೀಸರಿಗೆ ವಿಷಯ ತಿಳಸಿದ್ದಾರೆ. ಪೊಲೀಸರು ಪುಣೆ ಬಳಿ ವಾಹನವನ್ನು ತಡೆದು ಶವದೊಂದಿಗೆ ಆರೋಪಿಯನ್ನು ಬಂಧಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?