AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ ಮಾಡಿ ಮನೆ ಬಿಟ್ಟ ಮಗ.. ಸಾಲಗಾರರ ಕಾಟ ತಾಳದೆ ವಿಷ ಸೇವಿಸಿ ತಂದೆ ಆತ್ಮಹತ್ಯೆ, ಅಂತ್ಯಸಂಸ್ಕಾರಕ್ಕೆ ಬರುವಂತೆ ತಾಯಿ ಮನವಿ

ಮಗ ಮಂಜುನಾಥ್ 25 ಲಕ್ಷಕ್ಕೂ ಹೆಚ್ಚು ಸಾಲ ಮಾಡಿ ಊರು ಬಿಟ್ಟು ಹೋಗಿದ್ದ. ಮಗ ಸಾಲಮಾಡಿ ಊರು ಬಿಡುತ್ತಲೆ ಪೋಷಕರಿಗೆ ಸಾಲಗಾರರ ಕಾಟ ಹೆಚ್ಚಾಗಿತ್ತು. ಸಾಲಗಾರರ ಕಾಟ ತಾಳಲಾರದೆ ಮಂಜುನಾಥ್ ಮೂರು ತಿಂಗಳ ಹಿಂದೆಯೇ ಊರು ಬಿಟ್ಟಿದ್ದ.

ಸಾಲ ಮಾಡಿ ಮನೆ ಬಿಟ್ಟ ಮಗ.. ಸಾಲಗಾರರ ಕಾಟ ತಾಳದೆ ವಿಷ ಸೇವಿಸಿ ತಂದೆ ಆತ್ಮಹತ್ಯೆ, ಅಂತ್ಯಸಂಸ್ಕಾರಕ್ಕೆ ಬರುವಂತೆ ತಾಯಿ ಮನವಿ
ಮಗ ಮಂಜುನಾಥ್ ಹಾಗೂ ತಂದೆ ಶಿವಣ್ಣ
ಪೃಥ್ವಿಶಂಕರ
|

Updated on:Jan 13, 2021 | 1:19 PM

Share

ಹಾಸನ: ಮಗ ಮಾಡಿದ ಸಾಲದಿಂದಾಗಿ ಸಾಲಗಾರರ ಕಿರುಕುಳ ತಡೆಯಲಾರದೆ ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ತಾಲ್ಲೂಕಿನ ಸಜ್ಜೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಶಿವಣ್ಣ (50) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಮಗ ಮಂಜುನಾಥ್ 25 ಲಕ್ಷಕ್ಕೂ ಹೆಚ್ಚು ಸಾಲ ಮಾಡಿ ಊರು ಬಿಟ್ಟು ಹೋಗಿದ್ದ. ಮಗ ಸಾಲ ಮಾಡಿ ಊರು ಬಿಡುತ್ತಲೆ ಪೋಷಕರಿಗೆ ಸಾಲಗಾರರ ಕಾಟ ಹೆಚ್ಚಾಗಿತ್ತು. ಸಾಲಗಾರರ ಕಾಟ ತಾಳಲಾರದೆ ಮಂಜುನಾಥ್ ಮೂರು ತಿಂಗಳ ಹಿಂದೆಯೇ ಊರು ಬಿಟ್ಟಿದ್ದ. ಹೀಗಾಗಿ ಸಾಲಗಾರರು ಮನೆ ಬಳಿಗೆ ಬಂದು ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದರು.

ಸಾಲಗಾರರ ಕಾಟ ತಾಳಲಾರದೆ ಮನನೊಂದ ಶಿವಣ್ಣ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿಯ ಸಾವಿನಿಂದ ಕಂಗ್ಗೆಟ್ಟಿರುವ ಮಡದಿ, ತಂದೆ ಅಂತ್ಯಸಂಸ್ಕಾರಕ್ಕೆ ಆಗಮಿಸುವಂತೆ ಮಗನಿಗೆ ಕಣ್ಣೀರ ಮನವಿ ಮಾಡುತ್ತಿದ್ದಾರೆ. ತಾಯಿ ಹಾಗೂ ಅಕ್ಕ ಎಲ್ಲಿದ್ದರೂ ಬಂದು ತಂದೆ ಅಂತ್ಯಸಂಸ್ಕಾರ ಮಾಡುವಂತೆ ಮಂಜುನಾಥ್​ನನ್ನು ಬೇಡಿಕೊಳ್ಳುತ್ತಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಮೀಟರ್‌ಬಡ್ಡಿ ದಂಧೆಕೋರರ ಕಿರುಕುಳಕ್ಕೆ ನಂದಿ ಗ್ರಾಮದ ಅರ್ಚಕ ಬಲಿ

Published On - 1:16 pm, Wed, 13 January 21

ಆಂಗ್ಲರಿಗೆ ಉಚಿತವಾಗಿ ತನ್ನ ವಿಕೆಟ್ ನೀಡಿದ ಶುಭ್​ಮನ್ ಗಿಲ್
ಆಂಗ್ಲರಿಗೆ ಉಚಿತವಾಗಿ ತನ್ನ ವಿಕೆಟ್ ನೀಡಿದ ಶುಭ್​ಮನ್ ಗಿಲ್
ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ