AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ ಮಾಡಿ ಮನೆ ಬಿಟ್ಟ ಮಗ.. ಸಾಲಗಾರರ ಕಾಟ ತಾಳದೆ ವಿಷ ಸೇವಿಸಿ ತಂದೆ ಆತ್ಮಹತ್ಯೆ, ಅಂತ್ಯಸಂಸ್ಕಾರಕ್ಕೆ ಬರುವಂತೆ ತಾಯಿ ಮನವಿ

ಮಗ ಮಂಜುನಾಥ್ 25 ಲಕ್ಷಕ್ಕೂ ಹೆಚ್ಚು ಸಾಲ ಮಾಡಿ ಊರು ಬಿಟ್ಟು ಹೋಗಿದ್ದ. ಮಗ ಸಾಲಮಾಡಿ ಊರು ಬಿಡುತ್ತಲೆ ಪೋಷಕರಿಗೆ ಸಾಲಗಾರರ ಕಾಟ ಹೆಚ್ಚಾಗಿತ್ತು. ಸಾಲಗಾರರ ಕಾಟ ತಾಳಲಾರದೆ ಮಂಜುನಾಥ್ ಮೂರು ತಿಂಗಳ ಹಿಂದೆಯೇ ಊರು ಬಿಟ್ಟಿದ್ದ.

ಸಾಲ ಮಾಡಿ ಮನೆ ಬಿಟ್ಟ ಮಗ.. ಸಾಲಗಾರರ ಕಾಟ ತಾಳದೆ ವಿಷ ಸೇವಿಸಿ ತಂದೆ ಆತ್ಮಹತ್ಯೆ, ಅಂತ್ಯಸಂಸ್ಕಾರಕ್ಕೆ ಬರುವಂತೆ ತಾಯಿ ಮನವಿ
ಮಗ ಮಂಜುನಾಥ್ ಹಾಗೂ ತಂದೆ ಶಿವಣ್ಣ
ಪೃಥ್ವಿಶಂಕರ
|

Updated on:Jan 13, 2021 | 1:19 PM

Share

ಹಾಸನ: ಮಗ ಮಾಡಿದ ಸಾಲದಿಂದಾಗಿ ಸಾಲಗಾರರ ಕಿರುಕುಳ ತಡೆಯಲಾರದೆ ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ತಾಲ್ಲೂಕಿನ ಸಜ್ಜೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಶಿವಣ್ಣ (50) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಮಗ ಮಂಜುನಾಥ್ 25 ಲಕ್ಷಕ್ಕೂ ಹೆಚ್ಚು ಸಾಲ ಮಾಡಿ ಊರು ಬಿಟ್ಟು ಹೋಗಿದ್ದ. ಮಗ ಸಾಲ ಮಾಡಿ ಊರು ಬಿಡುತ್ತಲೆ ಪೋಷಕರಿಗೆ ಸಾಲಗಾರರ ಕಾಟ ಹೆಚ್ಚಾಗಿತ್ತು. ಸಾಲಗಾರರ ಕಾಟ ತಾಳಲಾರದೆ ಮಂಜುನಾಥ್ ಮೂರು ತಿಂಗಳ ಹಿಂದೆಯೇ ಊರು ಬಿಟ್ಟಿದ್ದ. ಹೀಗಾಗಿ ಸಾಲಗಾರರು ಮನೆ ಬಳಿಗೆ ಬಂದು ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದರು.

ಸಾಲಗಾರರ ಕಾಟ ತಾಳಲಾರದೆ ಮನನೊಂದ ಶಿವಣ್ಣ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿಯ ಸಾವಿನಿಂದ ಕಂಗ್ಗೆಟ್ಟಿರುವ ಮಡದಿ, ತಂದೆ ಅಂತ್ಯಸಂಸ್ಕಾರಕ್ಕೆ ಆಗಮಿಸುವಂತೆ ಮಗನಿಗೆ ಕಣ್ಣೀರ ಮನವಿ ಮಾಡುತ್ತಿದ್ದಾರೆ. ತಾಯಿ ಹಾಗೂ ಅಕ್ಕ ಎಲ್ಲಿದ್ದರೂ ಬಂದು ತಂದೆ ಅಂತ್ಯಸಂಸ್ಕಾರ ಮಾಡುವಂತೆ ಮಂಜುನಾಥ್​ನನ್ನು ಬೇಡಿಕೊಳ್ಳುತ್ತಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಮೀಟರ್‌ಬಡ್ಡಿ ದಂಧೆಕೋರರ ಕಿರುಕುಳಕ್ಕೆ ನಂದಿ ಗ್ರಾಮದ ಅರ್ಚಕ ಬಲಿ

Published On - 1:16 pm, Wed, 13 January 21

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ