AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಗೋವಿನ ಚರ್ಮ ಸಾಗಾಟ ತಡೆದಿದ್ದಕ್ಕೆ ಶಿಕಾರಿಪುರ ಪೊಲೀಸ್ ಠಾಣೆ ಎದುರೇ ವ್ಯಕ್ತಿ ಮೇಲೆ ಹಲ್ಲೆ

ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ಎರಡು ಗುಂಪುಗಳ ನಡುವೆ ಜಗಳ ನಡೆದ ಬೆನ್ನಲ್ಲೇ ಮತ್ತೊಂದು ಪ್ರಕರಣ ನಡೆದಿದೆ. ಗೋವಿನ ಚರ್ಮ ಸಾಗಾಟ ತಡೆದ ವ್ಯಕ್ತಿಯೊಬ್ಬನ ಮೇಲೆ ಯುವಕರ ತಂಡವೊಂದು ಶಿಕಾರಿಪುರ ಪೊಲೀಸ್ ಠಾಣೆಯ ಎದುರೇ ಹಲ್ಲೆ ನಡೆಸಿದೆ.

ಶಿವಮೊಗ್ಗ: ಗೋವಿನ ಚರ್ಮ ಸಾಗಾಟ ತಡೆದಿದ್ದಕ್ಕೆ ಶಿಕಾರಿಪುರ ಪೊಲೀಸ್ ಠಾಣೆ ಎದುರೇ ವ್ಯಕ್ತಿ ಮೇಲೆ ಹಲ್ಲೆ
ಶಿವಮೊಗ್ಗದಲ್ಲಿ ಗೋವಿನ ಚರ್ಮ ಸಾಗಾಟ ತಡೆದ ಗುಂಪಿನ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿದ ಮತ್ತೊಂದು ತಂಡ
Follow us
Basavaraj Yaraganavi
| Updated By: Rakesh Nayak Manchi

Updated on:Jun 30, 2023 | 8:06 PM

ಶಿವಮೊಗ್ಗ: ಗೋವಿನ ಚರ್ಮ ಸಾಗಾಟ ತಡೆದ ವ್ಯಕ್ತಿಯೊಬ್ಬನ ಮೇಲೆ ಗುಂಪೊಂದು ಪೊಲೀಸ್ ಠಾಣೆ ಎದುರೇ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ (Shikaripur) ನಡೆದಿದೆ. ಅಕ್ರಮವಾಗಿ ಗೋವುಗಳ ಚರ್ಮ ಸಾಗಿಸುತ್ತಿದ್ದ ವಿಚಾರ ತಿಳಿದ ಗುಂಪೊಂದು ಅದನ್ನು ತಡೆದು ಪೊಲೀಸ್ ಠಾಣೆಗೆ ಒಪ್ಪಿಸಿದೆ. ಈ ವಿಚಾರವಾಗಿ ಯುವಕರ ಮತ್ತೊಂದು ತಂಡ ಪೊಲೀಸರ ಎದುರೇ ಹಲ್ಲೆ ನಡೆಸಿದೆ.

ಬಕ್ರಿದ್ ಹಬ್ಬದ ಪ್ರಯುಕ್ತ ಗೋವನ್ನು ಹತ್ಯೆ ಮಾಡಿ ಅದರ ಚರ್ಮವನ್ನು ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದ ಗುಂಪೊಂದು ಅದನ್ನು ತಡೆದು ಶಿಕಾರಿಪುರ ಠಾಣಾ ಪೊಲೀಸರ ವಶಕ್ಕೆ ನೀಡಿದೆ. ಈ ವಿಚಾರ ತಿಳಿಯುತ್ತಿದ್ದಂತೆ ದೊಡ್ಡ ಸಂಖ್ಯೆಯ ಗುಂಪೊಂದು ಪೊಲೀಸ್ ಠಾಣೆ ಎದುರು ಜಮಾಯಿಸಿ ಅಕ್ರಮ ಸಾಗಾಟ ತಡೆದ ಗುಂಪಿನ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾದ ಹಿನ್ನೆಲೆ ಪೊಲೀಸರು ಗುಂಪನ್ನು ಚದುರಿಸಿದ್ದಾರೆ.

ಇದನ್ನೂ ಓದಿ: ಹೈಟೆಕ್ ಸ್ಪಾ ಕೇಂದ್ರಗಳಲ್ಲಿ ವೇಶ್ಯಾವಾಟಿಕೆ! ಎತ್ತ ಸಾಗುತ್ತಿದೆ ಸಾಂಸ್ಕೃತಿಕ ನಗರಿ ಶಿವಮೊಗ್ಗ?

ಕೆಲವು ದಿನಗಳ ಹಿಂದೆಯಷ್ಟೇ, ಜಿಲ್ಲೆಯಲ್ಲಿ ಒಂದೇ ದಿನ ಎರಡು ಕಡೆಗಳಲ್ಲಿ ಎರಡು ಗುಂಪುಗಳ ನಡುವೆ ಜಗಳ ನಡೆದು ಮೂವರು ಗಾಯಗೊಂಡಿದ್ದರು. ಶಿವಮೊಗ್ಗ ನಗರದ ಗೋಪಾಳದ ದ್ರೌಪದಮ್ಮ ಸರ್ಕಲ್​ನಲ್ಲಿ ನಡೆದ ಘಟನೆಯಲ್ಲಿ, ಮಾತನಾಡುವ ನೆಪದಲ್ಲಿ ವ್ಯಕ್ತಿಯೊಬ್ಬನನ್ನು ಕರೆದು ಹಲ್ಲೆ ಮಾಡಲಾಗಿತ್ತು. ಈ ವೇಳೆ ಎರಡು ಗುಂಪುಗಳ ನಡುವೆ ಪರಸ್ಪರ ಮಾತಿನ ಚಕಮಕಿ ನಡೆದಿದೆ. ನಂತರ ಬೈಕ್‌ನಲ್ಲಿ ವಾಪಸಾಗಲು ಮುಂದಾದ ವ್ಯಕ್ತಿಗೆ ಭರ್ಜಿಯಿಂದ ಚುಚ್ಚಲಾಗಿತ್ತು.

ಗೋಪಾಳದ ವಿನಾಯಕ ಸರ್ಕಲ್​ನಲ್ಲಿ ಗೂಡ್ಸ್ ಆಟೋಗೆ ಬೈಕ್ ತಾಗಿದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಇಬ್ಬರ ಮೇಲೆ ಹಲ್ಲೆ ನಡೆಸಲಾಗಿತ್ತು. ಎರಡು ಪ್ರಕರಣಗಳಲ್ಲಿ ಗಾಯಗೊಂಡ ಮೂವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:02 pm, Fri, 30 June 23

ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ