AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ‌ವಾಗಿ ಎಡಿಟ್ ಮಾಡಿದ್ದ ಫೋಟೋ ತೋರಿಸಿ ಗಣ್ಯರಿಗೆ ಬ್ಲ್ಯಾಕ್​ಮೇಲ್: ಕೋಳಿ ಫಾರ್ಮ್​ ಓನರ್​ ಅರೆಸ್ಟ್​​

ಬೆಂಗಳೂರು: ನಗರದ ಪ್ರತಿಷ್ಠಿತ ರಾಜಕಾರಣಿಗಳು, ಉದ್ಯಮಿಗಳು ಹಾಗೂ ಪ್ರೊಫೆಸರ್​ಗಳ ಫೋಟೋ ಮಾರ್ಫಿಂಗ್ ಮಾಡಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ವೈಟ್​ಫೀಲ್ಡ್​ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ವಿಶ್ವಾಸ್​ ಬಂಧಿತ ಆರೋಪಿ. ಆರೋಪಿ ವಿಶ್ವಾಸ್​ ನಗರದ ಹಲವು ಗಣ್ಯರು ತಮ್ಮ ಫೇಸ್​ಬುಕ್, WhatsApp, ಟ್ವಿಟರ್ ಹಾಗೂ ಇನ್​ಸ್ಟಾಗ್ರಾಮ್ ಖಾತೆಗಳಲ್ಲಿ ಅಪ್​ಲೋಡ್​ ಮಾಡ್ತಿದ್ದ ಫೋಟೋಗಳನ್ನು ಮಾರ್ಫಿಂಗ್ ಮಾಡುತ್ತಿದ್ದ. ಫೋಟೋಗಳನ್ನು ಅಶ್ಲೀಲ‌ವಾಗಿ ಎಡಿಟ್ ಮಾಡಿ ಬಳಿಕ ಗಣ್ಯರಿಗೆ ಅವುಗಳನ್ನು ತೋರಿಸಿ ಹಣಕ್ಕಾಗಿ ಡಿಮ್ಯಾಂಡ್​ ಇಡುತ್ತಿದ್ದನಂತೆ. ದುಡ್ಡು ಕೊಡದಿದ್ದರೆ ಎಡಿಟೆಡ್​ ಫೋಟೋವನ್ನು ಸಾಮಾಜಿಕ […]

ಅಶ್ಲೀಲ‌ವಾಗಿ ಎಡಿಟ್ ಮಾಡಿದ್ದ ಫೋಟೋ ತೋರಿಸಿ ಗಣ್ಯರಿಗೆ ಬ್ಲ್ಯಾಕ್​ಮೇಲ್: ಕೋಳಿ ಫಾರ್ಮ್​ ಓನರ್​ ಅರೆಸ್ಟ್​​
Follow us
KUSHAL V
|

Updated on: Oct 10, 2020 | 6:13 PM

ಬೆಂಗಳೂರು: ನಗರದ ಪ್ರತಿಷ್ಠಿತ ರಾಜಕಾರಣಿಗಳು, ಉದ್ಯಮಿಗಳು ಹಾಗೂ ಪ್ರೊಫೆಸರ್​ಗಳ ಫೋಟೋ ಮಾರ್ಫಿಂಗ್ ಮಾಡಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ವೈಟ್​ಫೀಲ್ಡ್​ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ವಿಶ್ವಾಸ್​ ಬಂಧಿತ ಆರೋಪಿ. ಆರೋಪಿ ವಿಶ್ವಾಸ್​ ನಗರದ ಹಲವು ಗಣ್ಯರು ತಮ್ಮ ಫೇಸ್​ಬುಕ್, WhatsApp, ಟ್ವಿಟರ್ ಹಾಗೂ ಇನ್​ಸ್ಟಾಗ್ರಾಮ್ ಖಾತೆಗಳಲ್ಲಿ ಅಪ್​ಲೋಡ್​ ಮಾಡ್ತಿದ್ದ ಫೋಟೋಗಳನ್ನು ಮಾರ್ಫಿಂಗ್ ಮಾಡುತ್ತಿದ್ದ. ಫೋಟೋಗಳನ್ನು ಅಶ್ಲೀಲ‌ವಾಗಿ ಎಡಿಟ್ ಮಾಡಿ ಬಳಿಕ ಗಣ್ಯರಿಗೆ ಅವುಗಳನ್ನು ತೋರಿಸಿ ಹಣಕ್ಕಾಗಿ ಡಿಮ್ಯಾಂಡ್​ ಇಡುತ್ತಿದ್ದನಂತೆ. ದುಡ್ಡು ಕೊಡದಿದ್ದರೆ ಎಡಿಟೆಡ್​ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡೋದಾಗಿ ಬೆದರಿಕೆ ಸಹ ಒಡ್ಡುತ್ತಿದ್ದನಂತೆ. ಅಂದ ಹಾಗೆ, ಈ ಖದೀಮ ಡ್ಯಾಡಿ ಅಬೌವ್ 50 ಅನ್ನೋ WhatsApp ಗ್ರೂಪ್​ಗೆ ಎಂಟ್ರಿ ಕೊಟ್ಟು ಅಲ್ಲಿಂದ ಫೋಟೋ ಎಗರಿಸ್ತಿದ್ದ ಎಂದು ಹೇಳಲಾಗಿದೆ. ಐವತ್ತು ವರ್ಷಕ್ಕಿಂತ ಹೆಚ್ಚಿನ ವಯೋಮಾನದವರಿದ್ದ WhatsApp ಗ್ರೂಪ್​ನಲ್ಲಿ ಪ್ರತಿಷ್ಠಿತ ರಾಜಕಾರಣಿ, ಉದ್ಯಮಿಗಳು ಹಾಗೂ ಪ್ರೊಫೆಸರ್​ಗಳಿಗೆ ಈ ರೀತಿ ಬ್ಲ್ಯಾಕ್​ಮೇಲೆ ಮಾಡೋಕೆ ಮುಂದಾಗಿದ್ದ. ಅಂತೆಯೇ, ನಗರದ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದ ಪ್ರೊಫೆಸರ್ ಒಬ್ಬರ ಪೋಟೋ ಮಾರ್ಫಿಂಗ್ ಮಾಡಿ ಲಕ್ಷಾಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದನಂತೆ.

ವಿಶ್ವಾಸ್​ ಬೆದರಿಕೆ ಒಡ್ಡಿದ್ದ ಹಿನ್ನೆಲೆಯಲ್ಲಿ ಆತ ಹಾಗೂ ಆತನ ಗ್ಯಾಂಗ್​ ವಿರುದ್ಧ ಪ್ರೊಫೆಸರ್ ಒಬ್ಬರು ವೈಟ್​ಫೀಲ್ಡ್ ವಿಭಾಗದ CEN ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರ ಬೆನ್ನಲ್ಲೇ ಪೊಲೀಸರು ಆರೋಪಿ ವಿಶ್ವಾಸ್​ನನ್ನು ಬಂಧಿಸಿದ್ದಾರೆ. ಅರೋಪಿ ನಗರದ ಹೊರವಲಯದ ಚಿಕ್ಕಜಾಲದ ಸಮೀಪ ಕೋಳಿ ಫಾರಂ ಇಟ್ಟುಕೊಂಡಿದ್ದ ಎಂದು ಸಹ ತಿಳಿದುಬಂದಿದೆ. ಸದ್ಯ ಆರೋಪಿಗೆ ಖಾಕಿ ಪಡೆ ವಿಚಾರಣೆ ನಡೆಸುತ್ತಿದ್ದು ಆತನ ಸಹಚರರರ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ