AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಿಗರಿಂದ ಇಂಗ್ಲೀಷ್, ಸ್ಪಾನಿಷ್ ಕಲಿತು ಮೈಸೂರು ರಾಜವಂಶಸ್ಥರ ಹೆಸರಲ್ಲಿ ವ್ಯಕ್ತಿಯಿಂದ ಯುವತಿಯರಿಗೆ ವಂಚನೆ

ಆರೋಪಿ ಯುಎಸ್ ಇಂಗ್ಲಿಷ್, ಸ್ಪಾನಿಷ್, ಮಳಯಾಳಂ ಮತ್ತು ಕನ್ನಡ ಭಾಷೆಗಳನ್ನು ಮಾತಾಡುತ್ತಾನೆ. ಪಿರಿಯಾಪಟ್ಟದಲ್ಲಿ ಪ್ರವಾಸಿಗಳಾಗಿ ಬರುವವರ ಬಳಿ ಭಾಷೆ ಕಲಿತಿದ್ದ. ಯೂಟ್ಯೂಬ್ ನೋಡಿ ವಂಚನೆ ನಡೆಸುವುದನ್ನು ಕಲಿತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಿದೇಶಿಗರಿಂದ ಇಂಗ್ಲೀಷ್, ಸ್ಪಾನಿಷ್ ಕಲಿತು ಮೈಸೂರು ರಾಜವಂಶಸ್ಥರ ಹೆಸರಲ್ಲಿ ವ್ಯಕ್ತಿಯಿಂದ ಯುವತಿಯರಿಗೆ ವಂಚನೆ
ರಾಜವಂಶಸ್ಥರ ಹೆಸರಲ್ಲಿ ವಂಚನೆ ಎಸಗುತ್ತಿದ್ದ ವ್ಯಕ್ತಿ
TV9 Web
| Edited By: |

Updated on:Jul 12, 2021 | 7:57 PM

Share

ಬೆಂಗಳೂರು: ಮೈಸೂರು ರಾಜವಂಶಸ್ಥರ ಹೆಸರಿನಲ್ಲಿ ವ್ಯಕ್ತಿಯೋರ್ವ ಹಲವು ಯುವತಿಯರಿಗೆ ವಂಚನೆ ಎಸಗಿದ ಪ್ರಕರಣ ಪಿರಿಯಾಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ವ್ಯಕ್ತಿಯೋರ್ವ ಮದುವೆಯಾಗುವುದಾಗಿ ನಂಬಿಸಿ ಯುವತಿಯರಿಂದ ಹಣ ಪಡೆದು ವಂಚನೆ ಎಸಗಿದ್ದು, ವೈಟ್‌ಫೀಲ್ಡ್‌ ಸಿಇಎನ್ ಠಾಣೆಯಲ್ಲಿ ಯುವತಿಯೋರ್ವಳು ದೂರು ನೀಡಿದ್ದಳು. ಆರೋಪಿಯ ನಿಜವಾದ ಹೆಸರು ಮುತ್ತು ಎಂದು ತಿಳಿದುಬಂದಿದ್ದು, ಸಿದ್ದಾರ್ಥ ಎಂಬ ಹೆಸರಿನಲ್ಲಿ ಎಲ್ಲರಿಗೂ ಪರಿಚಯ ಮಾಡಿಕೊಂಡಿದ್ದ ಎಂದು ಬೆಂಗಳೂರಿನ ವೈಟ್‌ಫೀಲ್ಡ್‌ ಡಿಸಿಪಿ ದೇವರಾಜ್‌ ತಿಳಿಸಿದ್ದಾರೆ. ಮೂವರು ಯುವತಿಯರ ಬಳಿ ವೈಯಕ್ತಿಕ ಸಹಾಯ ಬೇಕೆಂದು ಹಣವನ್ನು ಖಾತೆಗೆ ಹಾಕಿಸಿಕೊಳ್ಳುತ್ತಿದ್ದ ಆರೋಪಿ ಒಟ್ಟಾರೆಯಾಗಿ ಮೂರು ಪ್ರಕರಣಗಳಲ್ಲಿ 40 ಲಕ್ಷ ವಂಚನೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವತಿಯರಿಂದ ಹಣ ಹಾಕಿಸಿಕೊಂಡ ಅಕೌಂಟ್ ನಂಬರ್ ಪಡೆದು ಹೋದಾಗ ಪಿರಿಯಾಪಟ್ಟಣದಲ್ಲಿ ಆರೋಪಿಯ ಮಾಹಿತಿ ಸಿಕ್ಕಿತ್ತು. ಆರೋಪಿ ಯುಎಸ್ ಇಂಗ್ಲಿಷ್, ಸ್ಪಾನಿಷ್, ಮಳಯಾಳಂ ಮತ್ತು ಕನ್ನಡ ಭಾಷೆಗಳನ್ನು ಮಾತಾಡುತ್ತಾನೆ. ಪಿರಿಯಾಪಟ್ಟದಲ್ಲಿ ಪ್ರವಾಸಿಗಳಾಗಿ ಬರುವವರ ಬಳಿ ಭಾಷೆ ಕಲಿತಿದ್ದ. ಯೂಟ್ಯೂಬ್ ನೋಡಿ ವಂಚನೆ ನಡೆಸುವುದನ್ನು ಕಲಿತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬೈಲುಕುಪ್ಪೆಯಲ್ಲಿ ಕೂಲಿ ಕೆಲಸ ಮಾಡುವರಿಗೆ 2-3 ಸಾವಿರ ಹಣ ಕೊಟ್ಟು ಅವರ ಅಕೌಂಟ್ ಪಡೆದು ಆರ್​ಟಿಜಿಎಸ್ ಮಾಡುತ್ತಿದ್ದ. ಐಷಾರಾಮಿ‌ ಜೀವನ‌ ಮಾಡ್ತಿದ್ದು, ಗ್ಯಾಂಬ್ಲಿಂಗ್ ಮಾಡ್ತಿದ್ದ. ಯೂಟ್ಯೂಬ್​ನಲ್ಲಿ ಕೆಲ ವಿಡಿಯೋ ನೋಡಿ ಪ್ರೇರೇಪಿತನಾಗಿ ವಂಚನೆ ಮಾಡಲು ಮುಂದಾದೆ ಅಂತ ಹೇಳಿದ್ದಾನೆ. ಎರಡು ವರ್ಷದಿಂದ ಈ ಕೆಲಸ ಮಾಡಿದ್ದಾಗಿ ಮಾಹಿತಿ ಸಿಕ್ಕಿದೆ. ಏಳನೇ ತರಗತಿ ಮುಗಿಸಿ, ಆ ಬಳಿಕ ಶಾಲೆಗೆ ಹೋಗಿರಲಿಲ್ಲ. ಆರೋಪಿಗೆ ಸಹಾಯ ಮಾಡುತ್ತಿದ್ದ ಇನ್ನೋರ್ವನ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: 

ಹಿರಿಯ ಕ್ರೈಂ ವರದಿಗಾರ ಸುನಿಲ್ ಹೆಗ್ಗರವಳ್ಳಿ ಹೃದಯಾಘಾತದಿಂದ ನಿಧನ

Explainer: ಏನಿದು ರಿಪೇರಿ ಮಾಡಿಕೊಳ್ಳುವ ಹಕ್ಕು ಬೇಕೆಂಬ ಹೊಸ ಚಳವಳಿ? ಏನಿದೆ ಅನಿವಾರ್ಯತೆ?

(Man cheats women in the name of Mysore Royal Family in Periyapatna)

Published On - 7:54 pm, Mon, 12 July 21

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್