ಪತ್ನಿಯ ಖಾಸಗಿ ಫೋಟೊಗಳ ತೋರಿಸಿ ಬ್ಲ್ಯಾಕ್​ಮೇಲ್, ಸ್ನೇಹಿತನ ಕೊಂದು ತುಂಡು ತುಂಡಾಗಿ ಕತ್ತರಿಸಿದ ವ್ಯಕ್ತಿ

ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬ ತನ್ನ ಸ್ನೇಹಿತನ್ನು ಕೊಲೆ ಮಾಡಿ, ದೇಹಗಳನ್ನು ಕತ್ತರಿಸಿ ವಿವಿಧೆಡೆ ಎಸೆದು ಬಂದ ಆರೋಪಿ ಶೈಲೇಂದ್ರ ಎಂಬಾತನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಗುಜರಾತ್​ನಲ್ಲಿ ನಡೆದಿದೆ. ಭರೂಚ್​ನ ವಿವಿಧ ಪ್ರದೇಶಗಳಲ್ಲಿ ದೇಹದ ವಿವಿಧ ಭಾಗಗಳು ಪತ್ತೆಯಾಗಿದ್ದವು. ನಾಲ್ಕು ದಿನಗಳ ನಂತರ ಗುಜರಾತ್ ಪೊಲೀಸರು ಉತ್ತರ ಪ್ರದೇಶ ಮೂಲದ ವ್ಯಕ್ತಿ ಶೈಲೇಂದ್ರನನ್ನು ಬಂಧಿಸಿದ್ದಾರೆ. ಶೈಲೇಂದ್ರ ತನ್ನ ಸ್ನೇಹಿತ ಸಚಿನ್‌ನನ್ನು ಕೊಲೆ ಮಾಡಿ, ಗುರುತು ಹಿಡಿಯದಂತೆ ದೇಹವನ್ನು ಒಂಬತ್ತು ತುಂಡುಗಳಾಗಿ ಕತ್ತರಿಸಿದ್ದಾಗಿ ಒಪ್ಪಿಕೊಂಡಿದ್ದಾನೆ.

ಪತ್ನಿಯ ಖಾಸಗಿ ಫೋಟೊಗಳ ತೋರಿಸಿ ಬ್ಲ್ಯಾಕ್​ಮೇಲ್, ಸ್ನೇಹಿತನ ಕೊಂದು ತುಂಡು ತುಂಡಾಗಿ ಕತ್ತರಿಸಿದ ವ್ಯಕ್ತಿ
ಆರೋಪಿಯ ಬಂಧನ
Image Credit source: India Today

Updated on: Apr 03, 2025 | 12:18 PM

ಗುಜರಾತ್, ಏಪ್ರಿಲ್ 03: ಪತ್ನಿಯ ಖಾಸಗಿ ಫೋಟೊಗಳನ್ನಿಟ್ಟುಕೊಂಡು ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ಸ್ನೇಹಿತನನ್ನು ವ್ಯಕ್ತಿಯೊಬ್ಬ ಕೊಲೆ(Murder) ಮಾಡಿ ತುಂಡು, ತುಂಡಾಗಿ ಕತ್ತರಿಸಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಸ್ನೇಹಿತನನ್ನು ಕೊಂದು 9 ತುಂಡುಗಳಾಗಿ ದೇಹವನ್ನು ಕತ್ತರಿಸಿ, ವಿವಿಧೆಡೆ ಎಸೆದುಬಂದಿದ್ದ. ಉತ್ತರ ಪ್ರದೇಶ ಮೂಲದ ಶೈಲೇಂದ್ರ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಭರೂಚ್​ನ ವಿವಿಧ ಪ್ರದೇಶಗಳಲ್ಲಿ ದೇಹದ ವಿವಿಧ ಭಾಗಗಳು ಪತ್ತೆಯಾಗಿದ್ದವು. ನಾಲ್ಕು ದಿನಗಳ ನಂತರ ಗುಜರಾತ್ ಪೊಲೀಸರು ಉತ್ತರ ಪ್ರದೇಶ ಮೂಲದ ವ್ಯಕ್ತಿ ಶೈಲೇಂದ್ರನನ್ನು ಬಂಧಿಸಿದ್ದಾರೆ. ಶೈಲೇಂದ್ರ ತನ್ನ ಸ್ನೇಹಿತ ಸಚಿನ್‌ನನ್ನು ಕೊಲೆ ಮಾಡಿ, ಗುರುತು ಹಿಡಿಯದಂತೆ ದೇಹವನ್ನು ಒಂಬತ್ತು ತುಂಡುಗಳಾಗಿ ಕತ್ತರಿಸಿದ್ದಾಗಿ ಒಪ್ಪಿಕೊಂಡಿದ್ದಾನೆ.

ಮಾರ್ಚ್​ 29ರಂದು ಭರೂಚ್​ನ ಚರಂಡಿಯಲ್ಲಿ ವ್ಯಕ್ತಿಯ ತಲೆ ಪತ್ತೆಯಾಗಿತ್ತು, ಮುಂದಿನ ಮೂರು ದಿನಗಳಲ್ಲಿ ವಿವಿಧ ಸ್ಥಳಗಳಲ್ಲಿ ಮಾನವ ದೇಹದ ಭಾಗಗಳನ್ನು ವಶಪಡಿಸಿಕೊಳ್ಳಲಾಯಿತು. ಆತನ ಕೈಯಲ್ಲಿರುವ ಹಚ್ಚೆಯಿಂದ ಆತ ಸಚಿನ್ ಚೌಹಾಣ್ ಎಂದು ಗುರುತಿಸಿದ್ದಾರೆ. ಉತ್ತರ ಪ್ರದೇಶದ ಬಿಜ್ನೋರ್ ಮೂಲದ ಸಚಿನ್, ನಾಲ್ಕು ವರ್ಷದ ಮಗ, ಪತ್ನಿಯೊಂದಿಗೆ ಭರೂಚ್‌ನ ದಹೇಜ್‌ನಲ್ಲಿ ಕೆಲಸ ಮಾಡುತ್ತಿದ್ದರು.

ಇದನ್ನೂ ಓದಿ
ಕಲಬುರಗಿ: ಪತ್ನಿ, ಮಕ್ಕಳನ್ನು ಕೊಂದು, ಸರ್ಕಾರಿ ನೌಕರ ಆತ್ಮಹತ್ಯೆ
ಕೊಲೆ ಆರೋಪದಲ್ಲಿ ಜೈಲು ಸೇರಿದ್ದ ಪತಿ: 5 ವರ್ಷ ಬಳಿಕ ಲವರ್ ಜತೆ ಸಿಕ್ಕ ಪತ್ನಿ
ಪತ್ನಿ ಕೊಲ್ಲಲು ಬಂದವ ಅತ್ತೆ, ನಾದಿನಿ, ಮಗಳನ್ನೇ ಕೊಂದ
ಪತ್ನಿ ಕೊಲೆ ಮಾಡಿ ಸೂಟ್​ಕೇಸ್​ನಲ್ಲಿ ತುಂಬಿದ್ದ ಪತಿ: ಹತ್ಯೆಯ ಕಾರಣ ಬಹಿರಂಗ!

ಮತ್ತಷ್ಟು ಓದಿ: ಬೆಂಗಳೂರು: ಬಿಹಾರದ ಯುವತಿಯ ಅಪಹರಿಸಿ ಅತ್ಯಾಚಾರ, ಇಬ್ಬರ ಬಂಧನ

ಬಿಜ್ನೋರ್‌ನವರೇ ಆದ ಅವರ ಸ್ನೇಹಿತ ಶೈಲೇಂದ್ರ ಚೌಹಾಣ್ ಕೂಡ ಭರೂಚ್‌ನಲ್ಲಿ ವಾಸಿಸುತ್ತಿದ್ದರು. ಅವರ ಎರಡೂ ಕುಟುಂಬಗಳು ಹೋಳಿಗೆಂದು ತಮ್ಮ ಹಳ್ಳಿಗೆ ಹೋಗಿದ್ದರು, ಘಟನೆ ಸಂಭವಿಸಿದಾಗ ಸ್ನೇಹಿತರಿಬ್ಬರೇ ಇದ್ದರು.

ನಾಪತ್ತೆಯಾಗಿದ್ದವನ ಫೋಟೊವನ್ನು ಪರಿಶೀಲಿಸಿದ ಪೊಲೀಸರು ಹೆಚ್ಚಿನ ಮಾಹಿತಿಗಾಗಿ ಸಹೋದರನಿಗೆ ಕರೆ ಮಾಡಿದ್ದರು. ತನಿಖೆಯ ಸಮಯದಲ್ಲಿ ಸಚಿನ್ ಕೊನೆಯ ಬಾರಿಗೆ ಶೈಲೇಂದ್ರ ಜೊತೆ ಕಾಣಿಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಹೆಚ್ಚಿನ ತನಿಖೆಯಲ್ಲಿ ಶೈಲೇಂದ್ರ ಸಚಿನ್ ಫೋನ್‌ನೊಂದಿಗೆ ಬಿಜ್ನೋರ್ ಮತ್ತು ದೆಹಲಿಗೆ ಪ್ರಯಾಣಿಸಿದ್ದನು, ಸಚಿನ್ ಜೀವಂತವಾಗಿದ್ದಾನೆ ಎಂಬ ಭ್ರಮೆಯನ್ನು ಸೃಷ್ಟಿಸಲು ಅವನ ಕುಟುಂಬಕ್ಕೆ ಸಂದೇಶಗಳನ್ನು ಕಳುಹಿಸಿದ್ದ ಎಂದು ತಿಳಿದುಬಂದಿದೆ.

ಶೈಲೇಂದ್ರ ಮಹಿಳೆಯ ವೇಷ ತೊಟ್ಟು ದೇಹದ ಭಾಗಗಳನ್ನು ವಿಲೇವಾರಿ ಮಾಡಲು ಆಕ್ಟೀವಾದಲ್ಲಿ ಹೋಗಿದ್ದ. ಬಂಧನದ ಬಳಿಕ ಶೈಲೇಂದ್ರ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಮಾರ್ಚ್​ 24ರಂದು ರಾತ್ರಿ ಇಬ್ಬರೂ ಮದ್ಯಪಾನ ಮಾಡಿದ್ದರು. ಬಳಿಕ ಇಬ್ಬರ ನಡುವೆ ಜಗಳ ಉಲ್ಬಣಗೊಂಡಿತ್ತು. ಕೋಪದ ಭರದಲ್ಲಿ ಸಚಿನ್​ನನ್ನು ಕೊಲೆ ಮಾಡಿದ್ದಾನೆ.

ಆತನ ಪತ್ನಿಯ ಖಾಸಗಿ ಫೋಟೊಗಳನ್ನಿಟ್ಟುಕೊಂಡು ಬ್ಲ್ಯಾಕ್​ಮೇಲ್ ಮಾಡಿದ್ದಾಗಿ ತಿಳಿಸಿದ್ದಾರೆ. ಮೂರು ದಿನಗಳ ಕಾಲ ಶವವನ್ನು ತನ್ನ ಮನೆಯಲ್ಲಿ ಇಟ್ಟುಕೊಂಡು, ಒಂಬತ್ತು ತುಂಡುಗಳಾಗಿ ಕತ್ತರಿಸಿ, ಪತ್ತೆಯಾಗದಂತೆ ವಿವಿಧ ಸ್ಥಳಗಳಲ್ಲಿ ವಿಲೇವಾರಿ ಮಾಡಿದ್ದ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us