AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತ ಉಪ ತಹಶೀಲ್ದಾರ್ ಕೊಲೆ ಪ್ರಕರಣ: ಉತ್ತರ ಪ್ರದೇಶ ಮೂಲದ ಆರೋಪಿ ಅರೆಸ್ಟ್

Retired Tahsildar Murder Case | ನಿವೃತ್ತ ಉಪ ತಹಶೀಲ್ದಾರ್ ಕೆ.ರಾಜೇಶ್ವರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಪ್ರದೇಶ ಮೂಲದ ಇಬ್ರಾಹಿಂ ಖಾನ್(45) ಎಂಬ ವ್ಯಕ್ತಿಯನ್ನು ಬೆಂಗಳೂರಿನ ವಿ.ವಿ.ಪುರಂ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ನಿವೃತ್ತ ಉಪ ತಹಶೀಲ್ದಾರ್ ಕೊಲೆ ಪ್ರಕರಣ: ಉತ್ತರ ಪ್ರದೇಶ ಮೂಲದ ಆರೋಪಿ ಅರೆಸ್ಟ್
ನಿವೃತ್ತ ಉಪ ತಹಶೀಲ್ದಾರ್ ರಾಜೇಶ್ವರಿ
ಆಯೇಷಾ ಬಾನು
|

Updated on: Feb 17, 2021 | 7:31 AM

Share

ಬೆಂಗಳೂರು: ನಿವೃತ್ತ ಉಪ ತಹಶೀಲ್ದಾರ್ ಕೆ.ರಾಜೇಶ್ವರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಪ್ರದೇಶ ಮೂಲದ ಇಬ್ರಾಹಿಂ ಖಾನ್(45) ಎಂಬ ವ್ಯಕ್ತಿಯನ್ನು ಬೆಂಗಳೂರಿನ ವಿ.ವಿ.ಪುರಂ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಮೂವರನ್ನು ಬಂಧಿಸಿದ್ದು ಇದೀಗ ಮತ್ತೊಬ್ಬ ಆರೋಪಿ ಇಬ್ರಾಹಿಂ ಖಾನ್ ಅರೆಸ್ಟ್ ಆಗಿದ್ದಾನೆ.

ನಿವೃತ್ತ ಉಪ ತಹಶೀಲ್ದಾರ್ ರಾಜೇಶ್ವರಿ ಸರಸ್ವತಿಪುರಂನಲ್ಲಿದ್ದ ತಮ್ಮ 3 ಅಂತಸ್ತಿನ ಮನೆ ಬಾಡಿಗೆಗೆ ನೀಡಿದ್ದರು. ಅದರಲ್ಲಿ, 3ನೇ ಅಂತಸ್ತಿನಲ್ಲಿ ಬ್ಯಾಚುಲರ್ಸ್​ಗೆ ಮನೆ ಬಾಡಿಗೆ ನೀಡಿದ್ದರು. ಆದರೆ, ಬಾಡಿಗೆಗೆ ಇದ್ದ ಹುಡುಗರು ಕಳೆದ 7 ತಿಂಗಳಿಂದ ಬಾಡಿಗೆ ಹಣ ನೀಡದೆ ಸತಾಯಿಸುತ್ತಿದ್ದರು. ಹೀಗಾಗಿ ರಾಜೇಶ್ವರಿ, ಬಾಡಿಗೆ ಹಣ ಕೇಳಲು ಜನವರಿ 3ರಂದು ಮನೆ ಬಳಿ ತೆರಳಿದ್ದರು. ಬಾಡಿಗೆದಾರ ಅಲಿಮ್ ಪಾಷಾಗೆ ಹಣ ನೀಡುವಂತೆ ಕೇಳಿದ್ದರು. ಜೊತೆಗೆ, ಬಾಡಿಗೆ ಹಣ ನೀಡದಿದ್ದರೆ ಪೊಲೀಸರಿಗೆ ದೂರು ಕೊಡುತ್ತೇನೆ ಎಂದು ವಾರ್ನಿಂಗ್​ ಸಹ ಕೊಟ್ಟಿದ್ದರು. ಇದರಿಂದ ಸಿಟ್ಟಿಗೆದ್ದ ಅಲಿಮ್ ಪಾಷಾ, ರಾಜೇಶ್ವರಿಯನ್ನು ತನ್ನ ಮನೆಯೊಳಗೆ ಎಳೆದು ಕತ್ತು ಸೀಳಿ ಕೊಂದಿದ್ದ.

ತೀವ್ರ ರಕ್ತಸ್ರಾವದಿಂದ ನಿವೃತ್ತ ಉಪತಹಶೀಲ್ದಾರ್​ ಸ್ಥಳದಲ್ಲೇ ಮೃತಪಟ್ಟಿದ್ರು. ಇನ್ನು, ಘಟನೆ ಬಳಿಕ ಆರೋಪಿ ಕೃತ್ಯದ ಬಗ್ಗೆ ತನ್ನ ಚಿಕ್ಕಪ್ಪ ಹಾಗೂ ಸ್ನೇಹಿತನಿಗೆ ಕರೆ ಮಾಡಿ ತಿಳಿಸಿದ್ದ. ಬಳಿಕ ಅವರೆಲ್ಲರೂ ಸೇರಿ ಆಟೋದಲ್ಲಿ ರಾಮನಗರದ ಬಿಡದಿ ಬಳಿ ರಾಜೇಶ್ವರಿ ಶವವನ್ನು ಸಾಗಿಸಿ ಸುಟ್ಟಿದ್ದರು. ಇದಾದ ಬಳಿಕ, ನಿವೃತ್ತ ತಹಶೀಲ್ದಾರ್​ ರಾಜೇಶ್ವರಿ ನಾಪತ್ತೆಯಾಗಿರುವ ಬಗ್ಗೆ ಅವರ ಕುಟುಂಬಸ್ಥರು ವಿ.ವಿ.ಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿ ಅಲಿಮ್​ ಪಾಷಾನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಬಳಿಕ ಜೆರಾನ್ ಪಾಷಾ ಹಾಗೂ ಅಶ್ರಫುನ್ನೀಸಾ ಎಂಬಾಕೆಯನ್ನ ಬಂಧಿಸಿದ್ದು ಅಲಿಮ್​ ಪಾಷಾಗೆ ಸಹಾಯ ಮಾಡಿದಕ್ಕೆ ಸದ್ಯ ಈಗ ಮತ್ತೊಬ್ಬ ಆರೋಪಿಯನ್ನೂ ಬಂಧಿಸಿದ್ದಾರೆ.

ಇದನ್ನೂ ಓದಿ: ಬಾಡಿಗೆ ಹಣದ ವಿಚಾರವಾಗಿ ನಡೆದ ಜಗಳ.. ನಿವೃತ್ತ ಉಪ ತಹಶೀಲ್ದಾರ್ ಕೊಲೆಯಲ್ಲಿ ಅಂತ್ಯ

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ