AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತ ಉಪ ತಹಶೀಲ್ದಾರ್ ಕೊಲೆ ಪ್ರಕರಣ: ಉತ್ತರ ಪ್ರದೇಶ ಮೂಲದ ಆರೋಪಿ ಅರೆಸ್ಟ್

Retired Tahsildar Murder Case | ನಿವೃತ್ತ ಉಪ ತಹಶೀಲ್ದಾರ್ ಕೆ.ರಾಜೇಶ್ವರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಪ್ರದೇಶ ಮೂಲದ ಇಬ್ರಾಹಿಂ ಖಾನ್(45) ಎಂಬ ವ್ಯಕ್ತಿಯನ್ನು ಬೆಂಗಳೂರಿನ ವಿ.ವಿ.ಪುರಂ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ನಿವೃತ್ತ ಉಪ ತಹಶೀಲ್ದಾರ್ ಕೊಲೆ ಪ್ರಕರಣ: ಉತ್ತರ ಪ್ರದೇಶ ಮೂಲದ ಆರೋಪಿ ಅರೆಸ್ಟ್
ನಿವೃತ್ತ ಉಪ ತಹಶೀಲ್ದಾರ್ ರಾಜೇಶ್ವರಿ
ಆಯೇಷಾ ಬಾನು
|

Updated on: Feb 17, 2021 | 7:31 AM

Share

ಬೆಂಗಳೂರು: ನಿವೃತ್ತ ಉಪ ತಹಶೀಲ್ದಾರ್ ಕೆ.ರಾಜೇಶ್ವರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಪ್ರದೇಶ ಮೂಲದ ಇಬ್ರಾಹಿಂ ಖಾನ್(45) ಎಂಬ ವ್ಯಕ್ತಿಯನ್ನು ಬೆಂಗಳೂರಿನ ವಿ.ವಿ.ಪುರಂ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಮೂವರನ್ನು ಬಂಧಿಸಿದ್ದು ಇದೀಗ ಮತ್ತೊಬ್ಬ ಆರೋಪಿ ಇಬ್ರಾಹಿಂ ಖಾನ್ ಅರೆಸ್ಟ್ ಆಗಿದ್ದಾನೆ.

ನಿವೃತ್ತ ಉಪ ತಹಶೀಲ್ದಾರ್ ರಾಜೇಶ್ವರಿ ಸರಸ್ವತಿಪುರಂನಲ್ಲಿದ್ದ ತಮ್ಮ 3 ಅಂತಸ್ತಿನ ಮನೆ ಬಾಡಿಗೆಗೆ ನೀಡಿದ್ದರು. ಅದರಲ್ಲಿ, 3ನೇ ಅಂತಸ್ತಿನಲ್ಲಿ ಬ್ಯಾಚುಲರ್ಸ್​ಗೆ ಮನೆ ಬಾಡಿಗೆ ನೀಡಿದ್ದರು. ಆದರೆ, ಬಾಡಿಗೆಗೆ ಇದ್ದ ಹುಡುಗರು ಕಳೆದ 7 ತಿಂಗಳಿಂದ ಬಾಡಿಗೆ ಹಣ ನೀಡದೆ ಸತಾಯಿಸುತ್ತಿದ್ದರು. ಹೀಗಾಗಿ ರಾಜೇಶ್ವರಿ, ಬಾಡಿಗೆ ಹಣ ಕೇಳಲು ಜನವರಿ 3ರಂದು ಮನೆ ಬಳಿ ತೆರಳಿದ್ದರು. ಬಾಡಿಗೆದಾರ ಅಲಿಮ್ ಪಾಷಾಗೆ ಹಣ ನೀಡುವಂತೆ ಕೇಳಿದ್ದರು. ಜೊತೆಗೆ, ಬಾಡಿಗೆ ಹಣ ನೀಡದಿದ್ದರೆ ಪೊಲೀಸರಿಗೆ ದೂರು ಕೊಡುತ್ತೇನೆ ಎಂದು ವಾರ್ನಿಂಗ್​ ಸಹ ಕೊಟ್ಟಿದ್ದರು. ಇದರಿಂದ ಸಿಟ್ಟಿಗೆದ್ದ ಅಲಿಮ್ ಪಾಷಾ, ರಾಜೇಶ್ವರಿಯನ್ನು ತನ್ನ ಮನೆಯೊಳಗೆ ಎಳೆದು ಕತ್ತು ಸೀಳಿ ಕೊಂದಿದ್ದ.

ತೀವ್ರ ರಕ್ತಸ್ರಾವದಿಂದ ನಿವೃತ್ತ ಉಪತಹಶೀಲ್ದಾರ್​ ಸ್ಥಳದಲ್ಲೇ ಮೃತಪಟ್ಟಿದ್ರು. ಇನ್ನು, ಘಟನೆ ಬಳಿಕ ಆರೋಪಿ ಕೃತ್ಯದ ಬಗ್ಗೆ ತನ್ನ ಚಿಕ್ಕಪ್ಪ ಹಾಗೂ ಸ್ನೇಹಿತನಿಗೆ ಕರೆ ಮಾಡಿ ತಿಳಿಸಿದ್ದ. ಬಳಿಕ ಅವರೆಲ್ಲರೂ ಸೇರಿ ಆಟೋದಲ್ಲಿ ರಾಮನಗರದ ಬಿಡದಿ ಬಳಿ ರಾಜೇಶ್ವರಿ ಶವವನ್ನು ಸಾಗಿಸಿ ಸುಟ್ಟಿದ್ದರು. ಇದಾದ ಬಳಿಕ, ನಿವೃತ್ತ ತಹಶೀಲ್ದಾರ್​ ರಾಜೇಶ್ವರಿ ನಾಪತ್ತೆಯಾಗಿರುವ ಬಗ್ಗೆ ಅವರ ಕುಟುಂಬಸ್ಥರು ವಿ.ವಿ.ಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿ ಅಲಿಮ್​ ಪಾಷಾನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಬಳಿಕ ಜೆರಾನ್ ಪಾಷಾ ಹಾಗೂ ಅಶ್ರಫುನ್ನೀಸಾ ಎಂಬಾಕೆಯನ್ನ ಬಂಧಿಸಿದ್ದು ಅಲಿಮ್​ ಪಾಷಾಗೆ ಸಹಾಯ ಮಾಡಿದಕ್ಕೆ ಸದ್ಯ ಈಗ ಮತ್ತೊಬ್ಬ ಆರೋಪಿಯನ್ನೂ ಬಂಧಿಸಿದ್ದಾರೆ.

ಇದನ್ನೂ ಓದಿ: ಬಾಡಿಗೆ ಹಣದ ವಿಚಾರವಾಗಿ ನಡೆದ ಜಗಳ.. ನಿವೃತ್ತ ಉಪ ತಹಶೀಲ್ದಾರ್ ಕೊಲೆಯಲ್ಲಿ ಅಂತ್ಯ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?