AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡ್ತಿ ಆರೋಗ್ಯ ವಿಚಾರಿಸಲು ಬಂದಿದ್ದ ಯುವತಿ ಮೇಲೆ ಬಿತ್ತು ಕಣ್ಣು, ಹೊಡೆದು ಕೊಂದ ಪೋಷಕರು

ಕಳೆದ ಸುಮಾರು ಐದು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಉಸ್ಮಾನ್ ಎಂಬಾತ 2ನೇ ಮದುವೆಗೆ ಮುಂದಾಗಿದ್ದಾನೆ. ಪತ್ನಿ ಆರೋಗ್ಯ ವಿಚಾರಿಸಲು ಬಂದಿದ್ದ ಸಂಬಂಧಿ ಯುವತಿ ಮೇಲೆ ಕಣ್ಣಾಕ್ಕಿದ್ದ ಉಸ್ಮಾನ್, ಹುಡುಗಿಯ ಮನೆಗೆ ಹೋಗಿ ಮಗಳನ್ನು ಕೊಟ್ಟು ಮದುವೆ ಮಾಡಿ ಎಂದು ಕೇಳಿದ್ದಾನೆ. ಇದರಿಂದ ಆಕ್ರೋಶಗೊಂಡ ಯುವತಿ ಮನೆಯವರು ಉಸ್ಮಾನನನ್ನ ಅಟ್ಟಾಡಿಸಿಕೊಂಡು ಹೊಡೆದು ಕೊಂದಿದ್ದಾರೆ.

ಹೆಂಡ್ತಿ ಆರೋಗ್ಯ ವಿಚಾರಿಸಲು ಬಂದಿದ್ದ ಯುವತಿ ಮೇಲೆ ಬಿತ್ತು ಕಣ್ಣು, ಹೊಡೆದು ಕೊಂದ ಪೋಷಕರು
Usman
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Jan 05, 2025 | 12:39 PM

Share

ಕೋಲಾರ, (ಜನವರಿ 05): ವಿವಾಹಿತ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯ ಮನೆಗೆ ಹೋಗಿ ಹಿಂತಿರುಗುತ್ತಿದ್ದಾಗ ಆಕೆಯ ಕುಟುಂಬಸ್ಥರು ಹಾಗೂ ಸ್ಥಳೀಯರು ಅಟ್ಟಾಡಿಸಿ ಹೊಡೆದು ಹತ್ಯೆಗೈದ ಘಟನೆ ಕೋಲಾರದ ನೂರ್ ನಗರದಲ್ಲಿ ಶನಿವಾರ ಮಧ್ಯರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಉಸ್ಮಾನ್ ಎಂದು ಗುರುತಿಸಲಾಗಿದೆ. ಆತ ತನ್ನ ಪ್ರೇಯಸಿ ಮನೆಗೆ ಹೋಗಿ ಬರುವಾಗ ಆಕೆಯ ಕುಟುಂಬಸ್ಥರು ಹಾಗೂ ಸ್ಥಳೀಯರು ಅಟ್ಟಾಡಿಸಿ ಹೊಡೆದಿದ್ದಾರೆ. ಬಳಿಕ ಪೊಲೀಸರು ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ.

ಉಸ್ಮಾನ್ ಕಳೆದೆ ಐದು ವರ್ಷಗಳ ಹಿಂದೆ ಜಬೀನ್ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಆಕೆಗೆ ಕಿಡ್ನಿ ವಿಫಲವಾಗಿ ಅನಾರೋಗ್ಯದಿಂದ ಬಳಲುತ್ತಿದ್ದು, ಈ ವೇಳೆ ಆರೋಗ್ಯ ವಿಚಾರಿಸಲು ಬಂದಿದ್ದ ಜಬೀನಾ ಸಂಬಂಧಿ ಯುವತಿಯೊಂದಿಗೆ ಉಸ್ಮಾನ್‍ಗೆ ಪ್ರೀತಿಯಾಗಿದೆ. ಈ ವಿಷಯ ತಿಳಿದು ಆತನ ಪತ್ನಿ ಮಹಿಳಾ ಠಾಣೆಗೆ ದೂರು ನೀಡಿದ್ದಳು. ಬಳಿಕ ತನ್ನ ಪತಿಯಿಂದ ದೂರಾಗಿ ತವರು ಮನೆ ಸೇರಿದ್ದಳು.

ಇದನ್ನೂ ಓದಿ: ತಾಯಿಯನ್ನ ಕೊಂದು ಆತ್ಮಹತ್ಯೆಗೆ ಶರಣಾದ ಮಗ..!

ಹೀಗಿರುವಾಗ ಕಳೆದ ರಾತ್ರಿ ಉಸ್ಮಾನ್ ಯುವತಿ ಮನೆಗೆ ಹೋಗಿ ಅವರಿಗೆ ಅವಾಜ್ ಹಾಕಿದ್ದಾನಂತೆ. ಮಗಳನ್ನು ಮದುವೆ ಮಾಡಿಕೊಡಿ ಎಂದು ಹೇಳಿದ್ದಾನೆ. ಈ ವೇಳೆ ಒಂದಿಷ್ಟು ಜಗಳವಾಗಿದೆ. ಬಳಿಕ ಅಲ್ಲಿಂದ ಆತ ಹೊರಟಿದ್ದ ಉಸ್ಮಾನ್ ನನ್ನು ಹುಡುಗಿ ಕಡೆಯವರು ಹಿಂಬಾಲಿಸಿಕೊಂಡು ಹೋಗಿ ನೂರ್ ನಗರ ಸಮೀಪ ಹಿಡಿದು ಹಲ್ಲೆ ಮಾಡಿದ್ದಾರೆ. ಸ್ಥಳೀಯರು ಜಮಾಯಿಸುತ್ತಿದ್ದಂತೆ ಬಿಟ್ಟು ಹೋಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ, ಚಿಕಿತ್ಸೆ ಫಲಿಸದೆ ಉಸ್ಮಾನ್ ಮೃತಪಟ್ಟಿದ್ದಾನೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು