AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಗೋವಿನ ಚರ್ಮ ಸಾಗಾಟ ತಡೆದಿದ್ದಕ್ಕೆ ಶಿಕಾರಿಪುರ ಪೊಲೀಸ್ ಠಾಣೆ ಎದುರೇ ವ್ಯಕ್ತಿ ಮೇಲೆ ಹಲ್ಲೆ

ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ಎರಡು ಗುಂಪುಗಳ ನಡುವೆ ಜಗಳ ನಡೆದ ಬೆನ್ನಲ್ಲೇ ಮತ್ತೊಂದು ಪ್ರಕರಣ ನಡೆದಿದೆ. ಗೋವಿನ ಚರ್ಮ ಸಾಗಾಟ ತಡೆದ ವ್ಯಕ್ತಿಯೊಬ್ಬನ ಮೇಲೆ ಯುವಕರ ತಂಡವೊಂದು ಶಿಕಾರಿಪುರ ಪೊಲೀಸ್ ಠಾಣೆಯ ಎದುರೇ ಹಲ್ಲೆ ನಡೆಸಿದೆ.

ಶಿವಮೊಗ್ಗ: ಗೋವಿನ ಚರ್ಮ ಸಾಗಾಟ ತಡೆದಿದ್ದಕ್ಕೆ ಶಿಕಾರಿಪುರ ಪೊಲೀಸ್ ಠಾಣೆ ಎದುರೇ ವ್ಯಕ್ತಿ ಮೇಲೆ ಹಲ್ಲೆ
ಶಿವಮೊಗ್ಗದಲ್ಲಿ ಗೋವಿನ ಚರ್ಮ ಸಾಗಾಟ ತಡೆದ ಗುಂಪಿನ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿದ ಮತ್ತೊಂದು ತಂಡ
Basavaraj Yaraganavi
| Edited By: Rakesh Nayak Manchi|

Updated on:Jun 30, 2023 | 8:06 PM

Share

ಶಿವಮೊಗ್ಗ: ಗೋವಿನ ಚರ್ಮ ಸಾಗಾಟ ತಡೆದ ವ್ಯಕ್ತಿಯೊಬ್ಬನ ಮೇಲೆ ಗುಂಪೊಂದು ಪೊಲೀಸ್ ಠಾಣೆ ಎದುರೇ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ (Shikaripur) ನಡೆದಿದೆ. ಅಕ್ರಮವಾಗಿ ಗೋವುಗಳ ಚರ್ಮ ಸಾಗಿಸುತ್ತಿದ್ದ ವಿಚಾರ ತಿಳಿದ ಗುಂಪೊಂದು ಅದನ್ನು ತಡೆದು ಪೊಲೀಸ್ ಠಾಣೆಗೆ ಒಪ್ಪಿಸಿದೆ. ಈ ವಿಚಾರವಾಗಿ ಯುವಕರ ಮತ್ತೊಂದು ತಂಡ ಪೊಲೀಸರ ಎದುರೇ ಹಲ್ಲೆ ನಡೆಸಿದೆ.

ಬಕ್ರಿದ್ ಹಬ್ಬದ ಪ್ರಯುಕ್ತ ಗೋವನ್ನು ಹತ್ಯೆ ಮಾಡಿ ಅದರ ಚರ್ಮವನ್ನು ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದ ಗುಂಪೊಂದು ಅದನ್ನು ತಡೆದು ಶಿಕಾರಿಪುರ ಠಾಣಾ ಪೊಲೀಸರ ವಶಕ್ಕೆ ನೀಡಿದೆ. ಈ ವಿಚಾರ ತಿಳಿಯುತ್ತಿದ್ದಂತೆ ದೊಡ್ಡ ಸಂಖ್ಯೆಯ ಗುಂಪೊಂದು ಪೊಲೀಸ್ ಠಾಣೆ ಎದುರು ಜಮಾಯಿಸಿ ಅಕ್ರಮ ಸಾಗಾಟ ತಡೆದ ಗುಂಪಿನ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾದ ಹಿನ್ನೆಲೆ ಪೊಲೀಸರು ಗುಂಪನ್ನು ಚದುರಿಸಿದ್ದಾರೆ.

ಇದನ್ನೂ ಓದಿ: ಹೈಟೆಕ್ ಸ್ಪಾ ಕೇಂದ್ರಗಳಲ್ಲಿ ವೇಶ್ಯಾವಾಟಿಕೆ! ಎತ್ತ ಸಾಗುತ್ತಿದೆ ಸಾಂಸ್ಕೃತಿಕ ನಗರಿ ಶಿವಮೊಗ್ಗ?

ಕೆಲವು ದಿನಗಳ ಹಿಂದೆಯಷ್ಟೇ, ಜಿಲ್ಲೆಯಲ್ಲಿ ಒಂದೇ ದಿನ ಎರಡು ಕಡೆಗಳಲ್ಲಿ ಎರಡು ಗುಂಪುಗಳ ನಡುವೆ ಜಗಳ ನಡೆದು ಮೂವರು ಗಾಯಗೊಂಡಿದ್ದರು. ಶಿವಮೊಗ್ಗ ನಗರದ ಗೋಪಾಳದ ದ್ರೌಪದಮ್ಮ ಸರ್ಕಲ್​ನಲ್ಲಿ ನಡೆದ ಘಟನೆಯಲ್ಲಿ, ಮಾತನಾಡುವ ನೆಪದಲ್ಲಿ ವ್ಯಕ್ತಿಯೊಬ್ಬನನ್ನು ಕರೆದು ಹಲ್ಲೆ ಮಾಡಲಾಗಿತ್ತು. ಈ ವೇಳೆ ಎರಡು ಗುಂಪುಗಳ ನಡುವೆ ಪರಸ್ಪರ ಮಾತಿನ ಚಕಮಕಿ ನಡೆದಿದೆ. ನಂತರ ಬೈಕ್‌ನಲ್ಲಿ ವಾಪಸಾಗಲು ಮುಂದಾದ ವ್ಯಕ್ತಿಗೆ ಭರ್ಜಿಯಿಂದ ಚುಚ್ಚಲಾಗಿತ್ತು.

ಗೋಪಾಳದ ವಿನಾಯಕ ಸರ್ಕಲ್​ನಲ್ಲಿ ಗೂಡ್ಸ್ ಆಟೋಗೆ ಬೈಕ್ ತಾಗಿದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಇಬ್ಬರ ಮೇಲೆ ಹಲ್ಲೆ ನಡೆಸಲಾಗಿತ್ತು. ಎರಡು ಪ್ರಕರಣಗಳಲ್ಲಿ ಗಾಯಗೊಂಡ ಮೂವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:02 pm, Fri, 30 June 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ