AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ‌ವಾಗಿ ಎಡಿಟ್ ಮಾಡಿದ್ದ ಫೋಟೋ ತೋರಿಸಿ ಗಣ್ಯರಿಗೆ ಬ್ಲ್ಯಾಕ್​ಮೇಲ್: ಕೋಳಿ ಫಾರ್ಮ್​ ಓನರ್​ ಅರೆಸ್ಟ್​​

ಬೆಂಗಳೂರು: ನಗರದ ಪ್ರತಿಷ್ಠಿತ ರಾಜಕಾರಣಿಗಳು, ಉದ್ಯಮಿಗಳು ಹಾಗೂ ಪ್ರೊಫೆಸರ್​ಗಳ ಫೋಟೋ ಮಾರ್ಫಿಂಗ್ ಮಾಡಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ವೈಟ್​ಫೀಲ್ಡ್​ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ವಿಶ್ವಾಸ್​ ಬಂಧಿತ ಆರೋಪಿ. ಆರೋಪಿ ವಿಶ್ವಾಸ್​ ನಗರದ ಹಲವು ಗಣ್ಯರು ತಮ್ಮ ಫೇಸ್​ಬುಕ್, WhatsApp, ಟ್ವಿಟರ್ ಹಾಗೂ ಇನ್​ಸ್ಟಾಗ್ರಾಮ್ ಖಾತೆಗಳಲ್ಲಿ ಅಪ್​ಲೋಡ್​ ಮಾಡ್ತಿದ್ದ ಫೋಟೋಗಳನ್ನು ಮಾರ್ಫಿಂಗ್ ಮಾಡುತ್ತಿದ್ದ. ಫೋಟೋಗಳನ್ನು ಅಶ್ಲೀಲ‌ವಾಗಿ ಎಡಿಟ್ ಮಾಡಿ ಬಳಿಕ ಗಣ್ಯರಿಗೆ ಅವುಗಳನ್ನು ತೋರಿಸಿ ಹಣಕ್ಕಾಗಿ ಡಿಮ್ಯಾಂಡ್​ ಇಡುತ್ತಿದ್ದನಂತೆ. ದುಡ್ಡು ಕೊಡದಿದ್ದರೆ ಎಡಿಟೆಡ್​ ಫೋಟೋವನ್ನು ಸಾಮಾಜಿಕ […]

ಅಶ್ಲೀಲ‌ವಾಗಿ ಎಡಿಟ್ ಮಾಡಿದ್ದ ಫೋಟೋ ತೋರಿಸಿ ಗಣ್ಯರಿಗೆ ಬ್ಲ್ಯಾಕ್​ಮೇಲ್: ಕೋಳಿ ಫಾರ್ಮ್​ ಓನರ್​ ಅರೆಸ್ಟ್​​
KUSHAL V
|

Updated on: Oct 10, 2020 | 6:13 PM

Share

ಬೆಂಗಳೂರು: ನಗರದ ಪ್ರತಿಷ್ಠಿತ ರಾಜಕಾರಣಿಗಳು, ಉದ್ಯಮಿಗಳು ಹಾಗೂ ಪ್ರೊಫೆಸರ್​ಗಳ ಫೋಟೋ ಮಾರ್ಫಿಂಗ್ ಮಾಡಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ವೈಟ್​ಫೀಲ್ಡ್​ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ವಿಶ್ವಾಸ್​ ಬಂಧಿತ ಆರೋಪಿ. ಆರೋಪಿ ವಿಶ್ವಾಸ್​ ನಗರದ ಹಲವು ಗಣ್ಯರು ತಮ್ಮ ಫೇಸ್​ಬುಕ್, WhatsApp, ಟ್ವಿಟರ್ ಹಾಗೂ ಇನ್​ಸ್ಟಾಗ್ರಾಮ್ ಖಾತೆಗಳಲ್ಲಿ ಅಪ್​ಲೋಡ್​ ಮಾಡ್ತಿದ್ದ ಫೋಟೋಗಳನ್ನು ಮಾರ್ಫಿಂಗ್ ಮಾಡುತ್ತಿದ್ದ. ಫೋಟೋಗಳನ್ನು ಅಶ್ಲೀಲ‌ವಾಗಿ ಎಡಿಟ್ ಮಾಡಿ ಬಳಿಕ ಗಣ್ಯರಿಗೆ ಅವುಗಳನ್ನು ತೋರಿಸಿ ಹಣಕ್ಕಾಗಿ ಡಿಮ್ಯಾಂಡ್​ ಇಡುತ್ತಿದ್ದನಂತೆ. ದುಡ್ಡು ಕೊಡದಿದ್ದರೆ ಎಡಿಟೆಡ್​ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡೋದಾಗಿ ಬೆದರಿಕೆ ಸಹ ಒಡ್ಡುತ್ತಿದ್ದನಂತೆ. ಅಂದ ಹಾಗೆ, ಈ ಖದೀಮ ಡ್ಯಾಡಿ ಅಬೌವ್ 50 ಅನ್ನೋ WhatsApp ಗ್ರೂಪ್​ಗೆ ಎಂಟ್ರಿ ಕೊಟ್ಟು ಅಲ್ಲಿಂದ ಫೋಟೋ ಎಗರಿಸ್ತಿದ್ದ ಎಂದು ಹೇಳಲಾಗಿದೆ. ಐವತ್ತು ವರ್ಷಕ್ಕಿಂತ ಹೆಚ್ಚಿನ ವಯೋಮಾನದವರಿದ್ದ WhatsApp ಗ್ರೂಪ್​ನಲ್ಲಿ ಪ್ರತಿಷ್ಠಿತ ರಾಜಕಾರಣಿ, ಉದ್ಯಮಿಗಳು ಹಾಗೂ ಪ್ರೊಫೆಸರ್​ಗಳಿಗೆ ಈ ರೀತಿ ಬ್ಲ್ಯಾಕ್​ಮೇಲೆ ಮಾಡೋಕೆ ಮುಂದಾಗಿದ್ದ. ಅಂತೆಯೇ, ನಗರದ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದ ಪ್ರೊಫೆಸರ್ ಒಬ್ಬರ ಪೋಟೋ ಮಾರ್ಫಿಂಗ್ ಮಾಡಿ ಲಕ್ಷಾಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದನಂತೆ.

ವಿಶ್ವಾಸ್​ ಬೆದರಿಕೆ ಒಡ್ಡಿದ್ದ ಹಿನ್ನೆಲೆಯಲ್ಲಿ ಆತ ಹಾಗೂ ಆತನ ಗ್ಯಾಂಗ್​ ವಿರುದ್ಧ ಪ್ರೊಫೆಸರ್ ಒಬ್ಬರು ವೈಟ್​ಫೀಲ್ಡ್ ವಿಭಾಗದ CEN ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರ ಬೆನ್ನಲ್ಲೇ ಪೊಲೀಸರು ಆರೋಪಿ ವಿಶ್ವಾಸ್​ನನ್ನು ಬಂಧಿಸಿದ್ದಾರೆ. ಅರೋಪಿ ನಗರದ ಹೊರವಲಯದ ಚಿಕ್ಕಜಾಲದ ಸಮೀಪ ಕೋಳಿ ಫಾರಂ ಇಟ್ಟುಕೊಂಡಿದ್ದ ಎಂದು ಸಹ ತಿಳಿದುಬಂದಿದೆ. ಸದ್ಯ ಆರೋಪಿಗೆ ಖಾಕಿ ಪಡೆ ವಿಚಾರಣೆ ನಡೆಸುತ್ತಿದ್ದು ಆತನ ಸಹಚರರರ ಪತ್ತೆಗಾಗಿ ಬಲೆ ಬೀಸಿದ್ದಾರೆ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ