Bangalore Crime: ಬನಶಂಕರಿ 6ನೇ ಹಂತದ ಚಿಕ್ಕೇಗೌಡನಪಾಳ್ಯದ ಬಳಿ ಅರೆಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ

ಬೆಂಗಳೂರಿನ ತುರಹಳ್ಳಿ ಫಾರೆಸ್ಟ್​ನಲ್ಲಿ ಅರೆಸುಟ್ಟ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆಯಾಗಿದೆ. ಮೃತ ದೇಹ ಯಾರದ್ದು ಎಂಬ ಸುಳಿವು ಸಿಗದ ಕಾರಣ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Bangalore Crime: ಬನಶಂಕರಿ 6ನೇ ಹಂತದ ಚಿಕ್ಕೇಗೌಡನಪಾಳ್ಯದ ಬಳಿ ಅರೆಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ
ಸಾಂದರ್ಭಿಕ ಚಿತ್ರ
Follow us
| Updated By: ganapathi bhat

Updated on:Mar 28, 2021 | 5:17 PM

ಬೆಂಗಳೂರು: ನಗರದ ಬನಶಂಕರಿ 6ನೇ ಹಂತದ ಚಿಕ್ಕೇಗೌಡನಪಾಳ್ಯದ ಬಳಿ ತುರಹಳ್ಳಿ ಫಾರೆಸ್ಟ್​ನಲ್ಲಿ ಅರೆಸುಟ್ಟ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆಯಾಗಿದೆ. ಕೊಲೆ ಮಾಡಿ ಮೃತ ದೇಹಕ್ಕೆ ಬೆಂಕಿ ಹಚ್ಚಿರುವ ಶಂಕೆ ಮೂಡಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ 20 ಲೀಟರ್​ ಡೀಸೆಲ್ ಕ್ಯಾನ್ ಪತ್ತೆಯಾಗಿದೆ. ಮೇಲ್ನೋಟಕ್ಕೆ ಪುರುಷ ದೇಹ ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ. 35 ರಿಂದ 40 ವರ್ಷದ ಪುರುಷ ಎಂದು ಗುರುತಿಸಲಾಗಿದೆ. ತುರಹಳ್ಳಿ ಫಾರೆಸ್ಟ್​ ಬಳಿ ಮದ್ಯದ ಬಾಟಲ್​, ಸಿಗರೇಟ್​ ತುಂಡುಗಳು ಪತ್ತೆಯಾಗಿರುವ ಕಾರಣ ನಿನ್ನೆ(ಮಾರ್ಚ್​ 27) ತಡರಾತ್ರಿಯವರೆಗೂ ಫಾರೆಸ್ಟ್​ನಲ್ಲಿ ಪಾರ್ಟಿ ಮಾಡಿರುವುದು ಪರಿಶೀಲನೆಯಲ್ಲಿ ತಿಳಿದು ಬಂದಿದೆ. ಸದ್ಯ ಮೃತದೇಹ ಯಾರದ್ದು ಎಂಬ ಬಗ್ಗೆ ಮಾಹಿತಿ ಇಲ್ಲದ ಕಾರಣ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಆರ್.ಟಿ. ನಗರದಲ್ಲಿ ಬಾರ್ ಡ್ಯಾನ್ಸರ್ ಬರ್ಬರ ಹತ್ಯೆ; ಕೊಲೆಯ ಹಿಂದಿನ ಕಾರಣ ನಿಗೂಢ

Bangalore Crime: ದಂಪತಿ ಜಗಳದ ವೇಳೆ ಮಧ್ಯಪ್ರವೇಶಿಸಿದ ಅತ್ತೆ ಮೇಲೆ ಹಲ್ಲೆಗೈದ ಸೊಸೆ

Published On - 5:15 pm, Sun, 28 March 21