AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವನ್ನು ಕೋಣೆಗೆ ಬಿಟ್ಟು ಪತ್ನಿ, ಮಗಳನ್ನು ಹತ್ಯೆ ಮಾಡಿದ್ದ ವ್ಯಕ್ತಿಯ ಬಂಧನ

ಹಾವು ಕಚ್ಚಿಸಿ ಪತ್ನಿ ಹಾಗೂ ಮಗಳನ್ನು ಕೊಲೆ ಮಾಡಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ಆರೋಪಿ ಕೆ ಗಣೇಶ್ ಪಾತ್ರ ಎಂದು ಗುರುತಿಸಲಾಗಿದ್ದು, ತನ್ನ ಹೆಂಡತಿಯೊಂದಿಗೆ ವೈವಾಹಿಕ ಕಲಹವನ್ನು ಹೊಂದಿದ್ದನು, ನಂತರ ಅವನು ಅವಳನ್ನು ಮತ್ತು ಅವರ ಎರಡು ವರ್ಷದ ಮಗಳನ್ನು ಕೊಲ್ಲಲು ಯೋಜನೆ ರೂಪಿಸಿದ್ದ.

ಹಾವನ್ನು ಕೋಣೆಗೆ ಬಿಟ್ಟು ಪತ್ನಿ, ಮಗಳನ್ನು ಹತ್ಯೆ ಮಾಡಿದ್ದ ವ್ಯಕ್ತಿಯ ಬಂಧನ
ಹಾವು
ನಯನಾ ರಾಜೀವ್
|

Updated on: Nov 24, 2023 | 9:16 AM

Share

ಹಾವು ಕಚ್ಚಿಸಿ ಪತ್ನಿ ಹಾಗೂ ಮಗಳನ್ನು ಕೊಲೆ ಮಾಡಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ಆರೋಪಿ ಕೆ ಗಣೇಶ್ ಪಾತ್ರ ಎಂದು ಗುರುತಿಸಲಾಗಿದ್ದು, ತನ್ನ ಹೆಂಡತಿಯೊಂದಿಗೆ ವೈವಾಹಿಕ ಕಲಹವನ್ನು ಹೊಂದಿದ್ದನು, ನಂತರ ಅವನು ಅವಳನ್ನು ಮತ್ತು ಅವರ ಎರಡು ವರ್ಷದ ಮಗಳನ್ನು ಕೊಲ್ಲಲು ಯೋಜನೆ ರೂಪಿಸಿದ್ದ.

ಹಾವಾಡಿಗರ ಬಳಿ ನಾಗರಹಾವನ್ನು ಖರೀದಿಸಿ ಅಕ್ಟೋಬರ್ 7 ರಂದು ತನ್ನ ಹೆಂಡತಿ ಮತ್ತು ಅಪ್ರಾಪ್ತ ಮಗಳ ಕೋಣೆಗೆ ಬಿಟ್ಟಿದ್ದ. ನಂತರ ಹಾವು ತಾಯಿ-ಮಗಳನ್ನು ಕಚ್ಚಿತ್ತು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ವೈದ್ಯರು ವೈದ್ಯಕೀಯ ಪರೀಕ್ಷೆಯ ನಂತರ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಹಾವು ಕಡಿತದಿಂದ ಸಾವನ್ನಪ್ಪಿದ್ದರೂ ಕೂಡ ಇದು ಅಸ್ವಾಭಾವಿಕ ಸಾವೆಂದು ಪೊಲೀಸರು ಪರಿಗಣಿಸಿ ಪ್ರಕರಣ ದಾಖಲಿಸಿದ್ದರು. ಬಳಿಕ ತನಿಖೆಯ ಹಾದಿಯೇ ಬದಲಾಗಿತ್ತು.

ಅಂದು ರಾತ್ರಿ ಕುಟುಂಬ ಸದಸ್ಯರು ಇಬ್ಬರನ್ನು ಕೊಂದು ಆಸ್ಪತ್ರೆಗೆ ಸಾಗಿಸಿದ್ದರು. ಮರಣೋತ್ತರ ಪರೀಕ್ಷೆಯ ವರದಿಯು ಹಾವು ಕಡಿತದಿಂದ ಸಾವನ್ನಪ್ಪಿದ್ದಾರೆ ಎಂದೇ ಬಂದಿದೆ.

ಮತ್ತಷ್ಟು ಓದಿ: ಚಾಕೊಲೇಟ್ ಕೊಡುವುದಾಗಿ ಹೇಳಿ 10 ವರ್ಷದ ಬಾಲಕಿ ಮೇಲೆ 76 ವರ್ಷದ ವೃದ್ಧನಿಂದ ಲೈಂಗಿಕ ದೌರ್ಜನ್ಯ, ಆರೋಪಿ ಅರೆಸ್ಟ್

ಮೃತ ಮಹಿಳೆಯ ತಂದೆಯ ಆರೋಪದ ಆಧಾರದ ಮೇಲೆ ನಾವು ನಮ್ಮ ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಹಾವಾಡಿಗನನ್ನು ವಿಚಾರಣೆ ನಡೆಸುತ್ತೇವೆ ಎಂದಿದ್ದಾರೆ. ಪ್ರಕರಣದ ವಿವರವಾದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ