AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚಡಿಗೆ ಉಪ್ಪು ಹೆಚ್ಚಾಗಿದ್ದಕ್ಕೆ ಪತ್ನಿಯನ್ನು ಕೊಂದ ವ್ಯಕ್ತಿ; ಉದ್ದನೆಯ ಬಟ್ಟೆಯಲ್ಲಿ ಕತ್ತು ಹಿಸುಕಿ ಹತ್ಯೆ

ನೀಲೇಶ್ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.  ಬರೀ ಕಿಚಡಿ ಉಪ್ಪಾಗಿದ್ದೇ ಕೊಲೆಗೆ ಕಾರಣವೋ ಅಥವಾ ಇನ್ನೇನಾದರೂ ಬೇರೆ ಕಾರಣ ಇರಬಹುದಾ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಕಿಚಡಿಗೆ ಉಪ್ಪು ಹೆಚ್ಚಾಗಿದ್ದಕ್ಕೆ ಪತ್ನಿಯನ್ನು ಕೊಂದ ವ್ಯಕ್ತಿ; ಉದ್ದನೆಯ ಬಟ್ಟೆಯಲ್ಲಿ ಕತ್ತು ಹಿಸುಕಿ ಹತ್ಯೆ
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Apr 17, 2022 | 9:08 AM

ಕೆಲವು ಕ್ಷುಲ್ಲಕ ಕಾರಣಗಳಿಗೆಲ್ಲ ಕೊಲೆ ನಡೆದುಹೋಗುತ್ತದೆ. ಹಾಗೇ, ಪುಣೆಯಲ್ಲೊಬ್ಬ 40 ವರ್ಷದ ವ್ಯಕ್ತಿ ತನ್ನ ಪತ್ನಿ ಬೆಳಗ್ಗೆ ಉಪಾಹಾರಕ್ಕೆ ನೀಡಿದ ತಿಂಡಿಯಲ್ಲಿ ಉಪ್ಪು ಜಾಸ್ತಿ ಎಂಬ ಕಾರಣಕ್ಕೆ ಸಿಟ್ಟಾಗಿ ಆಕೆಯ ಕತ್ತು ಹಿಸುಕಿ, ಉಸಿರುಕಟ್ಟಿಸಿ ಹತ್ಯೆ ಮಾಡಿದ್ದಾನೆ. ಭಾಯಂದರ್ ಪೂರ್ವದಲ್ಲಿರುವ ಪಾಠಕ್​ ರಸ್ತೆಯ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.  ಆರೋಪಿಯನ್ನು ನೀಲೇಶ್ ಘಗ್​ ಎಂದು ಗುರುತಿಸಲಾಗಿದ್ದು 46 ವರ್ಷ. ಮೃತ ಮಹಿಳೆ ನಿರ್ಮಲಾ. ಶುಕ್ರವಾರ ಬೆಳಗ್ಗೆ ನಿರ್ಮಲಾ ತಿಂಡಿಗೆ ಕಿಚಡಿ ಮಾಡಿದ್ದರು. ಬೆಳಗ್ಗೆ 9.30ರ ಹೊತ್ತಿಗೆ ನೀಲೇಶ್​ ಅದನ್ನು ತಿನ್ನಲು ಕುಳಿತಿದ್ದ. ಆದರೆ ಕಿಚಡಿ ಜಾಸ್ತಿ ಎನ್ನುವಷ್ಟು ಉಪ್ಪಾಗಿತ್ತು. ಅದಕ್ಕೆ ಸಿಟ್ಟಾದ ನೀಲೇಶ್ ಪತ್ನಿಗೆ ಬಾಯಿಗೆ ಬಂದಂತೆ ಬೈದಿದ್ದಾನೆ. ನಂತರ ಒಂದು ಉದ್ದನೆಯ ಬಟ್ಟೆಯನ್ನು ಆಕೆಯ ಕುತ್ತಿಗೆಗೆ ಹಾಕಿ ಹಿಸುಕಿದ್ದಾನೆ ಎಂದು ಪೊಲೀಸ್ ಅಧಿಕಾರಿ ಮೀರಾ ಭಯಂದರ್ ತಿಳಿಸಿದ್ದಾರೆ. 

ಇದಾದ ಬಳಿಕ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಕರೆ ಮಾಡಿದ್ದಾರೆ. ನೀಲೇಶ್ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.  ಬರೀ ಕಿಚಡಿ ಉಪ್ಪಾಗಿದ್ದೇ ಕೊಲೆಗೆ ಕಾರಣವೋ ಅಥವಾ ಇನ್ನೇನಾದರೂ ಬೇರೆ ಕಾರಣ ಇರಬಹುದಾ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಹಾಗೇ, ಗುರುವಾರ ಕೂಡ ಇಂಥದ್ದೇ ಒಂದು ಘಟನೆ ನಡೆದಿತ್ತು. ರಾಬೋಡಿಯಲ್ಲಿ ಮಾವನೊಬ್ಬ ತನ್ನ ಸೊಸೆಯನ್ನು ಹತ್ಯೆ ಮಾಡಿದ್ದ. ಬೆಳಗ್ಗಿನ ತಿಂಡಿ ಜತೆ ಆಕೆ ಚಹಾ ಕೊಡಲಿಲ್ಲ ಎಂದು ಸಿಟ್ಟಿಗೆದ್ದು ಗುಂಡು ಹಾರಿಸಿದ್ದ. ಹೊಟ್ಟೆಗೆ ಗುಂಡೇಟು ತಿಂದು ಆಸ್ಪತ್ರೆಗೆ ಸೇರಿದ್ದ 42 ವರ್ಷದ ಮಹಿಳೆ ಕೊನೆಗೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು.

ಇದನ್ನೂ ಓದಿ: ದೆಹಲಿಯಲ್ಲಿ ಹನುಮಾನ್​ ಜಯಂತಿ ಶೋಭಾಯಾತ್ರೆ ಮೇಲೆ ಕಲ್ಲು ತೂರಾಟ; ಹಿಂಸಾಚಾರದಲ್ಲಿ 6 ಪೊಲೀಸರಿಗೆ ಗಾಯ

ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ