AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನೈತಿಕ ಸಂಬಂಧ: ನಡುರಸ್ತೆಯಲ್ಲಿ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಹಲ್ಲೆ ಮಾಡಿದ ಪತಿ

ಪತ್ನಿಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿದ ಪತಿಯೊಬ್ಬ ನಡುರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ನು ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಸ್ಫೋಟಕ ಅಂಶವನ್ನು ಬಾಯ್ಬಿಟ್ಟಿದ್ದಾನೆ.

ಅನೈತಿಕ ಸಂಬಂಧ: ನಡುರಸ್ತೆಯಲ್ಲಿ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಹಲ್ಲೆ ಮಾಡಿದ ಪತಿ
TV9 Web
| Edited By: |

Updated on: Feb 20, 2024 | 4:36 PM

Share

ಬೆಂಗಳೂರು, (ಫೆಬ್ರವರಿ 20): ಬೇರೊಬ್ಬನ ಜೊತೆ ಅನೈತಿಕ ಸಂಬಂಧದ(illicit relationship_ ಅನುಮಾನದ ಮೇಲೆ ನಡುರಸ್ತೆಯಲ್ಲೇ ಪತ್ನಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆಯನ್ನು (Assault) ಮಾಡಿದ್ದಾನೆ. ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಪತ್ನಿಗೆ ಮಚ್ಚಿನಿಂದ ಹೊಡೆದಿದ್ದಾನೆ. ಬೆಂಗಳೂರಿನ(Bengaluru) ಜೀವನ್ ಭೀಮಾ ನಗರದ ವಿಂಡ್ ಟನಲ್ ರಸ್ತೆಯಲ್ಲಿ ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಶೇಕ್ ಮುಜೀಬ್‌ ಎನ್ನುವಾತ ನೈಗರ್ (28) ಎನ್ನುವಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಆದ್ರೆ, ಹೆಂಡ್ತಿ ಬೇರೊಬ್ಬನ ಜತೆ ಸಂಬಂಧ ಹೊಂದಿದ್ದಾಳೆಂದು ಆಕೆಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ.

ನೈಗರ್​ಳ ತಲೆಗೆ ಮಚ್ಚಿನ ಏಟು ಬಿದ್ದಿದ್ದು, ಸದ್ಯ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಇನ್ನು ಶೇಕ್ ಮುಜೀಬ್ ನನ್ನು ಜೆ ಬಿ ನಗರ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಇದನ್ನೂ ಓದಿ: ದೊಡ್ಡಬಳ್ಳಾಪುರ: ಯುವಕನ ಮೇಲೆ ಲಾಠಿಗಳಿಂದ ಹಲ್ಲೆ ನಡೆಸಿದ ಅಪಾರ್ಟ್​ಮೆಂಟ್ ಸೆಕ್ಯುರಿಟಿ ಗಾರ್ಡ್​ಗಳು

ನೈಗರ್​ಳನ್ನ ಪ್ರೀತಿಸಿ ಮದುವೆಯಾಗಿದ್ದ ಹೊಸಕೋಟೆ ಮೂಲದ ಶೇಕ್ ಮುಜೀಬ್, ಆರ್ ಟಿ ನಗರದಲ್ಲಿ ನೆಲೆಸಿದ್ದ. ನೈಗರ್, ಮುರುಗೇಶ್ ಪಾಳ್ಯದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ, ಆರೋಪಿ ಶೇಕ್ ಮುಜೀಬ್ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಯುವಕನ ಜೊತೆ ಸಂಬಂಧ ಇದೆ ಎಂದು ಅನುಮಾನ ಬಂದಿದೆ. ಈ ಹಿನ್ನೆಲೆಯಲ್ಲಿ ನೈಗರ್​ಳನ್ನ ಕೆಲಸಕ್ಕೆ ಹೋಗುವುದನ್ನ ಬಿಡಿಸಬೇಕು ಎಂದು ಪ್ಲ್ಯಾನ್ ಮಾಡಿದ್ದ. ಹೀಗಾಗಿ ಆಕೆಯ ಕೈ ಬೆರಳು ಕಟ್ ಮಾಡಬೇಕೆಂದುಕೊಂಡಿದ್ದ. ಯಾಕಂದ್ರೆ ಬೆರಳುಗಳನ್ನ ಕತ್ತರಿಸಿದರೆ ಕೆಲಸ ಮಾಡಲು ಆಗುವುದಿಲ್ಲ. ಮನೆಯಲ್ಲೇ ಇರುತ್ತಾಳೆ ಎಂದು ತೀರ್ಮಾನಿಸಿ ಶಿವಾಜಿನಗರದಲ್ಲಿ ಮಚ್ಚು ಖರೀದಿಸಿರುವುದನ್ನು ಎಂದು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?