AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ‌ವಾಗಿ ಎಡಿಟ್ ಮಾಡಿದ್ದ ಫೋಟೋ ತೋರಿಸಿ ಗಣ್ಯರಿಗೆ ಬ್ಲ್ಯಾಕ್​ಮೇಲ್: ಕೋಳಿ ಫಾರ್ಮ್​ ಓನರ್​ ಅರೆಸ್ಟ್​​

ಬೆಂಗಳೂರು: ನಗರದ ಪ್ರತಿಷ್ಠಿತ ರಾಜಕಾರಣಿಗಳು, ಉದ್ಯಮಿಗಳು ಹಾಗೂ ಪ್ರೊಫೆಸರ್​ಗಳ ಫೋಟೋ ಮಾರ್ಫಿಂಗ್ ಮಾಡಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ವೈಟ್​ಫೀಲ್ಡ್​ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ವಿಶ್ವಾಸ್​ ಬಂಧಿತ ಆರೋಪಿ. ಆರೋಪಿ ವಿಶ್ವಾಸ್​ ನಗರದ ಹಲವು ಗಣ್ಯರು ತಮ್ಮ ಫೇಸ್​ಬುಕ್, WhatsApp, ಟ್ವಿಟರ್ ಹಾಗೂ ಇನ್​ಸ್ಟಾಗ್ರಾಮ್ ಖಾತೆಗಳಲ್ಲಿ ಅಪ್​ಲೋಡ್​ ಮಾಡ್ತಿದ್ದ ಫೋಟೋಗಳನ್ನು ಮಾರ್ಫಿಂಗ್ ಮಾಡುತ್ತಿದ್ದ. ಫೋಟೋಗಳನ್ನು ಅಶ್ಲೀಲ‌ವಾಗಿ ಎಡಿಟ್ ಮಾಡಿ ಬಳಿಕ ಗಣ್ಯರಿಗೆ ಅವುಗಳನ್ನು ತೋರಿಸಿ ಹಣಕ್ಕಾಗಿ ಡಿಮ್ಯಾಂಡ್​ ಇಡುತ್ತಿದ್ದನಂತೆ. ದುಡ್ಡು ಕೊಡದಿದ್ದರೆ ಎಡಿಟೆಡ್​ ಫೋಟೋವನ್ನು ಸಾಮಾಜಿಕ […]

ಅಶ್ಲೀಲ‌ವಾಗಿ ಎಡಿಟ್ ಮಾಡಿದ್ದ ಫೋಟೋ ತೋರಿಸಿ ಗಣ್ಯರಿಗೆ ಬ್ಲ್ಯಾಕ್​ಮೇಲ್: ಕೋಳಿ ಫಾರ್ಮ್​ ಓನರ್​ ಅರೆಸ್ಟ್​​
KUSHAL V
|

Updated on: Oct 10, 2020 | 6:13 PM

Share

ಬೆಂಗಳೂರು: ನಗರದ ಪ್ರತಿಷ್ಠಿತ ರಾಜಕಾರಣಿಗಳು, ಉದ್ಯಮಿಗಳು ಹಾಗೂ ಪ್ರೊಫೆಸರ್​ಗಳ ಫೋಟೋ ಮಾರ್ಫಿಂಗ್ ಮಾಡಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ವೈಟ್​ಫೀಲ್ಡ್​ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ವಿಶ್ವಾಸ್​ ಬಂಧಿತ ಆರೋಪಿ. ಆರೋಪಿ ವಿಶ್ವಾಸ್​ ನಗರದ ಹಲವು ಗಣ್ಯರು ತಮ್ಮ ಫೇಸ್​ಬುಕ್, WhatsApp, ಟ್ವಿಟರ್ ಹಾಗೂ ಇನ್​ಸ್ಟಾಗ್ರಾಮ್ ಖಾತೆಗಳಲ್ಲಿ ಅಪ್​ಲೋಡ್​ ಮಾಡ್ತಿದ್ದ ಫೋಟೋಗಳನ್ನು ಮಾರ್ಫಿಂಗ್ ಮಾಡುತ್ತಿದ್ದ. ಫೋಟೋಗಳನ್ನು ಅಶ್ಲೀಲ‌ವಾಗಿ ಎಡಿಟ್ ಮಾಡಿ ಬಳಿಕ ಗಣ್ಯರಿಗೆ ಅವುಗಳನ್ನು ತೋರಿಸಿ ಹಣಕ್ಕಾಗಿ ಡಿಮ್ಯಾಂಡ್​ ಇಡುತ್ತಿದ್ದನಂತೆ. ದುಡ್ಡು ಕೊಡದಿದ್ದರೆ ಎಡಿಟೆಡ್​ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡೋದಾಗಿ ಬೆದರಿಕೆ ಸಹ ಒಡ್ಡುತ್ತಿದ್ದನಂತೆ. ಅಂದ ಹಾಗೆ, ಈ ಖದೀಮ ಡ್ಯಾಡಿ ಅಬೌವ್ 50 ಅನ್ನೋ WhatsApp ಗ್ರೂಪ್​ಗೆ ಎಂಟ್ರಿ ಕೊಟ್ಟು ಅಲ್ಲಿಂದ ಫೋಟೋ ಎಗರಿಸ್ತಿದ್ದ ಎಂದು ಹೇಳಲಾಗಿದೆ. ಐವತ್ತು ವರ್ಷಕ್ಕಿಂತ ಹೆಚ್ಚಿನ ವಯೋಮಾನದವರಿದ್ದ WhatsApp ಗ್ರೂಪ್​ನಲ್ಲಿ ಪ್ರತಿಷ್ಠಿತ ರಾಜಕಾರಣಿ, ಉದ್ಯಮಿಗಳು ಹಾಗೂ ಪ್ರೊಫೆಸರ್​ಗಳಿಗೆ ಈ ರೀತಿ ಬ್ಲ್ಯಾಕ್​ಮೇಲೆ ಮಾಡೋಕೆ ಮುಂದಾಗಿದ್ದ. ಅಂತೆಯೇ, ನಗರದ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದ ಪ್ರೊಫೆಸರ್ ಒಬ್ಬರ ಪೋಟೋ ಮಾರ್ಫಿಂಗ್ ಮಾಡಿ ಲಕ್ಷಾಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದನಂತೆ.

ವಿಶ್ವಾಸ್​ ಬೆದರಿಕೆ ಒಡ್ಡಿದ್ದ ಹಿನ್ನೆಲೆಯಲ್ಲಿ ಆತ ಹಾಗೂ ಆತನ ಗ್ಯಾಂಗ್​ ವಿರುದ್ಧ ಪ್ರೊಫೆಸರ್ ಒಬ್ಬರು ವೈಟ್​ಫೀಲ್ಡ್ ವಿಭಾಗದ CEN ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರ ಬೆನ್ನಲ್ಲೇ ಪೊಲೀಸರು ಆರೋಪಿ ವಿಶ್ವಾಸ್​ನನ್ನು ಬಂಧಿಸಿದ್ದಾರೆ. ಅರೋಪಿ ನಗರದ ಹೊರವಲಯದ ಚಿಕ್ಕಜಾಲದ ಸಮೀಪ ಕೋಳಿ ಫಾರಂ ಇಟ್ಟುಕೊಂಡಿದ್ದ ಎಂದು ಸಹ ತಿಳಿದುಬಂದಿದೆ. ಸದ್ಯ ಆರೋಪಿಗೆ ಖಾಕಿ ಪಡೆ ವಿಚಾರಣೆ ನಡೆಸುತ್ತಿದ್ದು ಆತನ ಸಹಚರರರ ಪತ್ತೆಗಾಗಿ ಬಲೆ ಬೀಸಿದ್ದಾರೆ.

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ