AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಜನನಿಬಿಡ ರಸ್ತೆಯಲ್ಲಿ , ಕತ್ತಿಯಿಂದ ಹಲ್ಲೆ ನಡೆಸಿದ ಬಾಲಕ, ವ್ಯಕ್ತಿ ಸಾವು

ಜನರಿಂದ ತುಂಬಿ ತುಳುಕುತ್ತಿರುವ ರಸ್ತೆಯೊಂದರಲ್ಲಿ ಬಾಲಕನೊಬ್ಬ ವ್ಯಕ್ತಿ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದು, ವ್ಯಕ್ತಿ ಕೂಡಲೇ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಆ ಘಟನೆಯನ್ನು ಕೆಲವರು ವಿಡಿಯೋ ಮಾಡಿಕೊಂಡಿದ್ದಾರೆ, ಕೆಲವರು ನೋಡುತ್ತಾ ನಿಂತಿದ್ದಾರೆ ಆದರೆ ವ್ಯಕ್ತಿಯನ್ನು ಬದುಕಿಸುವ ಕೆಲಸವನ್ನು ಯಾರೂ ಮಾಡಿಲ್ಲ ಎಂಬುದೇ ವಿಪರ್ಯಾಸ.

ಮುಂಬೈ: ಜನನಿಬಿಡ ರಸ್ತೆಯಲ್ಲಿ , ಕತ್ತಿಯಿಂದ ಹಲ್ಲೆ ನಡೆಸಿದ ಬಾಲಕ, ವ್ಯಕ್ತಿ ಸಾವು
ಸಾವು
ನಯನಾ ರಾಜೀವ್
|

Updated on: Aug 13, 2024 | 2:37 PM

Share

ಮುಂಬೈನ ಜನನಿಬಿಡ ರಸ್ತೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಕತ್ತಿಯಿಂದ ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮುಂಬೈನ ಶಿವಾಜಿನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವ್ಯಕ್ತಿಯೊಬ್ಬರು ರಕ್ತದ ಮಡುವಿನಲ್ಲಿ ಬಿದ್ದಿದ್ದರು, ಆದರೂ ಬಿಡದ ವ್ಯಕ್ತಿಗೆ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ. ತುಂಬಾ ಜನರು ಅಲ್ಲಿ ನಿಂತು ಘಟನೆಯನ್ನು ನೋಡಿ ವಿಡಿಯೋ ಮಾಡುತ್ತಿದ್ದರೂ ಕೂಡ, ಯಾರೂ ವ್ಯಕ್ತಿಯನ್ನು ಉಳಿಸುವ ಕೆಲಸ ಮಾಡಿಲ್ಲ. ಮೃತರನ್ನು ಅಹ್ಮದ್ ಪಠಾಣ್ ಎಂದು ಗುರುತಿಸಲಾಗಿದೆ. ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಇದುವರೆಗೆ ಮಹಿಳೆ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಮತ್ತೊಂದು ಘಟನೆ

ನಡುರಸ್ತೆಯಲ್ಲಿ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಹಲ್ಲೆ ಮಾಡಿದ ಪತಿ ಬೇರೊಬ್ಬನ ಜೊತೆ ಅನೈತಿಕ ಸಂಬಂಧದ ಅನುಮಾನದ ಮೇಲೆ ನಡುರಸ್ತೆಯಲ್ಲೇ ಪತ್ನಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆಯನ್ನು ಮಾಡಿದ್ದಾನೆ. ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಪತ್ನಿಗೆ ಮಚ್ಚಿನಿಂದ ಹೊಡೆದಿದ್ದಾನೆ. ಬೆಂಗಳೂರಿನ ಜೀವನ್ ಭೀಮಾ ನಗರದ ವಿಂಡ್ ಟನಲ್ ರಸ್ತೆಯಲ್ಲಿ  ಈ ಘಟನೆ ನಡೆದಿದೆ. ಶೇಕ್ ಮುಜೀಬ್‌ ಎನ್ನುವಾತ ನೈಗರ್ (28) ಎನ್ನುವಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಆದ್ರೆ, ಹೆಂಡ್ತಿ ಬೇರೊಬ್ಬನ ಜತೆ ಸಂಬಂಧ ಹೊಂದಿದ್ದಾಳೆಂದು ಆಕೆಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ.

ಮತ್ತಷ್ಟು ಓದಿ: ಕಲಬುರಗಿ: ರಸ್ತೆ ಮಧ್ಯೆ ಲಾರಿ ನಿಲ್ಲಿಸಿದ್ದನ್ನು ಪ್ರಶ್ನಿಸಿದಕ್ಕೆ ಯುವಕರ ಮೇಲೆ ಹಲ್ಲೆ

ನೈಗರ್​ಳ ತಲೆಗೆ ಮಚ್ಚಿನ ಏಟು ಬಿದ್ದಿದ್ದು, ಸದ್ಯ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಇನ್ನು ಶೇಕ್ ಮುಜೀಬ್ ನನ್ನು ಜೆ ಬಿ ನಗರ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ನೈಗರ್​ಳನ್ನ ಪ್ರೀತಿಸಿ ಮದುವೆಯಾಗಿದ್ದ ಹೊಸಕೋಟೆ ಮೂಲದ ಶೇಕ್ ಮುಜೀಬ್, ಆರ್ ಟಿ ನಗರದಲ್ಲಿ ನೆಲೆಸಿದ್ದ. ನೈಗರ್, ಮುರುಗೇಶ್ ಪಾಳ್ಯದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ, ಆರೋಪಿ ಶೇಕ್ ಮುಜೀಬ್ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಯುವಕನ ಜೊತೆ ಸಂಬಂಧ ಇದೆ ಎಂದು ಅನುಮಾನ ಬಂದಿದೆ.

ಈ ಹಿನ್ನೆಲೆಯಲ್ಲಿ ನೈಗರ್​ಳನ್ನ ಕೆಲಸಕ್ಕೆ ಹೋಗುವುದನ್ನ ಬಿಡಿಸಬೇಕು ಎಂದು ಪ್ಲ್ಯಾನ್ ಮಾಡಿದ್ದ. ಹೀಗಾಗಿ ಆಕೆಯ ಕೈ ಬೆರಳು ಕಟ್ ಮಾಡಬೇಕೆಂದುಕೊಂಡಿದ್ದ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ