ನಡುರಸ್ತೆಯಲ್ಲಿ ಕಬ್ಬಿಣದ ಸಲಾಕೆಯಿಂದ 15 ಬಾರಿ ಹೊಡೆದು ಪ್ರೇಯಸಿಯ ಕೊಂದ ವ್ಯಕ್ತಿ

ಹಾಡಹಗಲೇ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯನ್ನು ಕೊಲೆ ಮಾಡಿರುವ ಘಟನೆ ಮುಂಬೈನಲ್ಲಿ ವರದಿಯಾಗಿದೆ. ನಡುರಸ್ತೆಯಲ್ಲಿ ವ್ಯಕ್ತಿಯೊಬ್ಬ ಕಬ್ಬಿಣದ ಸಲಾಕೆಯಿಂದ ಪ್ರೇಯಸಿಗೆ 15 ಬಾರಿ ಹೊಡೆದು ಹತ್ಯೆ ಮಾಡಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ನಡುರಸ್ತೆಯಲ್ಲಿ ಕಬ್ಬಿಣದ ಸಲಾಕೆಯಿಂದ 15 ಬಾರಿ ಹೊಡೆದು ಪ್ರೇಯಸಿಯ ಕೊಂದ ವ್ಯಕ್ತಿ
Image Credit source: Mid Day
Follow us
|

Updated on: Jun 18, 2024 | 3:17 PM

ಮುಂಬೈನ ರಸ್ತೆಯಲ್ಲಿ ಬರ್ಬರ ಹತ್ಯೆ ನಡೆದಿದೆ, ಹಾಡಹಗಲೇ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯನ್ನು ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ನಡುರಸ್ತೆಯಲ್ಲಿ ವ್ಯಕ್ತಿಯೊಬ್ಬ ಕಬ್ಬಿಣದ ಸಲಾಕೆಯಿಂದ ಪ್ರೇಯಸಿಗೆ 15 ಬಾರಿ ಹೊಡೆದು ಹತ್ಯೆ ಮಾಡಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮುಂಬೈನ ವಸಾಯಿಯಲ್ಲಿ ಘಟನೆ ನಡೆದಿದೆ. ಯುವತಿಯ ಎದೆ, ತಲೆಯ ಮೇಲೆ ಮನಬಂದಂತೆ ಕಬ್ಬಿಣದ ಸಲಾಕೆಯಿಂದ ಥಳಿಸಿದ್ದಾನೆ.

ರಸ್ತೆ ಮಧ್ಯದಲ್ಲಿ ಆಕೆಯ ಶವ ಬಿದ್ದಿರುವುದನ್ನು ವಿಡಿಯೋದಲ್ಲಿ ಕಾಣಬಹುದು, ವರದಿಯ ಪ್ರಕಾರ ಆತ ಆಕೆಯ ಗೆಳೆಯನಾಗಿದ್ದು, ಆಕೆಯನ್ನು ರಸ್ತೆಗೆ ತಳ್ಳಿ ಮನಬಂದಂತೆ ಥಳಿಸಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮತ್ತಷ್ಟು ಓದಿ: ದೆಹಲಿಯಲ್ಲಿ ಮರ್ಯಾದಾ ಹತ್ಯೆ; ಬೇರೆ ಜಾತಿಯವನನ್ನು ಮದುವೆಯಾಗಿದ್ದಕ್ಕೆ ಮಗಳನ್ನೇ ಕೊಂದ ಅಪ್ಪ

ಆತ ಯಾಕೆ ಹೀಗೆ ಮಾಡಿದೆ ಎಂದು ಕೂಗುತ್ತಾ ಆಕೆಗೆ ಥಳಿಸುತ್ತಿದ್ದ, ನಂತರ ಆಕೆ ಪ್ರಜ್ಞೆ ಇಲ್ಲದೆ ಅಲ್ಲೇ ಬಿದ್ದಿದ್ದಳು, ಇಬ್ಬರ ಗುರುತು ಇನ್ನೂ ಸಿಕ್ಕಿ ಪತ್ತೆಯಾಗಿಲ್ಲ. ಈ ಘಟನೆಯನ್ನು ರಸ್ತೆಯಲ್ಲಿ ಹೋಗುವವವರು ವಿಡಿಯೋ ಮಾಡಿದ್ದಾರೆ.

ಯಾರೂ ಕೂಡ ಭಯದಿಂದ ಆಕೆಯ ರಕ್ಷಣೆಗೆ ಬರಲಿಲ್ಲ, ರಕ್ತದ ಮಡುವಿನಲ್ಲಿ ಆಕೆ ನಿತ್ರಾಣಳಾಗಿ ಬಿದ್ದಿದ್ದು, ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಕೂಡ ಸ್ಥಳಕ್ಕೆ ಬಂದಿರಲಿಲ್ಲ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ: ವಿಡಿಯೋ ನೋಡಿ
ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ: ವಿಡಿಯೋ ನೋಡಿ
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು