AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Somwarpet: ಕಾಫಿತೋಟದಲ್ಲಿ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ

ಕಾಫಿತೋಟದಲ್ಲಿ ಎದೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗರ್ವಾಲೆ ಗ್ರಾಮದಲ್ಲಿ ನಡೆದಿದೆ.

Somwarpet: ಕಾಫಿತೋಟದಲ್ಲಿ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ
ನಾಪಂಡ ರಾಜೇಶ್(26) ಆತ್ಮಹತ್ಯೆಗೆ ಶರಣಾದ ಯುವಕ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Jan 15, 2023 | 9:39 PM

Share

ಕೊಡಗು: ಕಾಫಿತೋಟದಲ್ಲಿ ಎದೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗರ್ವಾಲೆ ಗ್ರಾಮದಲ್ಲಿ ನಡೆದಿದೆ. ನಾಪಂಡ ರಾಜೇಶ್(26) ಮೃತ ಯುವಕ. ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ರಾಜೇಶ್ ಕೆಲಸ ಮಾಡುತ್ತಿದ್ದ. ಊರಿಗೆ ಬಂದಿದ್ದಾಗ ಕಾಫಿತೋಟದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಾದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಲತೀರದಲ್ಲಿ ಪ್ರವಾಸಿಗ ಸಾವು

ಕಾರವಾರ: ಗೋಕರ್ಣ ಮುಖ್ಯ ಕಡಲತೀರದಲ್ಲಿ ಪ್ರವಾಸಿಗರೊಬ್ಬರು ಸಾವನ್ನಪ್ಪಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಗೋಕರ್ಣದಲ್ಲಿ ನಡೆದಿದೆ. ಹಾವೇರಿ ಮೂಲದ ಸಂತೋಷ ಗಾಣಿಗೇರ (23) ಸಾವನ್ನಪ್ಪಿದ ಯುವಕ. ನೀರಿನಿಂದ ಮೇಲೆ ಬಂದು ದಡದಲ್ಲಿ ಮಲುಗಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ಘಟನೆ ನಡೆದಿದೆ. ಮೃತ ದೇಹವನ್ನ ಗೋಕರ್ಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನೆ ಮಾಡಲಾಗಿದೆ. ಗೋಕರ್ಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪ್ರೀತಿಸಿ ಮೋಸ ಮಾಡಿದ ಬಿಜೆಪಿ ಕಾರ್ಯಕರ್ತ: ಚಿಕಿತ್ಸೆ ಪಡೆಯುವ ವೇಳೆ ಡೆತ್​ ನೋಟ್​ ಬರೆದಿಟ್ಟು ಬಾಲಕಿ ನಿಧನ

ಪಿಕ್ನಿಕ್‌ಗೆ ತೆರಳಿದ್ದ ಬಸ್ ಪಲ್ಟಿಯಾಗಿ ಐವರು ವಿದ್ಯಾರ್ಥಿಗಳಿಗೆ ಗಾಯ

ಚಿಕ್ಕಮಗಳೂರು: ಪಿಕ್ನಿಕ್‌ಗೆ ತೆರಳಿದ್ದ ಬಸ್ ಪಲ್ಟಿಯಾಗಿ ಐವರು ವಿದ್ಯಾರ್ಥಿಗಳಿಗೆ ಗಾಯವಾಗಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡದಲ್ಲಿ ಸಂಭವಿಸಿದೆ. ದೇವರಮನೆ ಗುಡ್ಡದಿಂದ ಹಿಂದಿರುಗುವಾಗ ಈ ದುರ್ಘಟನೆ ನಡೆದಿದೆ. ಮುತ್ತಿಗೆಪುರದ ಹರೀಶ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿದ್ದ ಬಸ್‌, ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಬಳಿಕ ಬಸ್ ಪಲ್ಟಿಯಾಗಿದೆ. ಗಾಯಾಳು ವಿದ್ಯಾರ್ಥಿಗಳಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ರೇವಣಸಿದ್ದೇಶ್ವರ ಬೆಟ್ಟದಲ್ಲಿ ಯಾರೋ ಹಚ್ಚಿದ ಬೆಂಕಿಗೆ ಆಹುತಿಯಾದ ಪಾದಯಾತ್ರಿ

ತುಮಕೂರು: ರೇವಣಸಿದ್ದೇಶ್ವರ ಬೆಟ್ಟದಲ್ಲಿ ಪಾದಯಾತ್ರಿಯೋರ್ವರು ಬೆಂಕಿಗೆ ಆಹುತಿಯಾದ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹೊನ್ನವಳ್ಳಿ ಬಳಿಯ ಬೆಟ್ಟದಲ್ಲಿ ನಡೆದಿದೆ. ಸಿದ್ದೇಶ್ವರ ಬೆಟ್ಟದ ತಪ್ಪಲಿನಲ್ಲಿ ಕಿಡಿಗೇಡಿಗಳು ಹುಲ್ಲಿಗೆ ಬೆಂಕಿಯಿಟ್ಟಿದ್ದಾರೆ. ದುರ್ವೈವ ಅಂದ್ರೆ ಈ ಬೆಂಕಿ ಕಾಲ್ನಡಿಗೆಯಲ್ಲಿ ಬೆಟ್ಟಕ್ಕೆ ಬಂದಿದ್ದ ಪಾದಯಾತ್ರಿಗೆ ತಗುಲಿ ಸಾವನ್ನಪ್ಪಿದ್ದಾರೆ. ಹೊನ್ನವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಪಾದಯಾತ್ರಿ ಯಾರು?ಎಲ್ಲಿಯವರು ಎಂದು ಮಾಹಿತಿ ತಿಳಿದುಬಂದಿಲ್ಲ.

ಇದನ್ನೂ ಓದಿ: Mangaluru: ಅನ್ಯಕೋಮಿನ ವಿದ್ಯಾರ್ಥಿನಿಗೆ ಚಾಕಲೇಟ್ ಬೇಕಾ ಅಂತ ಕೇಳಿದಾತನಿಗೆ ಥಳಿತ ಪ್ರಕರಣ; 6 ಮಂದಿ ವಿರುದ್ಧ ದೂರು ದಾಖಲು

ಚನ್ನಪಟ್ಟಣದಲ್ಲಿ ಮಚ್ಚು ಹಿಡಿದು ರಸ್ತೆಯಲ್ಲಿ ಓಡಾಡಿದ ಮಾನಸಿಕ ಅಸ್ವಸ್ಥ

ರಾಮನಗರ: ಮಾನಸಿಕ ಅಸ್ವಸ್ಥನೊಬ್ಬ ಮಚ್ಚು ಹಿಡಿದು ರಸ್ತೆಯಲ್ಲಿ ಓಡಾಡಿ ನಿವಾಸಿಗರಲ್ಲಿ ಭಯ ಹುಟ್ಟಿಸಿದ ಘಟನೆ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ. ನಿಮ್ಹಾನ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಬಂದಿದ್ದ ವ್ಯಕ್ತಿ, ಇಂದು ಏಕಾಏಕಿ ಮನೆಯಿಂದ ಮಚ್ಚು ಹಿಡಿದು ಹೊರಬಂದಿದ್ದು, ನಿವಾಸಿಗಳು ಮನೆಗಳಿಂದ ಹೊರಬರಲು ಹೆದರುತ್ತಿದ್ದಾರೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸೇರಿಸುವಂತೆ ಮಾನಸಿಕ ಅಸ್ವಸ್ಥನ ಕುಟುಂಬ ಸದಸ್ಯರಿಗೆ ಪೊಲೀಸರು ಸೂಚನೆ ನೀಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:38 pm, Sun, 15 January 23

ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?