AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚಡಿಗೆ ಉಪ್ಪು ಹೆಚ್ಚಾಗಿದ್ದಕ್ಕೆ ಪತ್ನಿಯನ್ನು ಕೊಂದ ವ್ಯಕ್ತಿ; ಉದ್ದನೆಯ ಬಟ್ಟೆಯಲ್ಲಿ ಕತ್ತು ಹಿಸುಕಿ ಹತ್ಯೆ

ನೀಲೇಶ್ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.  ಬರೀ ಕಿಚಡಿ ಉಪ್ಪಾಗಿದ್ದೇ ಕೊಲೆಗೆ ಕಾರಣವೋ ಅಥವಾ ಇನ್ನೇನಾದರೂ ಬೇರೆ ಕಾರಣ ಇರಬಹುದಾ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಕಿಚಡಿಗೆ ಉಪ್ಪು ಹೆಚ್ಚಾಗಿದ್ದಕ್ಕೆ ಪತ್ನಿಯನ್ನು ಕೊಂದ ವ್ಯಕ್ತಿ; ಉದ್ದನೆಯ ಬಟ್ಟೆಯಲ್ಲಿ ಕತ್ತು ಹಿಸುಕಿ ಹತ್ಯೆ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on: Apr 17, 2022 | 9:08 AM

Share

ಕೆಲವು ಕ್ಷುಲ್ಲಕ ಕಾರಣಗಳಿಗೆಲ್ಲ ಕೊಲೆ ನಡೆದುಹೋಗುತ್ತದೆ. ಹಾಗೇ, ಪುಣೆಯಲ್ಲೊಬ್ಬ 40 ವರ್ಷದ ವ್ಯಕ್ತಿ ತನ್ನ ಪತ್ನಿ ಬೆಳಗ್ಗೆ ಉಪಾಹಾರಕ್ಕೆ ನೀಡಿದ ತಿಂಡಿಯಲ್ಲಿ ಉಪ್ಪು ಜಾಸ್ತಿ ಎಂಬ ಕಾರಣಕ್ಕೆ ಸಿಟ್ಟಾಗಿ ಆಕೆಯ ಕತ್ತು ಹಿಸುಕಿ, ಉಸಿರುಕಟ್ಟಿಸಿ ಹತ್ಯೆ ಮಾಡಿದ್ದಾನೆ. ಭಾಯಂದರ್ ಪೂರ್ವದಲ್ಲಿರುವ ಪಾಠಕ್​ ರಸ್ತೆಯ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.  ಆರೋಪಿಯನ್ನು ನೀಲೇಶ್ ಘಗ್​ ಎಂದು ಗುರುತಿಸಲಾಗಿದ್ದು 46 ವರ್ಷ. ಮೃತ ಮಹಿಳೆ ನಿರ್ಮಲಾ. ಶುಕ್ರವಾರ ಬೆಳಗ್ಗೆ ನಿರ್ಮಲಾ ತಿಂಡಿಗೆ ಕಿಚಡಿ ಮಾಡಿದ್ದರು. ಬೆಳಗ್ಗೆ 9.30ರ ಹೊತ್ತಿಗೆ ನೀಲೇಶ್​ ಅದನ್ನು ತಿನ್ನಲು ಕುಳಿತಿದ್ದ. ಆದರೆ ಕಿಚಡಿ ಜಾಸ್ತಿ ಎನ್ನುವಷ್ಟು ಉಪ್ಪಾಗಿತ್ತು. ಅದಕ್ಕೆ ಸಿಟ್ಟಾದ ನೀಲೇಶ್ ಪತ್ನಿಗೆ ಬಾಯಿಗೆ ಬಂದಂತೆ ಬೈದಿದ್ದಾನೆ. ನಂತರ ಒಂದು ಉದ್ದನೆಯ ಬಟ್ಟೆಯನ್ನು ಆಕೆಯ ಕುತ್ತಿಗೆಗೆ ಹಾಕಿ ಹಿಸುಕಿದ್ದಾನೆ ಎಂದು ಪೊಲೀಸ್ ಅಧಿಕಾರಿ ಮೀರಾ ಭಯಂದರ್ ತಿಳಿಸಿದ್ದಾರೆ. 

ಇದಾದ ಬಳಿಕ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಕರೆ ಮಾಡಿದ್ದಾರೆ. ನೀಲೇಶ್ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.  ಬರೀ ಕಿಚಡಿ ಉಪ್ಪಾಗಿದ್ದೇ ಕೊಲೆಗೆ ಕಾರಣವೋ ಅಥವಾ ಇನ್ನೇನಾದರೂ ಬೇರೆ ಕಾರಣ ಇರಬಹುದಾ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಹಾಗೇ, ಗುರುವಾರ ಕೂಡ ಇಂಥದ್ದೇ ಒಂದು ಘಟನೆ ನಡೆದಿತ್ತು. ರಾಬೋಡಿಯಲ್ಲಿ ಮಾವನೊಬ್ಬ ತನ್ನ ಸೊಸೆಯನ್ನು ಹತ್ಯೆ ಮಾಡಿದ್ದ. ಬೆಳಗ್ಗಿನ ತಿಂಡಿ ಜತೆ ಆಕೆ ಚಹಾ ಕೊಡಲಿಲ್ಲ ಎಂದು ಸಿಟ್ಟಿಗೆದ್ದು ಗುಂಡು ಹಾರಿಸಿದ್ದ. ಹೊಟ್ಟೆಗೆ ಗುಂಡೇಟು ತಿಂದು ಆಸ್ಪತ್ರೆಗೆ ಸೇರಿದ್ದ 42 ವರ್ಷದ ಮಹಿಳೆ ಕೊನೆಗೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು.

ಇದನ್ನೂ ಓದಿ: ದೆಹಲಿಯಲ್ಲಿ ಹನುಮಾನ್​ ಜಯಂತಿ ಶೋಭಾಯಾತ್ರೆ ಮೇಲೆ ಕಲ್ಲು ತೂರಾಟ; ಹಿಂಸಾಚಾರದಲ್ಲಿ 6 ಪೊಲೀಸರಿಗೆ ಗಾಯ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ