AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಿಮೆ ಬೆಲೆಗೆ ತರಕಾರಿ ಕೊಟ್ಟಿಲ್ಲ ಎಂದು ಮಂಡಿ ಮಾಲೀಕನ ಮೇಲೆ ಹಲ್ಲೆ; 1.25 ಲಕ್ಷ ರೂಪಾಯಿ ದೋಚಿ ಪರಾರಿ

ಯಶವಂತಪುರ ವ್ಯಾಪಾರಿ ಚಂದ್ರಶೇಖರ್ ಸೇರಿದಂತೆ 6ಜನರ ತಂಡ ಈ ಕೃತ್ಯ ಎಸಗಿದ್ದು, ಹಲ್ಲೆ ಬಳಿಕ 1.25 ಲಕ್ಷ ರೂಪಾಯಿ ಹಣ ದೋಚಿದ್ದಾರೆ. ಸದ್ಯ ಮಾದನಾಯಕನಹಳ್ಳಿ ಪೋಲಿಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕಡಿಮೆ ಬೆಲೆಗೆ ತರಕಾರಿ ಕೊಟ್ಟಿಲ್ಲ ಎಂದು ಮಂಡಿ ಮಾಲೀಕನ ಮೇಲೆ ಹಲ್ಲೆ; 1.25 ಲಕ್ಷ ರೂಪಾಯಿ ದೋಚಿ ಪರಾರಿ
ಮಾದನಾಯಕನಹಳ್ಳಿ ಪೋಲಿಸ್ ಠಾಣೆ
TV9 Web
| Updated By: preethi shettigar|

Updated on:Jul 27, 2021 | 10:00 AM

Share

ಬೆಂಗಳೂರು: ಹರಾಜು ವೇಳೆ ಕಡಿಮೆ ಬೆಲೆಗೆ ತರಕಾರಿ ಕೊಟ್ಟಿಲ್ಲವೆಂದು ಮಂಡಿ ಮಾಲಿಕನ ಮೇಲೆ ವ್ಯಾಪಾರಿ ತಂಡವೊಂದು ಹಲ್ಲೆ ಮಾಡಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಎಪಿಎಂಸಿ (APMC) ಮಾರುಕಟ್ಟೆಯಲ್ಲಿ ನಡೆದಿದೆ. ಮಂಡಿ ಮಾಲಿಕ ಹನುಮಂತರಾಯಪ್ಪಗೆ ಸಣ್ಣಪುಟ್ಟ ಗಾಯವಾಗಿದೆ. ಯಶವಂತಪುರ ವ್ಯಾಪಾರಿ ಚಂದ್ರಶೇಖರ್ ಸೇರಿದಂತೆ 6ಜನರ ತಂಡ ಈ ಕೃತ್ಯ ಎಸಗಿದ್ದು, ಹಲ್ಲೆ ಬಳಿಕ 1.25 ಲಕ್ಷ ರೂಪಾಯಿ ಹಣ ದೋಚಿದ್ದಾರೆ. ಸದ್ಯ ಮಾದನಾಯಕನಹಳ್ಳಿ ಪೋಲಿಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಹಸು ಮೇಯಿಸುತ್ತಿದ್ದ ಮಹಿಳೆ ಕಿವಿ ಕತ್ತರಿಸಿ ಓಲೆ ಕಳ್ಳತನ ಹಸು ಮೇಯಿಸುತ್ತಿದ್ದ ಒಂಟಿ ಮಹಿಳೆ ಕಿವಿ ಕತ್ತರಿಸಿ ಓಲೆ ಕಳ್ಳತನ ಮಾಡಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹೊನ್ನಸಂದ್ರದಲ್ಲಿ ನಡೆದಿದೆ. ಕಿವಿ ಕತ್ತರಿಸಿ 6 ಗ್ರಾಂನ ಓಲೆಯೊಂದಿಗೆ ದುಷ್ಕರ್ಮಿ ಪರಾರಿಯಾಗಿದ್ದಾನೆ. 4 ದಿನದ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಗಾಯಾಳು ಸಿದ್ದಗಂಗಮ್ಮ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಮಾದನಾಯಕನಹಳ್ಳಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಮಾದಕ ಸರಬರಾಜುಗಾರರ ವಿರುದ್ಧ ಸಿಸಿಬಿ ಪೊಲೀಸರ ಕಾರ್ಯಾಚರಣೆ ಮಾದಕವಸ್ತು ಪೂರೈಕೆದಾರರ ವಿರುದ್ಧ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಬೆಂಗಳೂರಿನ ರಾಮಮೂರ್ತಿನಗರ ಹಾಗೂ ಬಾಗಲೂರು ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ವಿದೇಶಿ ಪ್ರಜೆಗಳ ಸಹಿತ 6 ಜನರನ್ನು ಸೆರೆ ಹಿಡಿದಿದ್ದಾರೆ. ಪ್ರತ್ಯೇಕ ಪ್ರಕರಣದಲ್ಲಿ 6 ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 1.5 ಕೋಟಿ ರೂಪಾಯಿ ಮೌಲ್ಯದ ಕೊಕೇನ್, ಎಕ್ಸ್ಟಸಿ ಪಿಲ್ಸ್, ಯಾಬಾ, ಎಲ್​ಸಿಡಿ ಮತ್ತು ಕೃತ್ಯಕ್ಕೆ ಬಳಸಲಾಗಿದ್ದ ಕಾರು, ಬೈಕ್ ವಶಪಡಿಸಿಕೊಂಡಿದ್ದಾರೆ.

police arrest

ಮಾದಕ ವಸ್ತು

ಮನೆಯ ಬಾಗಿಲು ಮುರಿದು 1.21 ಲಕ್ಷ ರೂಪಾಯಿ ಕಳ್ಳತನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ಅರಿಶಿನಕುಂಟೆ ಬಳಿಯ ಆದರ್ಶ ನಗರದಲ್ಲಿ ಮನೆಯ ಬಾಗಿಲು ಮುರಿದು 1.21 ಲಕ್ಷ ರೂಪಾಯಿ ಕಳ್ಳತನ ಮಾಡಿದ್ದಾರೆ. ಯಂಟಗಾನಹಳ್ಳಿಯಲ್ಲಿರುವ ಅತ್ತೆ ನಂಜಮ್ಮ ಮನೆಗೆ ತೆರಳಿದ್ದಾಗ ಅನಂತರಾಮು ಮನೆಯಲ್ಲಿದ್ದ ಹಣವನ್ನು ಕಳ್ಳರು ಕದ್ದೊಯ್ದಿದ್ದಾರೆ. ಸದ್ಯ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಯುವತಿ ವಿಚಾರವಾಗಿ ನಡು ರಸ್ತೆಯಲ್ಲೇ ಸ್ನೇಹಿತರ ನಡುವೆ ಮಾರಾಮಾರಿ; 8 ಜನರ ಗುಂಪಿಂದ ಯುವಕನ ಮೇಲೆ ಹಲ್ಲೆ

ಯುವತಿಯನ್ನು ಚುಡಾಯಿಸಿದ ಆರೋಪ: ಪೆಟ್ರೋಲ್​ ತುಂಬಿಸುತ್ತಿದ್ದ ಯುವಕನಿಗೆ ಹಾಲಿನ ಕ್ಯಾನ್​ನಿಂದ ಹೊಡೆದು ಮಾರಣಾಂತಿಕ ಹಲ್ಲೆ

Published On - 8:37 am, Tue, 27 July 21

VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್