AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ‌ವಾಗಿ ಎಡಿಟ್ ಮಾಡಿದ್ದ ಫೋಟೋ ತೋರಿಸಿ ಗಣ್ಯರಿಗೆ ಬ್ಲ್ಯಾಕ್​ಮೇಲ್: ಕೋಳಿ ಫಾರ್ಮ್​ ಓನರ್​ ಅರೆಸ್ಟ್​​

ಬೆಂಗಳೂರು: ನಗರದ ಪ್ರತಿಷ್ಠಿತ ರಾಜಕಾರಣಿಗಳು, ಉದ್ಯಮಿಗಳು ಹಾಗೂ ಪ್ರೊಫೆಸರ್​ಗಳ ಫೋಟೋ ಮಾರ್ಫಿಂಗ್ ಮಾಡಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ವೈಟ್​ಫೀಲ್ಡ್​ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ವಿಶ್ವಾಸ್​ ಬಂಧಿತ ಆರೋಪಿ. ಆರೋಪಿ ವಿಶ್ವಾಸ್​ ನಗರದ ಹಲವು ಗಣ್ಯರು ತಮ್ಮ ಫೇಸ್​ಬುಕ್, WhatsApp, ಟ್ವಿಟರ್ ಹಾಗೂ ಇನ್​ಸ್ಟಾಗ್ರಾಮ್ ಖಾತೆಗಳಲ್ಲಿ ಅಪ್​ಲೋಡ್​ ಮಾಡ್ತಿದ್ದ ಫೋಟೋಗಳನ್ನು ಮಾರ್ಫಿಂಗ್ ಮಾಡುತ್ತಿದ್ದ. ಫೋಟೋಗಳನ್ನು ಅಶ್ಲೀಲ‌ವಾಗಿ ಎಡಿಟ್ ಮಾಡಿ ಬಳಿಕ ಗಣ್ಯರಿಗೆ ಅವುಗಳನ್ನು ತೋರಿಸಿ ಹಣಕ್ಕಾಗಿ ಡಿಮ್ಯಾಂಡ್​ ಇಡುತ್ತಿದ್ದನಂತೆ. ದುಡ್ಡು ಕೊಡದಿದ್ದರೆ ಎಡಿಟೆಡ್​ ಫೋಟೋವನ್ನು ಸಾಮಾಜಿಕ […]

ಅಶ್ಲೀಲ‌ವಾಗಿ ಎಡಿಟ್ ಮಾಡಿದ್ದ ಫೋಟೋ ತೋರಿಸಿ ಗಣ್ಯರಿಗೆ ಬ್ಲ್ಯಾಕ್​ಮೇಲ್: ಕೋಳಿ ಫಾರ್ಮ್​ ಓನರ್​ ಅರೆಸ್ಟ್​​
KUSHAL V
|

Updated on: Oct 10, 2020 | 6:13 PM

Share

ಬೆಂಗಳೂರು: ನಗರದ ಪ್ರತಿಷ್ಠಿತ ರಾಜಕಾರಣಿಗಳು, ಉದ್ಯಮಿಗಳು ಹಾಗೂ ಪ್ರೊಫೆಸರ್​ಗಳ ಫೋಟೋ ಮಾರ್ಫಿಂಗ್ ಮಾಡಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ವೈಟ್​ಫೀಲ್ಡ್​ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ವಿಶ್ವಾಸ್​ ಬಂಧಿತ ಆರೋಪಿ. ಆರೋಪಿ ವಿಶ್ವಾಸ್​ ನಗರದ ಹಲವು ಗಣ್ಯರು ತಮ್ಮ ಫೇಸ್​ಬುಕ್, WhatsApp, ಟ್ವಿಟರ್ ಹಾಗೂ ಇನ್​ಸ್ಟಾಗ್ರಾಮ್ ಖಾತೆಗಳಲ್ಲಿ ಅಪ್​ಲೋಡ್​ ಮಾಡ್ತಿದ್ದ ಫೋಟೋಗಳನ್ನು ಮಾರ್ಫಿಂಗ್ ಮಾಡುತ್ತಿದ್ದ. ಫೋಟೋಗಳನ್ನು ಅಶ್ಲೀಲ‌ವಾಗಿ ಎಡಿಟ್ ಮಾಡಿ ಬಳಿಕ ಗಣ್ಯರಿಗೆ ಅವುಗಳನ್ನು ತೋರಿಸಿ ಹಣಕ್ಕಾಗಿ ಡಿಮ್ಯಾಂಡ್​ ಇಡುತ್ತಿದ್ದನಂತೆ. ದುಡ್ಡು ಕೊಡದಿದ್ದರೆ ಎಡಿಟೆಡ್​ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡೋದಾಗಿ ಬೆದರಿಕೆ ಸಹ ಒಡ್ಡುತ್ತಿದ್ದನಂತೆ. ಅಂದ ಹಾಗೆ, ಈ ಖದೀಮ ಡ್ಯಾಡಿ ಅಬೌವ್ 50 ಅನ್ನೋ WhatsApp ಗ್ರೂಪ್​ಗೆ ಎಂಟ್ರಿ ಕೊಟ್ಟು ಅಲ್ಲಿಂದ ಫೋಟೋ ಎಗರಿಸ್ತಿದ್ದ ಎಂದು ಹೇಳಲಾಗಿದೆ. ಐವತ್ತು ವರ್ಷಕ್ಕಿಂತ ಹೆಚ್ಚಿನ ವಯೋಮಾನದವರಿದ್ದ WhatsApp ಗ್ರೂಪ್​ನಲ್ಲಿ ಪ್ರತಿಷ್ಠಿತ ರಾಜಕಾರಣಿ, ಉದ್ಯಮಿಗಳು ಹಾಗೂ ಪ್ರೊಫೆಸರ್​ಗಳಿಗೆ ಈ ರೀತಿ ಬ್ಲ್ಯಾಕ್​ಮೇಲೆ ಮಾಡೋಕೆ ಮುಂದಾಗಿದ್ದ. ಅಂತೆಯೇ, ನಗರದ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದ ಪ್ರೊಫೆಸರ್ ಒಬ್ಬರ ಪೋಟೋ ಮಾರ್ಫಿಂಗ್ ಮಾಡಿ ಲಕ್ಷಾಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದನಂತೆ.

ವಿಶ್ವಾಸ್​ ಬೆದರಿಕೆ ಒಡ್ಡಿದ್ದ ಹಿನ್ನೆಲೆಯಲ್ಲಿ ಆತ ಹಾಗೂ ಆತನ ಗ್ಯಾಂಗ್​ ವಿರುದ್ಧ ಪ್ರೊಫೆಸರ್ ಒಬ್ಬರು ವೈಟ್​ಫೀಲ್ಡ್ ವಿಭಾಗದ CEN ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರ ಬೆನ್ನಲ್ಲೇ ಪೊಲೀಸರು ಆರೋಪಿ ವಿಶ್ವಾಸ್​ನನ್ನು ಬಂಧಿಸಿದ್ದಾರೆ. ಅರೋಪಿ ನಗರದ ಹೊರವಲಯದ ಚಿಕ್ಕಜಾಲದ ಸಮೀಪ ಕೋಳಿ ಫಾರಂ ಇಟ್ಟುಕೊಂಡಿದ್ದ ಎಂದು ಸಹ ತಿಳಿದುಬಂದಿದೆ. ಸದ್ಯ ಆರೋಪಿಗೆ ಖಾಕಿ ಪಡೆ ವಿಚಾರಣೆ ನಡೆಸುತ್ತಿದ್ದು ಆತನ ಸಹಚರರರ ಪತ್ತೆಗಾಗಿ ಬಲೆ ಬೀಸಿದ್ದಾರೆ.

Follow Us
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ