AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಗೋವಿನ ಚರ್ಮ ಸಾಗಾಟ ತಡೆದಿದ್ದಕ್ಕೆ ಶಿಕಾರಿಪುರ ಪೊಲೀಸ್ ಠಾಣೆ ಎದುರೇ ವ್ಯಕ್ತಿ ಮೇಲೆ ಹಲ್ಲೆ

ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ಎರಡು ಗುಂಪುಗಳ ನಡುವೆ ಜಗಳ ನಡೆದ ಬೆನ್ನಲ್ಲೇ ಮತ್ತೊಂದು ಪ್ರಕರಣ ನಡೆದಿದೆ. ಗೋವಿನ ಚರ್ಮ ಸಾಗಾಟ ತಡೆದ ವ್ಯಕ್ತಿಯೊಬ್ಬನ ಮೇಲೆ ಯುವಕರ ತಂಡವೊಂದು ಶಿಕಾರಿಪುರ ಪೊಲೀಸ್ ಠಾಣೆಯ ಎದುರೇ ಹಲ್ಲೆ ನಡೆಸಿದೆ.

ಶಿವಮೊಗ್ಗ: ಗೋವಿನ ಚರ್ಮ ಸಾಗಾಟ ತಡೆದಿದ್ದಕ್ಕೆ ಶಿಕಾರಿಪುರ ಪೊಲೀಸ್ ಠಾಣೆ ಎದುರೇ ವ್ಯಕ್ತಿ ಮೇಲೆ ಹಲ್ಲೆ
ಶಿವಮೊಗ್ಗದಲ್ಲಿ ಗೋವಿನ ಚರ್ಮ ಸಾಗಾಟ ತಡೆದ ಗುಂಪಿನ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿದ ಮತ್ತೊಂದು ತಂಡ
Basavaraj Yaraganavi
| Updated By: Rakesh Nayak Manchi|

Updated on:Jun 30, 2023 | 8:06 PM

Share

ಶಿವಮೊಗ್ಗ: ಗೋವಿನ ಚರ್ಮ ಸಾಗಾಟ ತಡೆದ ವ್ಯಕ್ತಿಯೊಬ್ಬನ ಮೇಲೆ ಗುಂಪೊಂದು ಪೊಲೀಸ್ ಠಾಣೆ ಎದುರೇ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ (Shikaripur) ನಡೆದಿದೆ. ಅಕ್ರಮವಾಗಿ ಗೋವುಗಳ ಚರ್ಮ ಸಾಗಿಸುತ್ತಿದ್ದ ವಿಚಾರ ತಿಳಿದ ಗುಂಪೊಂದು ಅದನ್ನು ತಡೆದು ಪೊಲೀಸ್ ಠಾಣೆಗೆ ಒಪ್ಪಿಸಿದೆ. ಈ ವಿಚಾರವಾಗಿ ಯುವಕರ ಮತ್ತೊಂದು ತಂಡ ಪೊಲೀಸರ ಎದುರೇ ಹಲ್ಲೆ ನಡೆಸಿದೆ.

ಬಕ್ರಿದ್ ಹಬ್ಬದ ಪ್ರಯುಕ್ತ ಗೋವನ್ನು ಹತ್ಯೆ ಮಾಡಿ ಅದರ ಚರ್ಮವನ್ನು ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದ ಗುಂಪೊಂದು ಅದನ್ನು ತಡೆದು ಶಿಕಾರಿಪುರ ಠಾಣಾ ಪೊಲೀಸರ ವಶಕ್ಕೆ ನೀಡಿದೆ. ಈ ವಿಚಾರ ತಿಳಿಯುತ್ತಿದ್ದಂತೆ ದೊಡ್ಡ ಸಂಖ್ಯೆಯ ಗುಂಪೊಂದು ಪೊಲೀಸ್ ಠಾಣೆ ಎದುರು ಜಮಾಯಿಸಿ ಅಕ್ರಮ ಸಾಗಾಟ ತಡೆದ ಗುಂಪಿನ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾದ ಹಿನ್ನೆಲೆ ಪೊಲೀಸರು ಗುಂಪನ್ನು ಚದುರಿಸಿದ್ದಾರೆ.

ಇದನ್ನೂ ಓದಿ: ಹೈಟೆಕ್ ಸ್ಪಾ ಕೇಂದ್ರಗಳಲ್ಲಿ ವೇಶ್ಯಾವಾಟಿಕೆ! ಎತ್ತ ಸಾಗುತ್ತಿದೆ ಸಾಂಸ್ಕೃತಿಕ ನಗರಿ ಶಿವಮೊಗ್ಗ?

ಕೆಲವು ದಿನಗಳ ಹಿಂದೆಯಷ್ಟೇ, ಜಿಲ್ಲೆಯಲ್ಲಿ ಒಂದೇ ದಿನ ಎರಡು ಕಡೆಗಳಲ್ಲಿ ಎರಡು ಗುಂಪುಗಳ ನಡುವೆ ಜಗಳ ನಡೆದು ಮೂವರು ಗಾಯಗೊಂಡಿದ್ದರು. ಶಿವಮೊಗ್ಗ ನಗರದ ಗೋಪಾಳದ ದ್ರೌಪದಮ್ಮ ಸರ್ಕಲ್​ನಲ್ಲಿ ನಡೆದ ಘಟನೆಯಲ್ಲಿ, ಮಾತನಾಡುವ ನೆಪದಲ್ಲಿ ವ್ಯಕ್ತಿಯೊಬ್ಬನನ್ನು ಕರೆದು ಹಲ್ಲೆ ಮಾಡಲಾಗಿತ್ತು. ಈ ವೇಳೆ ಎರಡು ಗುಂಪುಗಳ ನಡುವೆ ಪರಸ್ಪರ ಮಾತಿನ ಚಕಮಕಿ ನಡೆದಿದೆ. ನಂತರ ಬೈಕ್‌ನಲ್ಲಿ ವಾಪಸಾಗಲು ಮುಂದಾದ ವ್ಯಕ್ತಿಗೆ ಭರ್ಜಿಯಿಂದ ಚುಚ್ಚಲಾಗಿತ್ತು.

ಗೋಪಾಳದ ವಿನಾಯಕ ಸರ್ಕಲ್​ನಲ್ಲಿ ಗೂಡ್ಸ್ ಆಟೋಗೆ ಬೈಕ್ ತಾಗಿದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಇಬ್ಬರ ಮೇಲೆ ಹಲ್ಲೆ ನಡೆಸಲಾಗಿತ್ತು. ಎರಡು ಪ್ರಕರಣಗಳಲ್ಲಿ ಗಾಯಗೊಂಡ ಮೂವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:02 pm, Fri, 30 June 23

ಸಾಂಪ್ರದಾಯಿಕ ಡ್ರೆಸ್ ತೊಟ್ಟು ಓಣಂ ಹಬ್ಬದೂಟ ಮಾಡಿದ ಮುದ್ದು ನಾಯಿ
ಸಾಂಪ್ರದಾಯಿಕ ಡ್ರೆಸ್ ತೊಟ್ಟು ಓಣಂ ಹಬ್ಬದೂಟ ಮಾಡಿದ ಮುದ್ದು ನಾಯಿ
ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ಗಣೇಶ ವಿಸರ್ಜನೆ ವೇಳೆ DJ ಬಂದ್ ಮಾಡಿಸಿದ ಪೊಲೀಸರು, ಗ್ರಾಮಸ್ಥರು ಮಾಡಿದ್ದೇನು
ಗಣೇಶ ವಿಸರ್ಜನೆ ವೇಳೆ DJ ಬಂದ್ ಮಾಡಿಸಿದ ಪೊಲೀಸರು, ಗ್ರಾಮಸ್ಥರು ಮಾಡಿದ್ದೇನು
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ