AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮದ್ಯ ಸೇವಿಸಲು ಹಣಕ್ಕಾಗಿ ಬೈಕ್ ಕಳ್ಳತನ, ಆರೋಪಿ ಬಂಧನ

ದಿನನಿತ್ಯ ಮದ್ಯ ಸೇವಿಸಲು ಹಣಕ್ಕಾಗಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ನಗರದ ಗಿರಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಒಂದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕದ್ದು ಅದರ ಬ್ಯಾಟರಿ, ಟೈರ್​ಗಳನ್ನು ತೆಗೆದು ಮಾರಾಟ ಮಾಡಿ ಬೈಕ್​ ಅನ್ನು ಮತ್ತೊಂದು ಠಾಣಾ ವ್ಯಾಪ್ತಿಯಲ್ಲಿ ಬಿಟ್ಟು ಹೋಗುತ್ತಿದ್ದನು.

ಬೆಂಗಳೂರು: ಮದ್ಯ ಸೇವಿಸಲು ಹಣಕ್ಕಾಗಿ ಬೈಕ್ ಕಳ್ಳತನ, ಆರೋಪಿ ಬಂಧನ
ಮದ್ಯ ಸೇವಿಸಲು ಹಣಕ್ಕಾಗಿ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ
ಶಿವಪ್ರಸಾದ್​ ಬಿ.
| Edited By: Rakesh Nayak Manchi|

Updated on: Nov 04, 2023 | 10:07 AM

Share

ಬೆಂಗಳೂರು, ನ.4: ದಿನನಿತ್ಯ ಮದ್ಯ ಸೇವಿಸಲು ಹಣಕ್ಕಾಗಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು (Bengaluru) ನಗರದ ಗಿರಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಒಂದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕದ್ದು ಅದರ ಬ್ಯಾಟರಿ, ಟೈರ್​ಗಳನ್ನು ತೆಗೆದು ಮಾರಾಟ ಮಾಡಿ ಬೈಕ್​ ಅನ್ನು ಮತ್ತೊಂದು ಠಾಣಾ ವ್ಯಾಪ್ತಿಯಲ್ಲಿ ಬಿಟ್ಟು ಹೋಗುತ್ತಿದ್ದನು.

ಕ್ವಾರ್ಟರ್‌ ಎಣ್ಣೆಗಾಗಿ ಬೈಕ್ ಕದಿಯುತ್ತಿದ್ದ ಲಕ್ಷ್ಮಣ್ ಬಂಧಿತ ಆರೋಪಿ. ದಿನನಿತ್ಯ ಮದ್ಯ ಸೇವಿಸಲು ಹಣಕ್ಕಾಗಿ ಕಳ್ಳತನವನ್ನೇ ವೃತ್ತಿಯಾಗಿಸಿಕೊಂಡಿದ್ದ ಈತ, ಮದ್ಯ ಸೇವಿಸಲು ಬೈಕ್ ಕದ್ದು ಬ್ಯಾಟರಿ ಮಾರಾಟ ಮಾಡಿ ಬಂದ ಹಣದಲ್ಲಿ ಮದ್ಯ ಸೇವನೆ ಮಾಡುತ್ತಿದ್ದನು.

ಇದನ್ನೂ ಓದಿ: ಬೆಂಗಳೂರು: 100 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಮನೆಗಳ್ಳನ ಬಂಧನ

ಕೆಲವು ತಿಂಗಳ ಹಿಂದೆ ಪೊಲೀಸರ ಕೈಗೆ ಲಾಕ್ ಆಗಿ ಜೈಲು ಸೇರಿದ್ದ ಆರೋಪಿ, ಜೈಲಿಂದ ಬಿಡುಗಡೆ ಬಳಿಕ ಮತ್ತೆ ಬೈಕ್ ಕಳ್ಳತನ ಮುಂದುವರೆಸಿದ್ದ. ಈತನ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಒಟ್ಟು 15 ಪ್ರಕರಣ ದಾಖಲಾಗಿವೆ.

ಸದ್ಯ ಆರೋಪಿ ಲಕ್ಷ್ಮಣನನ್ನು ಬಂಧಿಸಿದ ಗಿರಿನಗರ ಠಾಣಾ ಪೊಲೀಸರು, ಈತನಿಂದ 11.55 ಲಕ್ಷ ಮೌಲ್ಯದ 20 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಅಲ್ಲದೆ, ತನಿಖೆಯನ್ನು ಮುಂದುವರಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ